MUDA: ನಿವೇಶನ ಪಡೆಯುವಾಗ ಆತ್ಮಸಾಕ್ಷಿ ಇರಲಿಲ್ಲವೇ: ಬಿಜೆಪಿ ತಿರುಗೇಟು

ನಿಮ್ಮ ನಡವಳಿಕೆ, ಭಂಡತನ, ತಪ್ಪು ನಿರ್ಧಾರಗಳೇ ನಿಮಗೆ ಮುಂದಿನ ದಿನಗಳಲ್ಲಿ ಕಂಟಕ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Team Udayavani, Oct 3, 2024, 6:32 AM IST

Joshi–vija

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ “ಆತ್ಮಸಾಕ್ಷಿ’ ಮಾತಿಗೆ ಗುದ್ದು ಕೊಟ್ಟಿರುವ ಬಿಜೆಪಿ ನಾಯಕರು, ನಿಮ್ಮ ಆತ್ಮಸಾಕ್ಷಿಗೆ ಮಂಕು ಕವಿದಿದೆಯೇ? ನಿವೇಶನ ಪಡೆಯುವಾಗ ಆತ್ಮಸಾಕ್ಷಿ ಇರಲಿಲ್ಲವೇ ಎಂದು ಕುಟುಕಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಮಾತಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಿದ್ದರಾಮಯ್ಯ ಅವರೇ ನಿಮ್ಮ ಆತ್ಮಸಾಕ್ಷಿಗೆ ಮಂಕು ಕವಿದಿದೆಯೇ? ಗಾಂಧಿ ಜಯಂತಿಯಂದು ಮಹಾ ಗಾಂಧಿವಾದಿ ಎಂಬಂತೆ ಮಾತನಾಡುವ ನೀವು ನಿಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಬಡಿದೆಬ್ಬಿಸಿ ಕೇಳಿ. ವಾಲ್ಮೀಕಿ ನಿಗಮ, ಮುಡಾದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಸಿರುವ ತಾವು ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಯೋಗ್ಯರೇ? ಎಂದು ಆತ್ಮಸಾಕ್ಷಿಯನ್ನು ಕೇಳಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಭಂಡತನ, ತಪ್ಪು ನಿರ್ಧಾರಗಳೇ ನಿಮಗೆ ಕಂಟಕ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಸಿಎಂ ಸಿದ್ದರಾಮಯ್ಯರನ್ನು ಮಾತಿನಿಂದಲೇ ಕುಟುಕಿದ್ದು, ಹಿಂದೆಯೇ ನಿವೇಶನಗಳನ್ನು ಹಿಂದಿರುಗಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಕೈಗೆತ್ತಿಕೊಂಡಾಗಲೇ ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ, ನಿಮ್ಮ ನಡವಳಿಕೆ, ಭಂಡತನ, ತಪ್ಪು ನಿರ್ಧಾರಗಳೇ ನಿಮಗೆ ಮುಂದಿನ ದಿನಗಳಲ್ಲಿ ಕಂಟಕವಾಗಲಿದೆ ಎಂದು ಎಚ್ಚರಿಸಿದರು.

ಒಂದೆಡೆ ಲೋಕಾಯುಕ್ತ ಪೊಲೀಸರು ಎಫ್ಐಆರ್‌ ದಾಖಲಿಸಿ ತನಿಖೆ ಆರಂಭ ಮಾಡಿದ್ದಾರೆ. ಇನ್ನೊಂದೆಡೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಂತದಲ್ಲಿ ನಿವೇಶನಗಳನ್ನು ವಾಪಸ್‌ ಕೊಟ್ಟಿರುವುದು ಹಾಗೂ ತತ್‌ಕ್ಷಣವೇ ಅದರ ಖಾತೆಗಳನ್ನು ರದ್ದುಪಡಿಸಿದ ಮುಡಾದ ಕ್ರಮ ಸರಿಯಲ್ಲ. ಈ ಪ್ರಕ್ರಿಯೆ ಕೂಡ ಕಾನೂನುಬಾಹಿರ. ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

“ನಿವೇಶನ ಹಿಂದಿರುಗಿಸುತ್ತೀರಾ ಎಂಬ ಪ್ರಶ್ನೆಗೆ ಪತ್ರಕರ್ತರನ್ನೇ ಪ್ರಶ್ನಿಸಿದ್ದ ಸಿಎಂ, ಯಾಕೆ ಕೊಡಬೇಕು? 62 ಕೋಟಿ ರೂ. ಕೊಡಿಸುತ್ತೀರಾ ಎಂದಿದ್ದವರು ಈಗ ದಿಕ್ಕು ತಪ್ಪಿಸಲು ಅಥವಾ ಗೊಂದಲಕ್ಕೆ ದೂಡಲು ನಿವೇಶನ ವಾಪಸ್‌ ಕೊಟ್ಟಿದ್ದಾರೆ. ಅವರಿಗೀಗ 62 ಕೋಟಿ ರೂ. ಬೇಡವೇ?”
– ಸಿ.ಟಿ. ರವಿ, ವಿಧಾನಪರಿಷತ್‌ ಸದಸ್ಯ

“ಯಡಿಯೂರಪ್ಪ ವಿರುದ್ಧ ಆರೋಪ ಬಂದಾಗ ರಾಜೀನಾಮೆಗೆ ಆಗ್ರಹಿಸಿದ್ದ ಸಿದ್ದರಾಮಯ್ಯ ಈಗ ಅದೇ ರೀತಿಯ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆಂಬುದು ನನ್ನ ಭಾವನೆ. ಇಡೀ ದೇಶದಲ್ಲಿ ಕರ್ನಾಟಕದ ಇವತ್ತಿನ ವಿಚಾರಗಳು ಚರ್ಚೆ ಆಗುತ್ತಿವೆ.”
-ಕೋಟ ಶ್ರೀನಿವಾಸ ಪೂಜಾರಿ, ಸಂಸದ

ಟಾಪ್ ನ್ಯೂಸ್

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ ಶಾಸಕ ರೆಡ್ಡಿ

ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ: ಶಾಸಕ ರೆಡ್ಡಿ

MYsuru-Dasara

Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ

Somannna-DVG

Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

4

Bengaluru: ಬರ್ತ್‌ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.