ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ
Team Udayavani, Oct 3, 2024, 1:29 PM IST
ಗಂಗಾವತಿ: ಮಾಜಿ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಇಕ್ಬಾಲ್ ಅನ್ಸಾರಿ ಆಪ್ತರ ಕೈ ಮತ್ತೊಮ್ಮೆ ಮೇಲಾಗಿದೆ. ಗಂಗಾವತಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ ಹಾಗೂ ಸದಸ್ಯರಾಗಿ ಮಂಜುನಾಥ ಕಲಾಲ್, ಗಾಯತ್ರಿ ಹಂಚಿನಾಳ ಹಾಗೂ ರಹಮತ್ ಅಲಿ ಸಂಪಂಗಿ ನೇಮಕಗೊಂಡಿದ್ದಾರೆ.
ಈಗಾಗಲೇ ಅನ್ಸಾರಿ ಕಡೆಯವರು ನಗರಸಭೆ, ಆಶ್ರಯ, ಅಕ್ರಮ ಸಕ್ರಮ ಸಮಿತಿ, ನ್ಯಾಯಾಲಯದ ಎಜಿಪಿ, ಆರಾಧನಾ ಸಮಿತಿಗಳು ಸೇರಿದಂತೆ ವಿವಿಧ ಸಮಿತಿಗಳಲ್ಲಿ ನಾಮ ನಿರ್ದೇಶನಗೊಂಡಿದ್ದಾರೆ.
ಎಚ್.ಆರ್. ಶ್ರೀನಾಥ, ಮನಿಯಾರ್ ಬಣಕ್ಕೆ ಹಿನ್ನೆಡೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸರ್ಕಾರದ ನಾಮನಿರ್ದೇಶಗಳನ್ನು ಪಡೆಯಲು ಯತ್ನಿಸುತ್ತಿರುವ ಮಾಜಿ ಎಂಎಲ್ಸಿ ಎಚ್ .ಆರ್. ಶ್ರೀನಾಥ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಮಿದ್ ಮನಿಯರ್ ಅವರ ಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಗಂಗಾವತಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮತ್ತು ಸದಸ್ಯರನ್ನು ನಾಮನಿರ್ದೇಶನ ಮಾಡಿಸಲು ಎಚ್ .ಆರ್. ಶ್ರೀನಾಥ ಹಾಗೂ ಶಾಮೀದ ಮನಿಯಾರ್ ಇನ್ನಿಲ್ಲದ ಪ್ರಯತ್ನ ಮಾಡಿದ್ದರು. ನಾಮ ನಿರ್ದೇಶನಕ್ಕಾಗಿ ಹಲವು ಬಾರಿ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಇಲಾಖೆಯ ಸಚಿವರನ್ನು ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಈಗಾಗಲೇ ಅನ್ಸಾರಿ ಕಡಿಯವರಿಗೆ ಹಲವು ಹುದ್ದೆಗಳನ್ನು ನೀಡಲಾಗಿದೆ.
ಗಂಗಾವತಿ ತಾಲೂಕಿನ ಅಧಿಕಾರಿಗಳ ವರ್ಗಾವಣೆಯನ್ನು ಅನ್ಸಾರಿಯವರ ಪತ್ರದ ಹಿನ್ನೆಲೆಯಲ್ಲಿ ಮಾಡಲಾಗುತ್ತಿದೆ. ಗಂಗಾವತಿ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಮತ್ತು ಸದಸ್ಯರನ್ನು ತಮ್ಮ ಬಣದ ಮುಖಂಡರನ್ನು ನೇಮಕ ಮಾಡುವಂತೆ ಮುಖಂಡರು ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಅನ್ಸಾರಿ ಕಡೆಯವರಿಗೆ ಗಂಗಾವತಿ ಯೋಜನಾ ಪ್ರಾಧಿಕಾರದ ಹುದ್ದೆಗಳು ದೊರಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ: ಶಾಸಕ ರೆಡ್ಡಿ
Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ
ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!
Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!
Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ
Paru Parvathy Movie: ಇನ್ಫಿನಿಟಿ ರೋಡ್ನಲ್ಲಿ ಪಾರ್ವತಿ!
Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ
Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ
Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್ ರೊಕ್ಸ್ ಬುಕ್ಕಿಂಗ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.