ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ವರ್ಷಗಳ ಕಾಲ ಕಟ್ಟಡ ಬಳಕೆ ಹಾಗೂ ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿದೆ.

Team Udayavani, Oct 3, 2024, 5:17 PM IST

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಉದಯವಾಣಿ ಸಮಾಚಾರ
ಶಿರಸಿ: ಬಹುಕಾಲದ ಬೇಡಿಕೆಯಾದ ಸಂಚಾರಿ ಪೊಲೀಸ್‌ ಠಾಣೆ ಶಿರಸಿಗೆ ಮಂಜೂರಾಗಿದ್ದು, ಅದನ್ನು ಶೀಘ್ರ ಆರಂಭಿಸುವ ಕುರಿತು ಶಾಸಕ ಭೀಮಣ್ಣ ನಾಯ್ಕ ಸೂಚನೆಯಂತೆ ಪೊಲೀಸ್‌ ಅಧಿಕಾರಿಗಳು ಕಟ್ಟಡದ ಹುಡುಕಾಟ ಆರಂಭಿಸಿದ್ದಾರೆ.

ಇಲ್ಲಿನ ಚೌಕಿಮಠದ ಸಮೀಪದಲ್ಲಿ ಸ್ಥಗಿತಗೊಂಡ ದೂರದರ್ಶನ ಮರುಪ್ರಸಾರ ಕೇಂದ್ರ ಕಟ್ಟಡವನ್ನು ಸಂಚಾರಿ ಪೊಲೀಸ್‌ ಠಾಣೆಯಾಗಿ ಬಳಸಿಕೊಳ್ಳಲು ಪೊಲೀಸ್‌ ಇಲಾಖೆ ಯೋಜಿಸಿದ್ದು, ಪ್ರಾಥಮಿಕ ಹಂತದಲ್ಲಿ ಪರಿಶೀಲಿಸಿ, ಶಾಸಕರ ಗಮನಕ್ಕೆ ತರಲು
ಅಧಿಕಾರಿಗಳು ಮುಂದಾಗಿದ್ದಾರೆ.

ಅಬಕಾರಿ ಇಲಾಖೆಗೆ ಸಂಬಂಧಿತ ಕಟ್ಟಡ ಇದಾಗಿದ್ದು, 1980ರ ದಶಕದಲ್ಲಿ ಸ್ಥಾಪನೆಯಾಗಿದ್ದ ಪ್ರಸಾರ ಭಾರತಿ ದೂರದರ್ಶನ ಮರುಪ್ರಸಾರ ಕೇಂದ್ರ 2021ರ ಅಂತ್ಯದಲ್ಲಿ ಸ್ಥಗಿತಗೊಂಡಿತ್ತು. ಆಗ ಜಾಗವನ್ನು ಸುಪರ್ದಿಗೆ ಪಡೆಯಲು ಕಂದಾಯ ಇಲಾಖೆ ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಿತ್ತು.

ಹಾಲೀ ಇರುವ ಕಟ್ಟಡಗಳನ್ನು ತೆರವುಗೊಳಿಸುವ ಬದಲು ಅಲ್ಲಿ ಗ್ರಾಮಚಾವಡಿ ಅಥವಾ ಉಪ ಕಾರಾಗೃಹ ಸ್ಥಾಪಿಸಲು ಚಿಂತನೆ ನಡೆಸಲಾಗಿತ್ತು. ನಂತರ ವಿವಿಧ ಕಾರಣದಿಂದ ಯಾವುದೇ ಕಚೇರಿ ಇಲ್ಲಿಗೆ ಬಂದಿರಲಿಲ್ಲ. ನಗರಸಭೆ ಕೂಡ ವಸತಿ ಸಂಕೀರ್ಣ ಕಟ್ಟಲೂ ಯೋಜಿಸಿತ್ತು. ಜಿಲ್ಲಾ ಮಟ್ಟದ ರಂಗ ಮಂದಿರ ನಿರ್ಮಾಣ ಮಾಡಲೂ ಇದೇ ಜಾಗ ಬಳಸಿಕೊಳ್ಳಲು ಮುಂದಾಗಿತ್ತು. ಈಗ ಪೊಲೀಸ್‌ ಇಲಾಖೆ ಸಂಚಾರಿ ಠಾಣೆಗೆ ಆದರೂ ಬಳಸಲು ಸಾಧ್ಯವಾ ಎಂದು ಪರಿಶೀಲಿಸಲಾಯಿತು.

ವರ್ಷಗಳ ಕಾಲ ಕಟ್ಟಡ ಬಳಕೆ ಹಾಗೂ ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿದೆ. ಸುತ್ತಲಿನ ಜಾಗದ ಸ್ವತ್ಛತೆ, ಸಣ್ಣಪುಟ್ಟ ದುರಸ್ತಿ ಆಗಬೇಕಿದೆ. ವಿಶಾಲ ಜಾಗ ಇರುವುದರಿಂದ ಪಾರ್ಕಿಂಗ್‌ ಸಮಸ್ಯೆ ಇಲ್ಲವಾಗಿದೆ. ಈಗಿನ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ಪೀಕರ್‌ ಇದ್ದಾಗ ಅಂದಿನ ಬಿಜೆಪಿ ಸರಕಾರದ ಬಜೆಟ್‌ನಲ್ಲಿ ಘೋಷಣೆ ಆಗಿತ್ತು. ಆದರೆ, ಅನುದಾನ ಇರಲಿಲ್ಲ. ನಂತರ ಬಂದ ಕಾಂಗ್ರೆಸ್‌ ಸರಕಾರ ಟ್ರಾಫಿಕ್‌ ಪೊಲೀಸ್‌ ಠಾಣೆ ಸ್ಥಾಪನೆ, ಸಿಬ್ಬಂದಿ ನಿಯೋಜನೆ, ಅನುದಾನ ನೀಡಿದೆ.

ಈ ಮಧ್ಯೆ ಡಿಎಸ್‌ಪಿ ಗಣೇಶ ಕೆ.ಎಲ್‌, ಸಿಪಿಐ ಶಶಿಕಾಂತ ವರ್ಮಾ, ಪಿಎಸ್‌ಐ ನಾಗಪ್ಪ, ಅಬಕಾರಿ ಇಲಾಖೆ ಅಧಿಕಾರಿಗಳು ಕಟ್ಟಡದ ಪರಿಶೀಲನೆ ನಡೆಸಿದರು. ಅಂತೂ ಇಂತೂ ಶಿರಸಿಗೆ ಬಹು ಬೇಡಿಕೆಯ ಟ್ರಾಫಿಕ್‌ ಪೊಲೀಸ್‌ ಠಾಣೆ ಆರಂಭಕ್ಕೆ ಮುಹೂರ್ತ ನಿಗದಿಯಾದಂತಾಗಿದೆ.

ಸಂಚಾರಿ ಪೊಲೀಸ್‌ ಠಾಣೆ ಆರಂಭಕ್ಕೆ ಶಾಸಕರು ಸಭೆ ತೆಗೆದುಕೊಳ್ಳಲಿದ್ದು, ಅಲ್ಲಿ ಈ ಕಟ್ಟಡದ ಬಗ್ಗೂ ಮಾಹಿತಿ ನೀಡುತ್ತೇವೆ. ಸಂಚಾರ ದಟ್ಟನೆ ನಿಯಂತ್ರಣಕ್ಕೆ ಈ ಪೊಲೀಸ್‌ ಠಾಣೆ ನೆರವಾಗಲಿದೆ.
ಗಣೇಶ ಕೆ.ಎಲ್‌,ಡಿಎಸ್‌ಪಿ

ಶಿರಸಿ ಟ್ರಾಫಿಕ್‌ ಪೊಲೀಸ್‌ ಠಾಣೆ ಆಗಲೇಬೇಕು. ವಾಹನಗಳ ಒತ್ತಡ ನಿಯಂತ್ರಣಕ್ಕೆ, ಅಪಘಾತ ತಡೆಗಟ್ಟಲು ಅಗತ್ಯ. ಪ್ರವಾಸಿಗರೂ ಶಿರಸಿಗೆ ಅಧಿಕ ಸಂಖ್ಯೆಯಲ್ಲಿ ಬರುತ್ತಾರೆ. ಈ ಕಾರಣದಿಂದ ಸಂಚಾರಿ ಪೊಲೀಸ್‌ ಠಾಣೆ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ
ಸೂಚಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಸ್ಥಳ ವೀಕ್ಷಣೆ ಮಾಡಿ ವಿಜಯ ದಶಮಿಗೆ ಠಾಣಾ ಆರಂಭಕ್ಕೆ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಭೀಮಣ್ಣ ನಾಯ್ಕ, ಶಾಸಕ

*ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

SOMANNA-2

Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

1-asasas

Bengaluru; ಯುವತಿಗೆ ತೀರಾ ಅವಾಚ್ಯ ನಿಂದನೆ: ಆಟೋ ಚಾಲಕ ಪೊಲೀಸ್ ವಶಕ್ಕೆ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

14-sirsi

Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

POlice

Mangaluru: ಕೆಮರಾ ಖರೀದಿಸುವುದಾಗಿ ತಿಳಿಸಿ ವಂಚನೆ; ಪ್ರಕರಣ ದಾಖಲು

SOMANNA-2

Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

arest

Mangaluru: ಗಾಂಜಾ ಸೇವನೆ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.