Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್ ನಟ “ಕೀರಿಕ್ಕಡನ್ ಜೋಸ್” ವಿಧಿವಶ
ಜೋಸ್ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲವಾಗಿತ್ತು
Team Udayavani, Oct 4, 2024, 11:01 AM IST
ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಜನಪ್ರಿಯ ನಟ, ವಿಲನ್ ಆಗಿ ಖ್ಯಾತಿ ಪಡೆದಿದ್ದ ಮೋಹನ್ ರಾಜ್ ಅಲಿಯಾಸ್ ಕೀರಿಕ್ಕಡನ್ ಜೋಸ್(70ವರ್ಷ) ಗುರುವಾರ (ಅ.03) ನಿಧನರಾಗಿರುವುದಾಗಿ ವರದಿ ತಿಳಿಸಿದೆ.
“ಕಿರೀಟಂ” ಸಿನಿಮಾದಲ್ಲಿ ವಿಲನ್ ಆಗಿ ನಟಿಸುವ ಮೊದಲು ಜೋಸ್ ಅವರು ಕೇಂದ್ರ ಸರ್ಕಾರದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಕಿರೀಟಂ ಸಿನಿಮಾದಲ್ಲಿ “ಕೀರಿಕ್ಕಡನ್ ಜೋಸ್” ಎಂಬ ಪಾತ್ರದಲ್ಲಿ ಮೋಹನ್ ರಾಜ್ ವಿಲನ್ ಆಗಿ ನಟಿಸಿದ್ದು, ನಂತರ ಅದೇ ಹೆಸರಿನಲ್ಲಿ ಅವರು ಜನಪ್ರಿಯರಾಗಿದ್ದರು. ಮೋಹನ್ ಲಾಲ್ ಹೀರೋ ಆಗಿ ನಟಿಸಿದ್ದ ಕಿರೀಟಂ ಮಲಯಾಳಂ ಚಿತ್ರರಂಗದಲ್ಲಿ ಬಿಗ್ ಹಿಟ್ ಸಿನಿಮಾಗಳಲ್ಲಿ ಒಂದಾಗಿದೆ.
ವಿಲನ್ ಆಗಿ ನಟಿಸುವ ಮೂಲಕ ಯಶಸ್ಸು ಕಂಡ ಮೋಹನ್ ರಾಜ್ ಅಲಿಯಾಸ್ ಜೋಸ್ ಸಾಲು, ಸಾಲು ಚಿತ್ರಗಳಲ್ಲಿ ನಟಿಸುವ ಅವಕಾಶ ಪಡೆದಿದ್ದರು. ಹೀಗೆ ಸುಮಾರು 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.
ಮಲಯಾಳಂ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುವ ಮೂಲಕ ಜೋಸ್ ದಕ್ಷಿಣ ಭಾರತದ ಖ್ಯಾತ ವಿಲನ್ ಪಾತ್ರಧಾರಿಯಾಗಿದ್ದರು. ಕೆಲವು ವರ್ಷಗಳ ಹಿಂದೆ ತೆಲುಗು ಸಿನಿಮಾದ ಸ್ಟಂಟ್ ದೃಶ್ಯವೊಂದರ ಚಿತ್ರೀಕರಣ ವೇಳೆ ಕಾಲಿಗೆ ಗಾಯವಾಗಿತ್ತು..ಆ ನಂತರ ಜೋಸ್ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲವಾಗಿತ್ತು.
ಶುಕ್ರವಾರ (ಅ.04) ತಿರುವನಂತಪುರಂನಲ್ಲಿ ನಟ ಮನೋಜ್ ರಾಜ್ ಅಲಿಯಾಸ್ ಜೋಸ್ ಅವರ ಪ್ರಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Indian 3: ʼಇಂಡಿಯನ್ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?
Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್ ಆಕ್ರೋಶ
ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ
ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ
Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!
Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್ ಕೋಚ್ ಮಾರ್ಕೆಲ್
India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ
Patiala: ಐತಿಹಾಸಿಕ ದೇಗುಲಕ್ಕೆ ರಾಷ್ಟ್ರೀಯ ಸ್ಮಾರಕದ ಸ್ಥಾನಮಾನ ಶ್ರೀ ಕಾಳಿ ದೇವಿ ದೇಗುಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.