Mangaluru: ಗಾಂಜಾ ಸೇವನೆ; ಇಬ್ಬರ ಬಂಧನ
Team Udayavani, Oct 3, 2024, 9:10 PM IST
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಸೆಂಟ್ರಲ್ ರೈಲ್ವೇ ಸ್ಟೇಷನ್ ಬಳಿ ಅಮಲು ಪದಾರ್ಥ ಸೇವನೆಯ ನಶೆಯಲ್ಲಿದ್ದ ಕೇರಳದ ಮಲಪ್ಪುರಂ ಜಿಲ್ಲೆ ಮೊಹಮ್ಮದ್ ಸಾಲಿ(20)ಯನ್ನು ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನು ಗಾಂಜಾ ಸೇವನೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದು, ವೈದ್ಯಕೀಯ ತಪಾಸಣೆ ವೇಳೆ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಆತನ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಕಾವೂರು ಪರಿಸರದಲ್ಲಿ ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಕೆಪಿಟಿ ಬಳಿಯ ವ್ಯಾಸನಗರ ನಿವಾಸಿ ವಿಶಾಲ್ ನಾಯ್ಕ(24)ನನ್ನು ಕಾವೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ
Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ
BJP: ನನ್ನಂಥವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಋಣಿ: ಕಿಶೋರ್ ಕುಮಾರ್
State Govt: ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ
Mangaluru: ಕೆಮರಾ ಖರೀದಿಸುವುದಾಗಿ ತಿಳಿಸಿ ವಂಚನೆ; ಪ್ರಕರಣ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.