ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ
Team Udayavani, Oct 3, 2024, 10:36 AM IST
ಹೈದರಾಬಾದ್: ತೆಲುಗು ನಟ ಅಕ್ಕಿನೇನಿ ನಾಗ ಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ಅವರ ವಿಚ್ಛೇದನಕ್ಕೆ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ (KTR) ಅವರೇ ಕಾರಣವೆಂದು ಸಚಿವೆ ಕೊಂಡಾ ಸುರೇಖಾ ಬುಧವಾರ ಆರೋಪ ಮಾಡಿದ್ದು ಇದಾದ ಒಂದು ದಿನದ ಬಳಿಕ ತನ್ನ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ.
ಬುಧವಾರ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವೆ ಕೊಂಡಾ ಸುರೇಖಾ, ನಾಗ ಚೈತನ್ಯ ಮತ್ತು ನಟಿ ಸಮಂತಾ ಜೀವನದಲ್ಲಿ ಹುಳಿ ಹಿಂಡಿದ್ದೆ ಕೆಟಿಆರ್ ಅಷ್ಟು ಮಾತ್ರವಲ್ಲದೆ ಸಮಂತಾ, ನಾಗಚೈತನ್ಯ ಮಾತ್ರವಲ್ಲದೆ ಟಾಲಿವುಡ್ ನ ಹಲವು ನಟಿಯರ ಫೋನ್ ಟ್ರ್ಯಾಪ್ ಮಾಡಿ ಅವರನ್ನು ಡ್ರಗ್ಸ್ ದಂಧೆಗೆ ಬಳಸಿ ಅವರ ಬಾಳನ್ನು ಹಾಳು ಮಾಡಿದ್ದಾನೆ ಎಂದು ಸಚಿವೆ ಆರೋಪಿಸಿದ್ದರು.
ನನ್ನ ಹೆಸರನ್ನು ರಾಜಕೀಯದಿಂದ ದೂರವಿಡಿ ಎಂದ ಸಮಂತಾ:
ಇತ್ತ ಕೊಂಡಾ ಸುರೇಖಾ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಪ್ರತಿಕ್ರಿಯೆ ನೀಡಿ ಸಚಿವೆ ಹೇಳಿಕೆ ವಿರುದ್ಧ ಕಿಡಿಕಾರಿದ್ದು ನನ್ನ ಹೆಸರನ್ನು ರಾಜಕೀಯಕ್ಕೆ ತರಬೇಡಿ ಎಂದು ಹೇಳಿಕೊಂಡಿದ್ದರು ಇದಾದ ಬೆನ್ನಲ್ಲೇ ಸಚಿವೆ ನಟಿ ಸಮಂತಾ ಬಳಿ ಕ್ಷಮೆ ಕೇಳಿ ತನ್ನ ಹೇಳಿಕೆಯನ್ನು ಹಿಂಪಡೆದಿದ್ದಾರೆ ಅಲ್ಲದೆ ಈ ಕುರಿತು ಟ್ವೀಟ್ ಮಾಡಿದ ಸಚಿವೆ ನನ್ನ ಹೇಳಿಕೆಯಿಂದ ನಟಿ ಸಮಂತಾ ಅವರಿಗೆ ನೋವಾಗಿದ್ದರೆ ಈ ಕೂಡಲೇ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ, ಅಲ್ಲದೆ ನನ್ನ ಉದ್ದೇಶ ಯಾರ ಮನಸ್ಸನ್ನು ನೋಯಿಸುವುದು ಆಗಿರಲಿಲ್ಲ ಬದಲಾಗಿ ಒಬ್ಬ ನಾಯಕ ಓರ್ವ ಮಹಿಯನ್ನು ಯಾವ ಮಟ್ಟದಲ್ಲಿ ನೋಡುತಿದ್ದಾನೆ ಎಂಬುದನ್ನು ಗೊತ್ತುಪಡಿಸುವುದು ಆಗಿತ್ತು ಹೊರತು ನಿಮ್ಮ ಭಾವನೆಗೆ ಧಕ್ಕೆ ತರುವುದು ಆಗಿರಲಿಲ್ಲ ಅಲ್ಲದೆ ನೀವು ಸ್ವಾವಲಂಬಿಯಾಗಿ ಬೆಳೆದು ಬಂದ ರೀತಿಯ ಬಗ್ಗೆ ನನಗೆ ಅಭಿಮಾನ ಮಾತ್ರವಲ್ಲ ಅದು ಆದರ್ಶವೂ ಆಗಿದೆ. ಎಂದು ಬರೆದುಕೊಂಡಿದ್ದಾರೆ.
నా వ్యాఖ్యల ఉద్దేశం మహిళల పట్ల ఒక నాయకుడి చిన్నచూపు ధోరణిని ప్రశ్నించడమే కానీ మీ @Samanthaprabhu2 మనోభావాలను దెబ్బతీయడం కాదు.
స్వయం శక్తితో మీరు ఎదిగిన తీరు నాకు కేవలం అభిమానం మాత్రమే కాదు.. ఆదర్శం కూడా..
— Konda surekha (@iamkondasurekha) October 2, 2024
ಸಚಿವೆ ವಿರುದ್ಧ ಕೆಟಿಆರ್ ಲೀಗಲ್ ನೋಟಿಸ್:
ಇನ್ನು ಸಮಂತಾ ಮತ್ತು ನಟ ನಾಗ ಚೈತನ್ಯ ಬೇರೆಯಾಗಲು ನಾನೇ ಕರಣ ಎಂದು ಸಚಿವೆ ಕೊಂಡಾ ಸುರೇಖಾ ಹೇಳಿರುವುದು ರಾಜಕೀಯ ಪ್ರೇರಿತ, ಅಲ್ಲದೆ ರಾಜಕೀಯದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಸಚಿವೆ ಈ ಮಟ್ಟಕ್ಕೆ ಇಳಿಯಬಾರದಾಗಿತ್ತು, ಇನ್ನೊಬ್ಬರ ಭಾವನೆಗಳಿಗೆ ಧಕ್ಕೆ ತಂದು ತಾನು ಸಂತೋಷದಿಂದ ಇರಲು ಸಚಿವೆ ಈ ರೀತಿ ಹೇಳಿಕೆ ನೀಡಿದ್ದಾರೆ, ಅಲ್ಲದೆ ನನ್ನ ಮೇಲೆ ಮಾಡಿರುವ ಆರೋಪಗಳಿಗೆ ಸಚಿವೆ ಬಳಿ ಸಾಕ್ಷಿ ಇದೆಯೇ, ಒಂದು ವೇಳೆ ಸಾಕ್ಷಾಧಾರ ಇದ್ದಲ್ಲಿ ಅದನ್ನು ಎಲ್ಲರ ಗಮನಕ್ಕೆ ತರಲಿ, ಅದನ್ನು ಬಿಟ್ಟು ಸುಖಾಸುಮ್ಮನೆ ಸುಳ್ಳು ಆರೋಪಗಳನ್ನು ಮಾಡುವುದು ಸರಿಯಲ್ಲ, ಹಾಗಾಗಿ ಈ ಕೂಡಲೇಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಇಲ್ಲದಿದ್ದಲ್ಲಿ ಸಚಿವೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Indian 3: ʼಇಂಡಿಯನ್ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?
Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್ ಆಕ್ರೋಶ
ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ
Vettaiyan Trailer: ಪಾಪಿಗಳ ಎನ್ಕೌಂಟರ್ ಮಾಡಲು ಖಾಕಿ ತೊಟ್ಟು ಬಂದ ʼತಲೈವಾʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss Kannada 11: ಚೈತ್ರಾ ಕುಂದಾಪುರರನ್ನು ಹೊರಗಿಡಿ; ಭೋಜರಾಜ್ ಆಗ್ರಹ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.