Gundlupete: ಕಂದಕದ ಒಳಗೆ ಬಿದ್ದು ಗಂಡಾನೆ ಸಾವು
Team Udayavani, Oct 3, 2024, 10:24 AM IST
ಗುಂಡ್ಲುಪೇಟೆ (ಚಾಮರಾಜನಗರ): ಆನೆ ಟ್ರಂಚ್(ಕಂದಕ) ಒಳಗೆ ಬಿದ್ದು ಗಂಡಾನೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಹೊಸಪುರ ಗ್ರಾಮದ ಬಳಿ ಆ.3 ರಂದು ನಡೆದಿದೆ.
ಸುಮಾರು 25-30 ವರ್ಷದ ಗಂಡಾನೆಯು ಹೊಸಪುರ ಕಾಡಂಚಿನಲ್ಲಿ ಅರಣ್ಯ ಇಲಾಖೆ ತೆಗೆಗಿದ್ದ ಕಂದಕ್ಕೆ ಬಿದ್ದು ಮೃತಪಟ್ಟಿದೆ. ರೈತರು ಜಮೀನುಗಳಿಗೆ ಹೋಗುವಾಗ ಆನೆ ಸಾವನ್ನಪ್ಪಿರುವುದು ತಿಳಿದು ಬಂದಿದ್ದು, ಬುಧವಾರ ತಡರಾತ್ರಿ ಅರಣ್ಯ ದಾಟುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಆನೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈದ್ಯರ ತಪಾಸಣೆ ಬಳಿಕ ಗೊತ್ತಾಗಲಿದೆ ಎಂದು ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು.
ಸೋಲಾರ್ ತಂತಿ ಸ್ಪರ್ಶದಿಂದ ಆನೆ ಸಾವು-ಶಂಕೆ: ಕಾಡಾನೆಯು ಅರಣ್ಯ ದಾಟುವ ವೇಳೆ ಕಂದಕದ ಬಳಿ ಅಳವಡಿಕೆ ಮಾಡಿದ್ದ ಸೋಲಾರ್ ತಂತಿಯಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ಟ್ರಂಚ್ ಒಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಕೆಲ ರೈತ ಮುಖಂಡರು ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss Kannada 11: ಚೈತ್ರಾ ಕುಂದಾಪುರರನ್ನು ಹೊರಗಿಡಿ; ಭೋಜರಾಜ್ ಆಗ್ರಹ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.