Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ


Team Udayavani, Oct 3, 2024, 6:00 AM IST

supreme-Court

ಸಾರ್ವಜನಿಕ ಹಿತಕ್ಕೆ ಬಾಧಕವಾಗಿರುವ ಎಲ್ಲ ಒತ್ತುವರಿ ಮತ್ತು ಅಕ್ರಮ ನಿರ್ಮಾಣಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲೇಬೇಕು ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ವಿವಿಧ ಉದ್ದೇಶಗಳಿಗಾಗಿ ಮೀಸಲಿರಿಸಲಾದ ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ ಧಾರ್ಮಿಕ ಕಟ್ಟಡಗಳ ಸಹಿತ ಎಲ್ಲ ತೆರನಾದ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲೇ ಬೇಕು. ಸಾರ್ವಜನಿಕರ ಸುರಕ್ಷೆಯ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಯೇ ಇಲ್ಲ ಎಂದು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠ ಖಂಡತುಂಡವಾಗಿ ಹೇಳಿದೆ.

ಅಕ್ರಮ ಅಥವಾ ಅನಧಿಕೃತ ಕಟ್ಟಡ ಯಾ ನಿರ್ಮಾಣಗಳನ್ನು ತೆರವುಗೊಳಿಸುವ ವಿಷಯದಲ್ಲಿ ಯಾವುದೇ ಜಾತಿ, ಧರ್ಮ, ರಾಜಕೀಯ ಹಿತಾಸಕ್ತಿಯ ಪ್ರಶ್ನೆಯೇ ಇಲ್ಲ. ಅಕ್ರಮವನ್ನು ಸಮರ್ಥಿಸಿಕೊಳ್ಳಲಾಗದು ಎಂದು ಸ್ಪಷ್ಟಪಡಿಸುವ ಮೂಲಕ ಸುಪ್ರೀಂ ಕೋರ್ಟ್‌ ಮತ್ತೂಮ್ಮೆ ಅಕ್ರಮ ನಿರ್ಮಾಣಕಾರರಿಗೆ ಬಿಸಿ ಮುಟ್ಟಿಸು ವುದರ ಜತೆಯಲ್ಲಿ ಇಂತಹ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಸರಕಾರ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಹೊಣೆಗಾರಿಕೆಯನ್ನು ಜ್ಞಾಪಿಸಿದೆ.

ಬುಲ್ಡೋಜರ್‌ ನ್ಯಾಯದ ಕುರಿತಾದ ಅರ್ಜಿಯ ವಿಚಾರಣೆ ವೇಳೆ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಯಾವುದೇ ಅಪರಾಧ ಪ್ರಕರಣ ಗಳ ಆರೋಪಿಗಳಿಗೆ ಸೇರಿದ ಮನೆ, ಕಟ್ಟಡಗಳನ್ನು ನೆಲಸಮ ಗೊಳಿಸುವುದರ ಕುರಿತಂತೆ ತನ್ನ ಆಕ್ಷೇಪವನ್ನು ಮತ್ತೂಮ್ಮೆ ಪುನರುತ್ಛರಿಸಿದೆ. ಈ ಅರ್ಜಿಯ ಕುರಿತಾಗಿನ ಪ್ರತಿಯೊಂದು ವಿಚಾರಣೆಯಲ್ಲೂ ಸುಪ್ರೀಂ ನ್ಯಾಯ ಪೀಠ, ಈ ವಿಚಾರದಲ್ಲಿ ದೇಶದ ಸಂವಿಧಾನ ಮತ್ತು ಕಾನೂನಿಗೆ ಬದ್ಧವಾಗಿ ಕಾರ್ಯಾಚರಿಸುವಂತೆ ರಾಜ್ಯ ಸರಕಾರಗಳಿಗೆ ಕಿವಿಮಾತು ಹೇಳುತ್ತಲೇ ಬಂದಿದೆ.

ಕಳೆದ ಕೆಲವು ವರ್ಷಗಳಿಂದೀಚೆಗೆ ದೇಶದ ಕೆಲವು ರಾಜ್ಯಗಳಲ್ಲಿ ಇಂತಹ ಕಾರ್ಯಾಚರಣೆ ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಸತತವಾಗಿ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸುತ್ತಲೇ ಬಂದಿದೆ. ಇದೇ ವೇಳೆ ಒತ್ತುವರಿ, ಅಕ್ರಮ ನಿರ್ಮಾಣಗಳ ತೆರವಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಪ್ರತೀ ಬಾರಿಯೂ ಒತ್ತಿ ಹೇಳುತ್ತಲೇ ಬಂದಿರುವ ನ್ಯಾಯಪೀಠ ಈ ಬಾರಿ ಇನ್ನೂ ಒಂದು ಹೆಜ್ಜೆ ಒಂದು ಮುಂದೆ ಹೋಗಿ ಅಕ್ರಮ ನಿರ್ಮಾಣ ತೆರವು ಸಂಬಂಧ ದೇಶದ ಎಲ್ಲ ನಾಗರಿಕರಿಗೂ ಅನ್ವಯವಾಗುವಂಥ ಸಮಾನ ಮಾರ್ಗಸೂಚಿ ಯನ್ನು ರೂಪಿ ಸುವ ಮಾತನ್ನಾಡಿದೆ.

ಸುಪ್ರೀಂ ಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಕೇಂದ್ರ ಮತ್ತು ಎಲ್ಲ ರಾಜ್ಯ ಸರಕಾರಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳು ಗಂಭೀರವಾಗಿ ಪರಿಗಣಿಸಬೇಕು. ಅಕ್ರಮ ಅಥವಾ ಅನಧಿಕೃತ ಕಟ್ಟಡ ಯಾ ನಿರ್ಮಾಣಗಳ ತೆರವು ವಿಚಾರದಲ್ಲಿ ಸಂಬಂಧಪಟ್ಟ ಇಲಾಖೆಗಳು ಮತ್ತು ಅಧಿಕಾರಿಗಳು ಒಂದಿಷ್ಟು ದಾಕ್ಷಿಣ್ಯ ಪ್ರವೃತ್ತಿಯನ್ನು ತನ್ನದಾಗಿಸಿಕೊಂಡಿ ರುವುದರಿಂದಾಗಿ ಈ ಬಗೆಗಿನ ಕಾನೂನು ನಿಯಮಾವಳಿಗಳು ಸಮರ್ಪಕವಾಗಿ ಪಾಲನೆ ಯಾಗುತ್ತಿಲ್ಲ. ಇಂತಹ ಬಹುತೇಕ ಪ್ರಕರಣಗಳಲ್ಲಿ ರಾಜಕೀಯ, ಧಾರ್ಮಿಕ ಹಿತಾಸಕ್ತಿಯ ಕೈಮೇಲಾಗುತ್ತಿದ್ದು, ಸಾರ್ವಜನಿಕರ ಅಳಲಿಗೆ ಸ್ಪಂದಿಸುವ ಕಾರ್ಯವಾಗುತ್ತಿಲ್ಲ.

ನಗರ ಪ್ರದೇಶಗಳಲ್ಲಂತೂ ಈ ಒತ್ತುವರಿ, ಅಕ್ರಮ ನಿರ್ಮಾಣಗಳು ಸಾರ್ವಜನಿಕರ ಸುಗಮ ಸಂಚಾರಕ್ಕೆ ಮಾತ್ರವಲ್ಲದೆ ಜನಜೀವನದ ಮೇಲೂ ಭಾರೀ ಪರಿಣಾಮ ಬೀರುತ್ತಿದೆ. ಆದರೆ ಆಗೊಮ್ಮೆ ಈಗೊಮ್ಮೆ ಬಡಪಾಯಿ ಬೀದಿ ಬದಿ ವ್ಯಾಪಾರಿಗಳ ತೆರವಿಗಷ್ಟೇ ಕಾರ್ಯಾಚರಣೆ ಸೀಮಿತ ಗೊಳ್ಳುತ್ತಿದೆಯೇ ಹೊರತು ಉಳ್ಳವರ ಅತಿಕ್ರಮಣ, ಅನಧಿಕೃತ ನಿರ್ಮಾಣಗಳತ್ತ ಸ್ಥಳೀಯಾಡಳಿತ ಸಂಸ್ಥೆಗಳು ದೃಷ್ಟಿಯನ್ನೇ ಹರಿಸುವುದಿಲ್ಲ.

ಇಷ್ಟು ಮಾತ್ರವಲ್ಲದೆ ಈ ಅಕ್ರಮ ನಿರ್ಮಾಣಗಳು ನಗರದ ಸೌಂದರ್ಯಕ್ಕೂ ಕಳಂಕ ತಂದೊಡ್ಡುತ್ತಿ ದೆಯಲ್ಲದೆ ಮೂಲ ಸೌಕರ್ಯ ಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆ ಯಲ್ಲಿ ಸುಪ್ರೀಂ ಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯ ಹೆಚ್ಚಿನ ಪ್ರಾಮುಖ್ಯ ಪಡೆಯುತ್ತದೆ. ಇನ್ನಾದರೂ ಸರಕಾರ ಅಕ್ರಮ ಕಟ್ಟಡ ಮತ್ತು ಅತಿಕ್ರಮಣಗಳ ತೆರವು ವಿಚಾರದಲ್ಲಿ ಕಠಿನ ನಿಲುವನ್ನು ತಾಳಬೇಕು.

ಟಾಪ್ ನ್ಯೂಸ್

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಎಲ್ಲೆಡೆ ಚರ್ಚೆ

World War 3…?: ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

WhatsApp Image 2024-10-01 at 9.22.19 PM

Navaratri: ನವ ಮಹಾಭಾರತ- ದ್ರೌಪದಿಯ ನಿಟ್ಟುಸಿರಿಗೆ ಕೊನೆ ಎಂದು…? ಬದಲಾಗದ ಹೆಣ್ಣಿನ ಬವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

WHO

Permanent Member: ಭದ್ರತಾ ಮಂಡಳಿ ಖಾಯಂ ಸದಸ್ಯತ್ವ: ಭಾರತಕ್ಕೆ ಆನೆಬಲ

Fake-Medicine

Quality Poor Medicine: ಮಾರುಕಟ್ಟೆಗೆ ನಕಲಿ ಔಷಧ ಪ್ರವೇಶ ತಪ್ಪಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಎಲ್ಲೆಡೆ ಚರ್ಚೆ

World War 3…?: ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.