State Government: “ಸ್ಥಳೀಯ’ ಚುನಾವಣೆ ನಡೆಸದಿದ್ದರೆ ಅನುದಾನಕ್ಕೆ ಕತ್ತರಿ?

16ನೇ ಹಣಕಾಸು ಆಯೋಗದ ಮುಂದೆ ರಾಜ್ಯ ಹಣಕಾಸು ಆಯೋಗದ ವಾದ

Team Udayavani, Oct 4, 2024, 7:05 AM IST

State Government: “ಸ್ಥಳೀಯ’ ಚುನಾವಣೆ ನಡೆಸದಿದ್ದರೆ ಅನುದಾನಕ್ಕೆ ಕತ್ತರಿ?

ಬೆಂಗಳೂರು: ಕಾಲಮಿತಿಯೊಳಗೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯದಿದ್ದರೆ ಅವುಗಳಿಗೆ ಬರಬೇಕಾದ ಅನುದಾನವನ್ನು ತಡೆ ಹಿಡಿಯುವ ಬದಲು ರಾಜ್ಯ ಸರಕಾರಕ್ಕೆ ಬರಬೇಕಾದ ಅನುದಾನವನ್ನು ತಡೆ ಹಿಡಿಯಿರಿ…’

ಇದು ಕೇಂದ್ರ ಸರಕಾರದ 16ನೇ ಹಣಕಾಸು ಆಯೋಗದ ಮುಂದೆ ರಾಜ್ಯ 5ನೇ ಹಣಕಾಸು ಆಯೋಗ ಇಟ್ಟಿರುವ ಷರತ್ತು. ಪ್ರತಿ 5 ವರ್ಷಗಳ ಅವಧಿಗೆ ಕಾಲ-ಕಾಲಕ್ಕೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕು. ಪ್ರತಿ 5 ವರ್ಷಕ್ಕೊಮ್ಮೆ ರಾಜ್ಯ ಹಣಕಾಸು ಆಯೋಗ ರಚನೆ ಆಗಬೇಕು. ಇಲ್ಲದಿದ್ದರೆ ನಗರ ಸ್ಥಳೀಯ ಸಂಸ್ಥೆಗಳಾದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ನಗರಪಾಲಿಕೆಗಳಿಗೆ ಮತ್ತು ಗ್ರಾ.ಪಂ, ತಾ.ಪಂ ಹಾಗೂ ಜಿ.ಪಂ.ಗಳಿಗೆ ಬರಬೇಕಾದ ಅನುದಾನ ತಡೆ ಹಿಡಿಯಲಾಗುತ್ತದೆ. ಕೇಂದ್ರ ಹಣಕಾಸು ಆಯೋಗವು ಇಂಥದ್ದೊಂದು ಷರತ್ತನ್ನು ಹಾಕಿರುತ್ತದೆ.

ಆದರೆ, ಕಾಲ ಕಾಲಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು ನಡೆಸುವುದು ರಾಜ್ಯ ಚುನಾವಣ ಆಯೋಗದ ಕೆಲಸ, ಅದಕ್ಕೆ ಅವಕಾಶ ಮಾಡಿಕೊಡಬೇಕಾದ ಜವಾಬ್ದಾರಿ ರಾಜ್ಯ ಸರಕಾರದ್ದಾಗಿರುತ್ತದೆ. ಅದೇ ರೀತಿ ಪ್ರತಿ 5 ವರ್ಷಕ್ಕೊಮ್ಮೆ ರಾಜ್ಯ ಹಣಕಾಸು ಆಯೋಗ ರಚನೆ ಮಾಡುವ ಹೊಣೆ ರಾಜ್ಯ ಸರಕಾರದ್ದು. ಹೀಗಿದ್ದಾಗ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯದಿದ್ದರೆ, ರಾಜ್ಯ ಹಣಕಾಸು ಆಯೋಗ ರಚನೆ ಆಗದಿದ್ದರೆ ಅದು ಸ್ಥಳೀಯ ಸಂಸ್ಥೆಗಳ ತಪ್ಪಲ್ಲ, ರಾಜ್ಯ ಸರಕಾರ ಅದಕ್ಕೆ ಹೊಣೆ. ರಾಜ್ಯ ಸರಕಾರದ ತಪ್ಪಿಗೆ ಸ್ಥಳೀಯ ಸಂಸ್ಥೆಗಳ ಅನುದಾನ ತಡೆ ಹಿಡಿಯುವುದು ಯಾವ ನ್ಯಾಯ, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಕೊಡುವುದು ಎಷ್ಟು ಸರಿ. ಅದಕ್ಕಾಗಿ ರಾಜ್ಯ ಸರಕಾರಕ್ಕೆ ಬರಬೇಕಾದ ಅನುದಾನವನ್ನು ತಡೆ ಹಿಡಿಯಿರಿ ಎಂದು ರಾಜ್ಯ ಹಣಕಾಸು ಆಯೋಗವು ಕೇಂದ್ರ ಹಣಕಾಸು ಆಯೋಗದ ಮುಂದೆ ವಾದಿಸಿದೆ.

ಏಕೆ ಹೀಗೆ ಮಾಡಬೇಕು?
ಕಳೆದ 3 ವರ್ಷಗಳಿಂದ ರಾಜ್ಯದಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆದಿಲ್ಲ, ಬಿಬಿಎಂಪಿಗೂ ಚುನಾವಣೆ ಆಗಿಲ್ಲ. ಈ ಕಾರಣಕ್ಕಾಗಿ 15ನೇ ಹಣಕಾಸು ಆಯೋಗದಲ್ಲಿ ಬರಬೇಕಿದ್ದ 2,100 ಕೋಟಿ ರೂ. ಅನುದಾನ ತಡೆ ಹಿಡಿಯಲಾಗಿದೆ. ಆದರೆ, ರಾಜ್ಯ ಸರಕಾರಕ್ಕೆ ಬರಬೇಕಾದ ಅನುದಾನ ತಡೆ ಹಿಡಿದಿಲ್ಲ. ಚುನಾವಣೆ ನಡೆಸಲು ಅವಕಾಶ ಮಾಡಿಕೊಡಬೇಕಾದ ರಾಜ್ಯ ಸರಕಾರದ ಅನುದಾನ ತಡೆ ಹಿಡಿದರೆ, ಆಗ ರಾಜ್ಯ ಸರಕಾರ ಎಚ್ಚೆತ್ತುಕೊಂಡು ಕಾಲ-ಕಾಲಕ್ಕೆ ಚುನಾವಣೆಗಳನ್ನೂ ನಡೆಸುತ್ತದೆ, ರಾಜ್ಯ ಚುನಾವಣಾ ಆಯೋಗವನ್ನೂ ರಚಿಸುತ್ತದೆ. ಹಾಗಾಗಿ, ಯಾವುದೇ ರಾಜ್ಯದಲ್ಲಿ ಕಾಲಬದ್ಧವಾಗಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯದಿದ್ದರೆ ಅಥವಾ ರಾಜ್ಯ ಚುನಾವಣಾ ಆಯೋಗ ರಚನೆ ಆಗದಿದ್ದರೆ ಅಂತಹ ರಾಜ್ಯಗಳಿಗೆ ರಾಜ್ಯ ಸರಕಾರಕ್ಕೆ ಬರಬೇಕಾದ ಅನುದಾನವನ್ನು ತಡೆ ಹಿಡಿಯಲಾಗುವುದು ಎಂಬ ಷರತ್ತು ವಿಧಿಸಿ ಎಂದು 16ನೇ ಹಣಕಾಸು ಆಯೋಗದ ಮುಂದೆ ರಾಜ್ಯ ಹಣ ಕಾಸು ಆಯೋಗ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.

ಜಿ.ಪಂ. ತಾ.ಪಂ.ಗಳಿಗೆ ಚುನಾವಣೆ ನಡೆಯದ ಕಾರಣ, ಅವುಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬರಬೇಕಿದ್ದ 2,100 ಕೋಟಿ ರೂ. ಅನುದಾನ ತಡೆ ಹಿಡಿಯಲಾಗಿದೆ. ಆಯೋಗದ ಅವಧಿ ಅಂದರೆ 2024-25ನೇ ಸಾಲಿನವರೆಗೆ ಚುನಾವಣೆ ನಡೆಸಿದರೆ, ಅನುದಾನ ವಾಪಸ್‌ ಪಡೆದುಕೊಳ್ಳಬಹುದು. ಈ ಅವಧಿಯಲ್ಲಿ ಚುನಾವಣೆ ಸಾಧ್ಯವಾಗದಿದ್ದರೆ ಅನುದಾನ ಸಿಗುವುದಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಕಾಲಮಿತಿಯೊಳಗೆ ಚುನಾವಣೆ ನಡೆಯದಿದ್ದಾಗ, ಅವುಗಳ ಅನುದಾನದ ಬದಲಿಗೆ ರಾಜ್ಯ ಸರಕಾರದ ಅನುದಾನ ತಡೆ ಹಿಡಿಯಬೇಕು ಎಂದು 16ನೇ ಹಣಕಾಸು ಆಯೋಗಕ್ಕೆ ಅಭಿಪ್ರಾಯ ಹೇಳಲಾಗಿದೆ.
– ಸಿ. ನಾರಾಯಣಸ್ವಾಮಿ, ಅಧ್ಯಕ್ಷರು, ರಾಜ್ಯ 5ನೇ ಹಣಕಾಸು ಆಯೋಗ

 

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ರಾಜೀನಾಮೆಗೆ ಸಿದ್ಧ , ನೀವೂ ಕೊಡುತ್ತೀರಾ?: ಅಶೋಕ್‌ ಸವಾಲು

BJP: ರಾಜೀನಾಮೆಗೆ ಸಿದ್ಧ , ನೀವೂ ಕೊಡುತ್ತೀರಾ?: ಅಶೋಕ್‌ ಸವಾಲು

EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!

EXAM: ದ್ವಿತೀಯ ಪಿಯು ಮಕ್ಕಳಿಗೆ ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ!

Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ

Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.