Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ
1ಲಕ್ಷ ರೂ.ಮೌಲ್ಯದ 4 ಕೆ.ಜಿ.ಗಾಂಜಾ ವಶ
Team Udayavani, Oct 3, 2024, 8:33 PM IST
ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ವರ್ (25) ಬಂಧಿತ ಆರೋಪಿ. ಗಾಂಜಾ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಆತನನ್ನು ವಶಕ್ಕೆ ಪಡೆದಿದ್ದಾರೆ.
ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ, ಮೊಬೈಲ್ ಫೋನ್ ಅನ್ನು ಸ್ವಾ ಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 1.75 ಲಕ್ಷ ರೂ. ಆಗಬಹು ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್.ಎಂ., ಪಿಎಸ್ಐ ನರೇಂದ್ರ, ಎಎಸ್ಐ ಮೋಹನ್ ಕೆ.ವಿ., ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.