Mysore; ದಸರಾ ಮಹೋತ್ಸವಕ್ಕೆ ಚಾಲನೆ-ಚುನಾಯಿತ ಸರ್ಕಾರವನ್ನ ಅಸ್ಥಿರಗೊಳಿಸಬೇಡಿ: ಹಂಪನಾ

ಪುನಃ ನಡೆಯುವ ಚುನಾವಣೆಗಳು ದೊಡ್ಡ ಹೊರೆಯಾಗಲಿವೆ.

Team Udayavani, Oct 3, 2024, 12:05 PM IST

Mysore; ದಸರಾ ಮಹೋತ್ಸವಕ್ಕೆ ಚಾಲನೆ-ಚುನಾಯಿತ ಸರ್ಕಾರವನ್ನ ಅಸ್ಥಿರಗೊಳಿಸಬೇಡಿ: ಹಂಪನಾ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾ ಉತ್ಸವಕ್ಕೆ ಗುರುವಾರ (ಅ.03) ನಾಡೋಜ ಡಾ.ಹಂಪ ನಾಗರಾಜಯ್ಯ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು.

ಸರ್ಕಾರ ಅಸ್ಥಿರತೆ ಮಾಡಬೇಡಿ:
ಸರ್ಕಾರಗಳನ್ನ ಉರುಳಿಸುವ ದುರಾಲೋಚನೆ ಬರದಂತೆ ತಡೆಯಬೇಕು. ಚುನಾಯಿತ ಸರ್ಕಾರಗಳನ್ನ ಉಳಿಸುವ ಚಿಂತನೆ ಆಗಬೇಕು ಲೋಕಾಂಬಿಕೆಯೂ ಅಂತಹ ಚಿಂತನೆ ಮೂಡಿಸಲಿ ಎಂದು ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಹಂಪನಾ ಅವರು ಈ ಆಶಯ ವ್ಯಕ್ತಪಡಿಸಿದರು.

ಕೆಡವುದು ಸುಲಭ, ಕಟ್ಟುವುದು ಕಷ್ಟ ಮೊದಲೇ ದೊಡ್ಡ ಹೊರೆಗಳಿಂದ ಶ್ರೀಸಾಮಾನ್ಯರು ಬಳಲಿ ಬಸವಳಿದಿದ್ದಾರೆ ಪುನಃ ನಡೆಯುವ ಚುನಾವಣೆಗಳು ದೊಡ್ಡ ಹೊರೆಯಾಗಲಿವೆ. ಜನರಿಗೆ ಇನ್ನಷ್ಟು ಭಾರ ಹೇರಿದರೆ ಕುಸಿದುಬಿಡುತ್ತಾನೆ. ಯಾವ ಪಕ್ಷವೂ ಅಧಿಕಾರದಲ್ಲಿ ಶಾಶ್ವತವಾಗಿ ಇರಲು ಸಾಧ್ಯವಿಲ್ಲ.

ಚಕ್ರಾರ ಪಂಕ್ತಿರಿವ ಗಚ್ಛತಿ ಭಾಗ್ಯ ಪಂಕ್ತಿಃ… ಸೋತ ಪಕ್ಷವು ಮತ್ತೆ ಅಧಿಕಾರಕ್ಕೆ ಬರಬಹುದು ಜನಮನವನ್ನು ತಮ್ಮ ಪರವಾಗಿ ಒಲಿಸಿಕೊಳ್ಳಲು ಐದು ವರ್ಷ ಸಜ್ಜಾಗಬಹುದು ಎಂಬ ಎಚ್ಚರಿಕೆ ನೀಡಿದರು.

ಸಿಎಂಗಿಂತ ಮೊದಲೇ ಪುಷ್ಪಾರ್ಚನೆ ಮಾಡಿದ ಡಿಸಿಎಂ‌ ಡಿ.ಕೆ ಶಿವಕುಮಾರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಹೆಚ್ ಸಿ ಮಹದೇವಪ್ಪ, ಕೆ ವೆಂಕಟೇಶ್, ಹೆಚ್ ಕೆ ಪಾಟೀಲ್, ಶಿವರಾಜ್ ತಂಗಡಗಿ, ಶಾಸಕರಾದ ಜಿಟಿ ದೇವೇಗೌಡ, ತನ್ವಿರ್ ಸೇಠ್, ದರ್ಶನ್ ಧ್ರುವನಾರಾಯಣ್, ಅನಿಲ್ ಚಿಕ್ಕಮಾಧು, ಕೆ ಹರೀಶ್ ಗೌಡ, ರವಿಶಂಕರ್, ಎ ಆರ್ ಕೃಷ್ಣಮೂರ್ತಿ, ಶ್ರೀವತ್ಸ, ರಮೇಶ್ ಬಂಡಿ ಸಿದ್ದೇಗೌಡ, ಡಾ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಮುಡಾ ಅಧ್ಯಕ್ಷ ಮರೀಗೌಡ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ಡಿಸಿ ಲಕ್ಷ್ಮಿಕಾಂತ ರೆಡ್ಡಿ ಪಾಲ್ಗೊಂಡಿದ್ದರು.

ಜಿಲ್ಲಾಡಳಿತದಿಂದ ಗಣ್ಯರಿಗೆ ಸನ್ಮಾನ:
ಸಮಾರಂಭದಲ್ಲಿ ಸನ್ಮಾನದ ವೇಳೆ ಮೈಸೂರು ಪೇಟ ಹಾಕುವಾಗ ಬೇಡ ಎಂದ ಸಿಎಂ. ಕೇವಲ ಹಾರ, ಶಾಲು ಹಾಕಿಸಿಕೊಂಡು ಸನ್ಮಾನ ಸ್ವೀಕರಿಸಿದರು. ಸಿಎಂಗೆ ಚಾಮುಂಡೇಶ್ವರಿ ಮೂರ್ತಿ ನೀಡಿ ಸನ್ಮಾನಿಸಲಾಯ್ತು. ಉದ್ಘಾಟಕ ಹಂಪನಾ ಅವರಿಗೆ ಜೈನ ಮೂರ್ತಿ ನೀಡಿ ಸನ್ಮಾನ ನೆರವೇರಿಸಲಾಯ್ತು. ಡಿಕೆ.ಶಿವಕುಮಾರ್ ಸೇರಿ ಗಣ್ಯರಿಗೆ ಚಾಮುಂಡೇಶ್ವರಿ ಮೂರ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

1-dinnu

Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MYsuru-Dasara

Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ

3-hunsur

Hunsur: ವಿಚಿತ್ರ ಕರು ಜನನ

loka

MUDA Case: ಲೋಕಾಯುಕ್ತದಿಂದ ಕೆಸರೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಹಜರು

MUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆMUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆ

MUDA scam: ಪಾರ್ವತಿ ಪತ್ರದ ಬೆನ್ನಲ್ಲೇ ಸೈಟ್‌ ಹಿಂದಕ್ಕೆ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

14

Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.