Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ
ಆರ್ಥಿಕತೆಯ ಮೇಲೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Team Udayavani, Oct 3, 2024, 12:53 PM IST
ಮುಂಬೈ: ಇಸ್ರೇಲ್ (Israel) ಮತ್ತು ಇರಾನ್ (Iran) ನಡುವಿನ ಕದನ ತಾರಕಕ್ಕೇರಿರುವ ಬೆನ್ನಲ್ಲೇ ಗುರುವಾರ(ಅ.03) ಬಾಂಬೆ ಷೇರುಪೇಟೆ ವಹಿವಾಟಿನ ಮೇಲೂ ಪರಿಣಾಮ ಬೀರಿದ್ದು, ಸಂವೇದಿ ಸೂಚ್ಯಂಕ ಸೆನ್ಸೆ*ಕ್ಸ್ ಬರೋಬ್ಬರಿ 1,305 ಅಂಕಗಳಷ್ಟು ಕುಸಿತ ಕಂಡಿದೆ.
ಷೇರುಪೇಟೆ ಸಂವೇದಿ ಸೂಚ್ಯಂಕ 1,305 ಅಂಕ ಕುಸಿತ ಕಂಡು 82,900.43 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಎನ್ ಎಸ್ ಇ (NSE) ನಿಫ್ಟಿ 297.50 ಅಂಕ ಇಳಿಕೆಯೊಂದಿಗೆ 25,499.40 ಅಂಕಗಳ ಮಟ್ಟಕ್ಕೆ ಕುಸಿದಿದೆ.
ಮಧ್ಯಪ್ರಾಚ್ಯದಲ್ಲಿನ ಯುದ್ದೋನ್ಮಾದಿಂದಾಗಿ ತೈಲ ಬೆಲೆ ಏರಿಕೆ ಕಂಡಿದ್ದು, ಇದರ ಪರಿಣಾಮ ಭಾರತದ ಷೇರುಪೇಟೆ ಕುಸಿತ ಕಾಣಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಇಸ್ರೇಲ್, ಇರಾನ್ ನಡುವಿನ ಸಂಘರ್ಷ ಜಾಗತಿಕ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಮಧ್ಯಪ್ರಾಚ್ಯದ ತೈಲ ಸರಬರಾಜು ಸ್ಥಗಿತಗೊಂಡಿರುವುದು ತೈಲ ಬೆಲೆ ಏರಿಕೆಯಾಗಲು ಕಾರಣವಾಗಿದೆ.
ಇರಾನ್ ಇಸ್ರೇಲ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಕೂಡಾ ಕ್ಷಿಪಣಿ ದಾಳಿ ನಡೆಸಿದ್ದು, ಉಭಯ ದೇಶಗಳ ನಡುವಿನ ಯುದ್ಧ ಮುಂದುವರಿದರೆ ಆರ್ಥಿಕತೆಯ ಮೇಲೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಒಂದು ವೇಳೆ ಇಸ್ರೇಲ್ ಇರಾನ್ ನ ತೈಲಾಗಾರದ ಮೇಲೆ ದಾಳಿ ನಡೆಸಿದಲ್ಲಿ, ಕಚ್ಛಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಇದರಿಂದ ಭಾರತದಂತಹ ತೈಲ ಆಮದು ದೇಶಗಳ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಜಿಯೋಜಿಟ್ ಫೈನಾಶ್ಶಿಯಲ್ ಸರ್ವೀಸಸ್ ನ ಡಾ.ವಿ.ಕೆ.ವಿಜಯ್ ಕುಮಾರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ ಸಾಂಸ್ಕೃತಿಕ ಪರಂಪರೆಯ ಭಾಗ
Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್
Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ
Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು
Flipkart Big Billion Day ಸೆ. 27 ರಿಂದ ಆರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ
Paru Parvathy Movie: ಇನ್ಫಿನಿಟಿ ರೋಡ್ನಲ್ಲಿ ಪಾರ್ವತಿ!
Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ
Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ
Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್ ರೊಕ್ಸ್ ಬುಕ್ಕಿಂಗ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.