Famous Goddess Temple: ನೀಲಪರ್ವತ ತೀರ್ಥ ಚಂಡಿದೇಗುಲ

ನವರಾತ್ರಿ- ನವದೇವಿ; ಶುಂಭ-ನಿಶುಂಭರ ಸಂಹಾರದ ಬಳಿಕ ಚಂಡಿಕಾ ವಿರಮಿಸಿದ್ದ ನೀಲ ಪರ್ವತ, ಭಕ್ತರ ಬೇಡಿಕೆ ಈಡೇರಿಸುವ ಸಿದ್ಧಪೀಠ

Team Udayavani, Oct 3, 2024, 7:12 AM IST

Chandi-Degula

ಇಂದಿನಿಂದ ನಾಡಿನೆಲ್ಲೆಡೆ ನವರಾತ್ರಿಯ ಸಂಭ್ರಮ. ಆಶ್ವಯುಜ ಶುದ್ಧ ಪ್ರತಿಪದೆಯಂದು ಆರಂಭವಾಗುವ ಈ ಹಬ್ಬ ದೇಶದೆಲ್ಲೆಡೆ ಅತ್ಯಂತ ವೈಭವ, ಸಡಗರಗಳಿಂದ ಆಚರಿಸಲ್ಪಡುತ್ತದೆ. ದೇಶಾದ್ಯಂತ ಇರುವ ದುರ್ಗಾದೇವಿಯ ದೇವಾಲಯಗಳಲ್ಲಿ ಈ ಹಬ್ಬವನ್ನು ವಿಶೇಷ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ನವರಾತ್ರಿಯ ಈ ಸಂದರ್ಭದಲ್ಲಿ ದೇಶದ ಒಂಬತ್ತು ಪ್ರಸಿದ್ಧ ದೇವಿ ದೇವಾಲಯಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸುವ “ನವರಾತ್ರಿ- ನವದೇವಿ’ ಲೇಖನ ಮಾಲಿಕೆ ಇಂದಿನಿಂದ.

ಉತ್ತರಾಖಂಡದ ಪವಿತ್ರ ಯಾತ್ರಾಸ್ಥಳವಾದ ಹರಿದ್ವಾರದಲ್ಲಿರುವ ಚಂಡಿ ದೇಗುಲ ದೇವೀ ಆರಾಧನೆಯ ಪ್ರಸಿದ್ಧ ತಾಣವಾಗಿದೆ. ಪ್ರತೀ ವರ್ಷ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿನ ಚಂಡಿ ದೇವಿಯ ದರುಶನ ಪಡೆಯುವುದರ ಜತೆಯಲ್ಲಿ ಹರಕೆ, ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ.

ದಕ್ಷಿಣ ಹಿಮಾಲಯದ ಸಾಲಿನ ಪೂರ್ವ ಭಾಗದ ಶಿವಾಲಿಕ ಪರ್ವತದ ಸಾಲಿನಲ್ಲಿರುವ ನೀಲ ಪರ್ವತದ ಬಳಿ ಈ ದೇವಸ್ಥಾನವಿದೆ. 1029ರಲ್ಲಿ ಕಾಶ್ಮೀರದ ರಾಜನಾಗಿದ್ದ ಸುಚತ್‌ ಸಿಂಗ್‌ ಈ ದೇವಾಲಯವನ್ನು ನಿರ್ಮಿಸಿದನು ಎನ್ನಲಾಗುತ್ತದೆ. ಆದರೆ ಇಲ್ಲಿರುವ ಚಂಡಿ ದೇವಿಯ ಮುಖ್ಯ ದೇವಿಯ ಮೂರ್ತಿಯನ್ನು 8ನೇ ಶತಮಾನದಲ್ಲಿ ಆದಿ ಶಂಕರಾಚಾರ್ಯರು ಪ್ರತಿಷ್ಠಾಪಿಸಿದರು ಎನ್ನಲಾಗುತ್ತದೆ. ಹರಿದ್ವಾರದ ಪಂಚತೀರ್ಥ ಪುಣ್ಯಕ್ಷೇತ್ರಗಳಲ್ಲಿ ಈ ದೇವಾಲಯವು ಒಂದಾಗಿದೆ. ಹಾಗಾಗಿ ಇದನ್ನು ನೀಲ ಪರ್ವತ ತೀರ್ಥ ಎಂದು ಹೇಳಲಾಗುತ್ತದೆ.

ಚಂಡಿಕಾ ದೇವಿಯು ಶುಂಭ-ನಿಶುಂಭರನ್ನು ಸಂಹರಿಸಿದ ಬಳಿಕ ನೀಲ ಪರ್ವತದಲ್ಲಿ ಸ್ವಲ್ಪ ಸಮಯ ವಿರಮಿಸಿದಳು ಎನ್ನುವ ಪುರಾಣ ಈ ಕ್ಷೇತ್ರಕ್ಕಿದೆ. ಭಕ್ತರು ಈ ಕ್ಷೇತ್ರವನ್ನು ತಮ್ಮ ಬೇಡಿಕೆಗಳನ್ನು ಈಡೇರಿಸುವ ಸಿದ್ಧ ಪೀಠವಾಗಿ ಕಾಣುತ್ತಾರೆ. ಇಲ್ಲಿನ ಮಾನಸ ದೇವಿ ಹಾಗೂ ಮಾಯಾ ದೇವಿ ದೇಗುಲದಲ್ಲೂ ಈ ಸಿದ್ಧಪೀಠವನ್ನು ಕಾಣಬಹುದು. ನವರಾತ್ರಿ ಹಾಗೂ ಹರಿದ್ವಾರದಲ್ಲಿ ನಡೆಯುವ ಕುಂಭಮೇಳದ ಸಮಯದಲ್ಲಿ ಸಾವಿರಾರು ಭಕ್ತರು ಈ ದೇಗುಲಕ್ಕೆ ಭೇಟಿ ನೀಡುತ್ತಾರೆ. ಧಾರ್ಮಿಕ ಪ್ರವಾಸಿ ತಾಣವಾಗಿಯೂ ಇದು ಗುರುತಿಸಿಕೊಂಡಿದ್ದು, ಚಂಡಿ ದೇಗುಲದ ಸುತ್ತಮುತ್ತಲಿನ ವಿಹಂಗಮ ದೃಶ್ಯಾವಳಿ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್‌ಬಾಸ್‌ನಿಂದ ಹೊರ ಹೋಗ್ತೇನೆ – ಜಗದೀಶ್

BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್‌ಬಾಸ್‌ನಿಂದ ಹೊರ ಹೋಗ್ತೇನೆ – ಜಗದೀಶ್

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-10-01 at 9.22.19 PM

Navaratri: ನವ ಮಹಾಭಾರತ- ದ್ರೌಪದಿಯ ನಿಟ್ಟುಸಿರಿಗೆ ಕೊನೆ ಎಂದು…? ಬದಲಾಗದ ಹೆಣ್ಣಿನ ಬವಣೆ

T-20-Captains

Womens T20 World Cup: ಪುರುಷರು ಆಯ್ತು ಈಗ ವನಿತಾ ಕ್ರಿಕೆಟ್‌ ಸಮರ

Navarathri

Dasara: ನವರೂಪ ಧಾರಿಣಿ ದೇವಿ ಆರಾಧನೆಯ ಪುಣ್ಯಕಾಲ ನವರಾತ್ರಿ

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Lal-Shastri

Shastriji Jayanthi: ಮಕ್ಕಳಿಗೆ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿ ಹಾಕಿಕೊಟ್ಟ ಬುನಾದಿ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

1

Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!

6-ಗಾನಗಾವಾತಹಿ

ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.