Navaratri: ಉಚ್ಚಿಲ ದಸರಾ 2024ಕ್ಕೆ ಸಿದ್ಧತೆ ಪೂರ್ಣ


Team Udayavani, Oct 3, 2024, 12:18 AM IST

Navaratri: ಉಚ್ಚಿಲ ದಸರಾ 2024ಕ್ಕೆ ಸಿದ್ಧತೆ ಪೂರ್ಣNavaratri: ಉಚ್ಚಿಲ ದಸರಾ 2024ಕ್ಕೆ ಸಿದ್ಧತೆ ಪೂರ್ಣ

ಕಾಪು: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ, ಕರ್ನಾಟಕದ ಕೊಲ್ಲಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ. 3ರಿಂದ 12ರ ವರೆಗೆ ಜರಗಲಿರುವ ಉಡುಪಿ ಉಚ್ಚಿಲ ದಸರಾ 2024ಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ.

ಅ. 3ರಂದು ಅಧಿಕೃತ ಚಾಲನೆ: ಅ. 3ರಂದು ಬೆಳಗ್ಗೆ 9.30ಕ್ಕೆ ಶಾಲಿನಿ ಜಿ. ಶಂಕರ್‌ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಮತ್ತು ಶಾರದ ಮಾತೆಯ ವಿಗ್ರಹ ಪ್ರತಿಷ್ಠಾಪನೆ, 10.30ಕ್ಕೆ ಜಿಲ್ಲಾಧಿಕಾರಿ ಸಹಿತ ಗಣ್ಯರು ಉಚ್ಚಿಲ ದಸರಾಕ್ಕೆ ಚಾಲನೆ ನೀಡಲಿದ್ದಾರೆ.

10.45ಕ್ಕೆ ವಸ್ತು ಪ್ರದರ್ಶನ ಉದ್ಘಾಟನೆ, 11 ಗಂಟೆಗೆ ದ.ಕ. ಮೊಗವೀರ ಮಹಾಜನ ಸಂಘದ ಶತಮಾನೋತ್ಸವದ ಸವಿನೆನಪಿನಲ್ಲಿ ನಿರ್ಮಿಸಲಾದ ನವೀಕೃತ ಕಾರ್ಯಾಲಯ ಉದ್ಘಾಟನೆ, ಸಂಜೆ 6.30ಕ್ಕೆ ವಿದ್ಯುತ್‌ ದೀಪಾಲಂಕಾರ ಉದ್ಘಾಟನೆಗೊಳ್ಳಲಿದೆ.

ಪ್ರತಿದಿನ ಚಂಡಿಕಾ ಹೋಮ, ಅನ್ನಸಂತರ್ಪಣೆ
ಅ. 3ರಿಂದ 12ರ ವರೆಗೆ ಪ್ರತಿದಿನ ಬೆಳಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಭಜನೆ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾವಿರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಶ್ರೀದುರ್ಗಾ ಕಲೊ³àಕ್ತ ಪೂಜೆ, ಪ್ರಸಾದ ವಿತರಣೆ, ಆಕರ್ಷಕ ಲೇಸರ್‌ ಶೋ ಮತ್ತು ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆಯಲಿವೆ.

ಅ.12ರಂದು ಶೋಭಾಯಾತ್ರೆ
ಅ. 12ರಂದು ಸಂಜೆ ಉಚ್ಚಿಲ – ಎರ್ಮಾಳು – ಉಚ್ಚಿಲ – ಮೂಳೂರು – ಕಾಪುವಿ ವರೆಗೆ ವೈಭವದ ಶೋಭಾಯಾತ್ರೆ ನಡೆದು ಕಾಪು ಲೈಟ್‌ ಹೌಸ್‌ ಬಳಿಯ ಕಡಲ ಕಿನಾರೆಯಲ್ಲಿ ಸುಮಂಗಲೆಯರಿಂದ ಮಹಾಮಂಗಳಾರತಿ, ಬೃಹತ್‌ ಗಂಗಾರತಿ, ಲೇಸರ್‌ ಶೋ, ಮ್ಯೂಸಿಕಲ್‌ ನೈಟ್‌ ಸಹಿತವಾಗಿ ರಾತ್ರಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ನಡೆಯಲಿದೆ.

ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದೊಂದಿಗೆ ನಡೆಯುವ 3ನೇ ವರ್ಷದ ಉಚ್ಚಿಲ ದಸರಾ ಪ್ರಯುಕ್ತ ಅ.3ರಂದು ಸಂಜೆ ನೃತ್ಯ ಸ್ಪರ್ಧೆ, ಅ. 5ರಂದು ಬೆಳಗ್ಗೆ ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಮಧ್ಯಾಹ್ನ ಚಿತ್ರಕಲಾ ಸ್ಪರ್ಧೆ, ಸಂಜೆ ಸಾಮೂಹಿಕ ಕುಣಿತ ಭಜನೆ, ಶ್ರೀ ರಾಮ ಹನುಮಂತ ನೃತ್ಯ ರೂಪಕ, ಅ. 6ರಂದು ಬೆಳಗ್ಗೆ ಕುಸ್ತಿ ಸ್ಪರ್ಧೆ, ಮಧ್ಯಾಹ್ನ ಹೆಣ್ಮಕ್ಕಳ ಹುಲಿಕುಣಿತ ಸ್ಪರ್ಧೆ, ಸಂಜೆ ಸಾಮೂಹಿಕ ದಾಂಡಿಯಾ ನೃತ್ಯ, ವಿಸ್ಮಯ ಜಾದೂ, ಅ. 7ರಂದು ಮಧ್ಯಾಹ್ನ ಮಹಿಳೆಯರಿಗೆ ಮತ್ತು ಪುರುಷರಿಗೆ ರಂಗೋಲಿ ಸ್ಪರ್ಧೆ, ಶತವೀಣಾವಲ್ಲರಿ, ಅ. 10ರಂದು ದೇಹದಾರ್ಢ್ಯ ಸ್ಪರ್ಧೆ, ಅ. 11ರಂದು ಅಜಯ್‌ ವಾರಿಯರ್‌ ಮತ್ತು ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.