Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ


Team Udayavani, Oct 3, 2024, 6:47 PM IST

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

ಸಾಗರ: ಹಲವು ವರ್ಷಗಳಿಂದ ಭೂಮಿ ಸಮಸ್ಯೆ ಎದುರಿಸುತ್ತಿರುವ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ತಾಲೂಕಿನ ಶರಾವತಿ ಹಿನ್ನೀರಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆರಂಭವಾದ ನವರಾತ್ರಿ ಉತ್ಸವಕ್ಕೆ ಗುರುವಾರ ಚಾಲನೆ ನೀಡಿದ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸುವುದಕ್ಕೂ ಸರ್ಕಾರ ಬದ್ಧ. ನಮ್ಮ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ಅಂದಿನಿಂದಲೂ ಇದೆ. ಈಗಾಗಲೇ ಸಂತ್ರಸ್ತರ ಸಮಸ್ಯೆ ಬಗ್ಗೆ ಸಮಗ್ರವಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಮನವಿ ಮಾಡಲಾಗಿದೆ. ಮುಳುಗಡೆ ಸಂತ್ರಸ್ತರ ರೈತರಿಗೆ ನಮ್ಮ ಅವಧಿಯಲ್ಲಿ ನಾನು ಅಧಿಕಾರ ವಹಿಸಿಕೊಂಡ ಬಳಿಕ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಘೋಷಿಸಿದರು.

ಸಿಗಂದೂರು ಧರ್ಮಾಧಿಕಾರಿ ಡಾ. ಎಸ್. ರಾಮಪ್ಪ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಂದೇಶ ನೀಡಿದ್ದರು. ಇಂದು ಅವರ ಆಶಯದಂತೆ ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿಗಳು ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಯೋಜನೆ ಹಮ್ಮಿಕೊಂಡಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ಉಳಿವಿಗೆ ದೇವಾಲಯದ ಈ ಕಾರ್ಯ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ಈ ಯೋಜನೆಯು ರಾಜ್ಯಾದ್ಯಂತ ವಿಸ್ತರಣೆಯಾಗಲಿ ಎಂದು ಒತ್ತಾಯಿಸಿದರು.

ಭೂ ಮಂಜೂರಾತಿಗೆ ರೈತರ 70 ವರ್ಷಗಳ ದಾಖಲೆ ಕೇಳುತ್ತಿರುವುದು ಸರಿಯಲ್ಲ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಈ ನಿಯಮವನ್ನು ಸಡಿಲಿಸಿ ವಿಶೇಷ ಪ್ಯಾಕೇಜ್ ಮೂಲಕ ಅನುಭವದ ಮಿತಿಯನ್ನು ಕನಿಷ್ಠ 25 ವರ್ಷಗಳಿಗೆ ಇಳಿಕೆ ಮಾಡಬೇಕು. ಇದರಿಂದ ಸಾವಿರಾರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಡೋಲು ಬಡಿದು ಭಕ್ತಾದಿಗಳಿಗೆ ದಸರಾ ಹಬ್ಬದ ಶುಭಾಶಯಗಳನ್ನು ಹೇಳಿದರು. ಈ ವೇಳೆ ರತ್ನಾಕರ ಹೋನಗೋಡು, ಪ್ರಸನ್ನ ಕುಮಾರ, ಶ್ರೀದೇವಿ ರಾಮಚಂದ್ರ, ಸತ್ಯನಾರಾಯಣ ಜಿ.ಟಿ., ಸರಸ್ವತಿ ಗಣಪತಿ, ಮಂಜಪ್ಪ ಮರಸ, ಅರುಣ್ ಪ್ರಸಾದ್, ಯೋಗರಾಜ ಯಮಗಳಲೆ, ಶ್ರೀ ಕ್ಷೇತ್ರದ ಕಾರ್ಯದರ್ಶಿ ರವಿಕುಮಾರ್ ಎಚ್.ಆರ್. ಇತರರು ಇದ್ದರು.

ದೇವಿಗೆ ವಿಶೇಷ ಪೂಜೆ: ನವರಾತ್ರಿ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಚಂಡಿಕಾ ಹವನ, ದೇವಿಗೆ ಮಹಾಭಿಷೇಕ, ಪಂಚಾಮೃತ ಅಭಿಷೇಕ, ಪಾರಾಯಣ, ನವ ಚಂಡಿಕಾ ಹವನ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅರ್ಚಕ ರಘುಪತಿ ಭಟ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು.

ಟಾಪ್ ನ್ಯೂಸ್

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

SOMANNA-2

Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

High-Court

High Court: ರಾಷ್ಟ್ರದ ಹಿತಾಸಕ್ತಿ ಎದುರು ವ್ಯಕ್ತಿ ಸ್ವಾತಂತ್ರ್ಯಕ್ಕಿಲ್ಲ ಮನ್ನಣೆ

10

Anandapura ಬಳಿ ಕಾರು-ಬಸ್ಸು ಮುಖಾಮುಖಿ ಡಿಕ್ಕಿ; ತಪ್ಪಿದ ಅನಾಹುತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.