Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸಿಎಂ
ರಾಜ್ಯ ಸರಕಾರ ಅಸ್ಥಿರಗೊಳಿಸಲು ಸಂಚು, ಬಿಜೆಪಿಗೆ ಜೆಡಿಎಸ್ ಸಾಥ್: ಸಿದ್ದರಾಮಯ್ಯ
Team Udayavani, Oct 3, 2024, 3:30 AM IST
ಬೆಂಗಳೂರು: ಸರಕಾರವನ್ನು ಅಸ್ಥಿರಗೊಳಿಸುವ ಮತ್ತು ನಮ್ಮ ತೇಜೋವಧೆ ಮಾಡಲು ಹೊರಟ ಬಿಜೆಪಿ ಷಡ್ಯಂತ್ರ ಸೋಲಿಸಲು ಪಕ್ಷದ ಕಾರ್ಯಕರ್ತರು ಎಲ್ಲ ರೀತಿಯಲ್ಲಿ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿನ ಸಾವಿರಾರು ಕುಟುಂಬಗಳಿಗೆ ಸರಕಾರ ನೆರವಾಗಿದೆ. ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು, ಇದರಿಂದ ಪ್ರತಿ ಕುಟುಂಬಗಳಿಗೆ ವಾರ್ಷಿಕ ತಲಾ 40-50 ಸಾವಿರ ರೂ. ದೊರೆಯುತ್ತಿದೆ.
ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದೆಲ್ಲ ಹೇಳಿದ್ದ ವಿಪಕ್ಷಗಳ ಲೆಕ್ಕಾಚಾರ ತಲೆಕೆಳಗಾಗಿದೆ. ಪರಿಣಾಮ ಹೊಟ್ಟೆ ಉರಿಯಿಂದ ನಮ್ಮ ಮೇಲೆ ಗೂಬೆ ಕೂರಿಸುವ ಮತ್ತು ತೇಜೋವಧೆ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಅದಕ್ಕೆ ಜೆಡಿಎಸ್ ಕೂಡ ಕೈಜೋಡಿಸುತ್ತಿದ್ದು, ಕೇಂದ್ರ ಕೂಡ ಶಾಮೀಲಾಗಿದೆ. ಆದರೆ, ಈ ಷಡ್ಯಂತ್ರ ಸೋಲಿಸಲು ಪಕ್ಷದ ಕಾರ್ಯಕರ್ತರು ಎಲ್ಲ ರೀತಿಯಲ್ಲಿ ಸಜ್ಜಾಗಬೇಕು ಎಂದು ಹೇಳಿದರು.
ಬಿಜೆಪಿ ಯಾವತ್ತೂ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿದೆ. ಗಾಂಧಿ ಭಾರತವನ್ನು ಅವರು ಗೋಡ್ಸೆ ಭಾರತ ಮಾಡಲು ಹೊರಟಿದ್ದಾರೆ. ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವುದು ಅವರ ಉದ್ದೇಶವಾಗಿದೆ. ಯಾವತ್ತೂ ಅವರಿಗೆ ಗಾಂಧಿ ನಾಯಕ ಅಲ್ಲವೇ ಅಲ್ಲ. ಗೋಡ್ಸೆ ಅವರ ನಾಯಕ ಎಂದು ವಾಗ್ಧಾಳಿ ನಡೆಸಿದ ಸಿಎಂ, ಐಕ್ಯತೆ, ಅಹಿಂಸೆಗೆ ಒತ್ತುಕೊಟ್ಟ ಗಾಂಧಿ ಪ್ರಜ್ಞೆಯೇ ದೇಶದ ಪ್ರಜ್ಞೆಯಾಗಿದೆ. ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಗೋಡ್ಸೆ ಭಾರತವಾಗಲು ಬಿಡಬಾರದು ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಹೆಸರು ಅಜರಾಮರವಾಗಿದೆ. ಅದರಂತೆ ಕಾಂಗ್ರೆಸ್ ಕೂಡ ಯಾವಾಗಲೂ ಶಾಶ್ವತವಾಗಿರುತ್ತದೆ. ಕೆಲವರು ಇದನ್ನು ನಾಶ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ಯಾರಿಂದಲೂ ಅದನ್ನು ತೊಡೆದುಹಾಕಲು ಸಾಧ್ಯವಿಲ್ಲ ಎಂದು ಹೇಳಿದರು. ಇದಕ್ಕೂ ಮುನ್ನ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
MUDA Case: ಮಧ್ಯರಾತ್ರಿವರೆಗೆ ಕಡತ ವಿಲೇವಾರಿ ಮಾಡಿದ ಸಿಎಂ ಸಿದ್ದರಾಮಯ್ಯ?
Congress session: ಡಿಸೆಂಬರ್ನಲ್ಲಿ ಬೆಳಗಾವಿಗೆ ಬರಾಕ್ ಒಬಾಮಾ?
Kalaburagi: 77 ಪರೀಕ್ಷೆ ಬರೆದ ಕನ್ನಡ ಶಿಕ್ಷಕನಿಂದ ವಿಶ್ವದಾಖಲೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಇಂದಿನಿಂದ ಅರಬ್ ನಾಡಲ್ಲಿ ವನಿತಾ ಟಿ20 ವಿಶ್ವಕಪ್ ಹವಾ
Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ
Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು
Test Bowling Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಮರಳಿ ನಂಬರ್ 1
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.