Court Order: ಚೆಸ್ ಪಟು ಸಂಜನಾಗೆ 10 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಆದೇಶ
ಕ್ರೀಡಾ ಕೋಟಾದಡಿ ಚೆಸ್ ಆಟಗಾರ್ತಿ ಸಂಜನಾಗೆ ಸೀಟು ನಿರಾಕರಣೆ, ಅರ್ಹತೆ ಇದ್ದರೂ ಮೆಡಿಕಲ್ ಸೀಟ್ ನೀಡದ ಸರಕಾರ
Team Udayavani, Oct 3, 2024, 6:40 AM IST
ಬೆಂಗಳೂರು: ಕ್ರೀಡಾ ಕೋಟಾದಡಿ ಅರ್ಹತೆ ಇದ್ದರೂ ವೈದ್ಯಕೀಯ ಸೀಟು ನೀಡದ ಕಾರಣಕ್ಕೆ ಅಂತಾರಾಷ್ಟ್ರೀಯ ಚೆಸ್ ಪಟು ಸಂಜನಾ ರಘುನಾಥ್ ಅವರಿಗೆ ಪರಿಹಾರ ರೂಪದಲ್ಲಿ 10 ಲಕ್ಷ ರೂ. ಪಾವತಿಸುವಂತೆ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ತಮಗೆ ಆಗಿರುವ ಅನ್ಯಾಯ ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಸಂಜನಾ ರಘುನಾಥ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ಮುಖ್ಯ ನ್ಯಾ| ಎನ್.ವಿ. ಆಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಪ್ರಕಟಿಸಿದೆ.
ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ ಬಳಿಕ ತೀರ್ಪು ಪ್ರಕಟಿಸಿದ ನ್ಯಾಯಪೀಠ, ಅರ್ಜಿದಾರರು 2018ರಲ್ಲಿ ಏಷ್ಯಾ ಯುವ ಚೆಸ್ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ್ದಾರೆ. ಹಾಗಾಗಿ ಅವರು ಕ್ರೀಡಾ ಕೋಟಾದ ಸೀಟು ಪಡೆಯುವ ಅರ್ಹತೆಗಳಲ್ಲಿ ಪಿ-1 ಶ್ರೇಣಿಗೆ ಅರ್ಹರಿದ್ದಾರೆ. ಆದರೆ ತಪ್ಪಾಗಿ ಅವರಿಗೆ ಪಿ-5 ಶ್ರೇಣಿ ನೀಡಲಾಗಿದೆ. ನಿಯಮಗಳ ಪ್ರಕಾರ ಅದು ತಪ್ಪು ಮತ್ತು ಆ ವರ್ಗೀಕರಣ ಊರ್ಜಿತವಾಗದು. ವರ್ಗೀಕರಣ ಸಂಬಂಧ 2023ರ ಜೂ.23ರಂದು ಹೊರಡಿಸಿರುವ ಸುತ್ತೋಲೆ 2006ರ ನಿಯಮಕ್ಕೆ ವಿರುದ್ಧವಾಗಿದೆ ಎಂದು ಆದೇಶದಲ್ಲಿ ಹೇಳಿದೆ.
ಪಿ-1 ಶ್ರೇಣಿಯ ಅಭ್ಯರ್ಥಿಯಾಗಿ ಪ್ರವೇಶ ಪಡೆಯಲು ಅರ್ಜಿದಾರರನ್ನು ಅವಕಾಶದಿಂದ ವಂಚಿತರನ್ನಾಗಿ ಮಾಡಲಾಗಿದೆ. ಹಾಗಾಗಿ ಅವರು 10 ಲಕ್ಷ ರೂ. ಪರಿಹಾರಕ್ಕೆ ಅರ್ಹರು, ಸರಕಾರ ಆರು ವಾರಗಳಲ್ಲಿ ಪರಿಹಾರದ ಮೊತ್ತವನ್ನು ಪಾವತಿಸಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ನಿರ್ದೇಶನ ನೀಡಿದೆ.
ಏನಿದು ಪ್ರಕರಣ?
ಸಂಜನಾ ರಘುನಾಥ್ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚೆಸ್ ಟೂರ್ನಿಗಳಲ್ಲಿ ಭಾಗವಹಿಸಿದ್ದರು. 2019ರಲ್ಲಿ 13 ವರ್ಷದೊಳಗಿನ 32ನೇ ರಾಷ್ಟ್ರೀಯ ಬಾಲಕಿಯರ ಚೆಸ್ ಚಾಂಪಿಯನ್ಶಿಪ್, ಏಷ್ಯಾ ಯುವ ಚೆಸ್ ಚಾಂಪಿಯನ್ಶಿಪ್ ಹಾಗೂ ಕಾಮನ್ವೆಲ್ತ್ ಚೆಸ್ ಚಾಂಪಿಯನ್ಶಿಪ್ಗ್ಳಲ್ಲಿ ಭಾಗವಹಿಸಿದ್ದರು. ವೈದ್ಯೆಯಾಗುವ ಆಕಾಂಕ್ಷೆ ಹೊಂದಿದ್ದ ಅವರು 2022-23ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕಿಂಗ್ ಗಳಿಸಿದ್ದರು. ಆದರೆ ಅವರ ಅರ್ಹತೆ ತಕ್ಕಂತೆ ಕೆಇಎ ಶ್ರೇಣಿ ನೀಡದ ಕಾರಣ ಅವರು ಸೀಟು ವಂಚಿತರಾಗಿ ಹೈಕೋರ್ಟ್ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!
ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!
ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.