ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ: ಶಾಸಕ ರೆಡ್ಡಿ
ಜನಾರ್ದನ್ ರೆಡ್ಡಿ ದಂಪತಿಗಳಿಂದ ಶ್ರೀ ಚನ್ನಬಸವ ಸ್ವಾಮಿಗೆ ಹರಕೆ ಸಲ್ಲಿಕೆ
Team Udayavani, Oct 3, 2024, 8:44 AM IST
ಗಂಗಾವತಿ: ಜನ್ಮವಿರುವ ವರೆಗೂ ಗಂಗಾವತಿ ಜನತೆಯನ್ನು ಮರೆಯುವುದಿಲ್ಲ. ಸುಪ್ರೀಂಕೋರ್ಟ್ ಬಳ್ಳಾರಿ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದು ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯಲ್ಲಿ ತಮಗೆ ನಂಬಿಕೆ ಇದೆ ಎಂದು ಶಾಸಕ ಹಾಗೂ ಬಿಜೆಪಿಯ ಹಿರಿಯ ಮುಖಂಡ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಅವರು ನಗರದ ಶ್ರೀ ಚನ್ನಬಸವ ಸ್ವಾಮಿ ಮಠದಲ್ಲಿ ಬೆಳ್ಳಿ ರಥದ ಹರಕೆಯನ್ನು ಪತ್ನಿ ಅರುಣ ಲಕ್ಷ್ಮಿ ಜೊತೆಗೂಡಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ತಮ್ಮ ಹಾಗೂ ತಮ್ಮ ಕುಟುಂಬದ ತೇಜು ಅವರೆಗಾಗಿ ಅಂದಿನ ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ನಡೆಸಿ ತಮ್ಮನ್ನು ಜೈಲಿಗೆ ಕಳಿಸಿತ್ತು ನಂತರ ದಿನಗಳಲ್ಲಿ ನ್ಯಾಯಾಂಗ ಹೋರಾಟದ ಮೂಲಕ ತಮಗೆ ಗೆಲುವು ಸಿಕ್ಕಿದ್ದು ಗಂಗಾವತಿ ಜನರು ರಾಜಕೀಯ ಮರು ಪ್ರವೇಶ ನೀಡಿದ್ದಾರೆ. ಗಂಗಾವತಿ ಜನರ ಋಣವನ್ನು ಎಂದಿಗೂ ಮರೆಯುವುದಿಲ್ಲ ಮತ್ತು ಸಾಯುವ ತನಕ ಮರೆಯುವುದಿಲ್ಲ.
ತಾವು ಸದ್ಯ ಬಳ್ಳಾರಿ ಪ್ರವೇಶ ಮಾಡುತ್ತಿದ್ದು ಮುಂಬರುವ ದಿನಗಳಲ್ಲಿ ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸುವ ಮೂಲಕ ಬಿಜೆಪಿಗೆ ಬಲವನ್ನು ತಂದು ಕೊಡಲಾಗುತ್ತದೆ. ಜೊತೆಗೆ ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ ಸ್ಥಾನಗಳ ಪಡೆದು ಅಧಿಕಾರಕ್ಕೆ ತರಲಾಗುತ್ತದೆ.
ಪಕ್ಷದ ಮುಖಂಡರ ತಮ್ಮ ಬಗ್ಗೆ ಇಟ್ಟಿರುವ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ. ಕಾರ್ಯಕರ್ತರು ಮತ್ತು ಗಂಗಾವತಿ ಭಾಗದ ಜನರ ಬೇಡಿಕೆಯನ್ನು ಆದ್ಯತೆ ಮೇರೆಗೆ ಪೂರೈಸಲಾಗುತ್ತದೆ.
ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿ ಕ್ಷೇತ್ರ ಮತ್ತು ಗಂಗಾವತಿಯನ್ನು ಮಾದರಿಯ ಕ್ಷೇತ್ರವನ್ನಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿ ಸರ್ವಶವಾಗಿದ್ದು ,ರಾಜ್ಯವನ್ನು ಅಭಿವೃದ್ಧಿ ರಹಿತ ಮಾಡುತ್ತಿದ್ದಾರೆ.
ಹೈಕೋರ್ಟ್ ಸಿಎಂ ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸಲು ಆದೇಶ ನೀಡಿದ್ದು ಭ್ರಷ್ಟಾಚಾರ ಬಯಲಿಗೆ ಬರಲಿದೆ ಮುಂಬರುವ ದಿನಗಳಲ್ಲಿ ಸಿಎಂ ರಾಜೀನಾಮೆ ನೀಡಲಿದ್ದಾರೆಂದರು. ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು ಕಾರ್ಯಕರ್ತರು ರೆಡ್ಡಿ ಅಭಿಮಾನಿಗಳು ಇದ್ದರು. ಸಂಜೆ ಕಿಷ್ಕಿಂಧಾ ಅಂಜನಾದ್ರಿ ಮತ್ತು ಪಂಪ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: Test Bowling Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಮರಳಿ ನಂಬರ್ 1
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ
MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ
Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!
ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.