ಮಗಳು ಸೆ*ಕ್ಸ್ ರ್ಯಾಕೆಟ್ ನಲ್ಲಿದ್ದಾಳೆಂದು ಸ್ಕ್ಯಾಮ್ ಕರೆ; ಆತಂಕದಿಂದ ಅಸುನೀಗಿದ ತಾಯಿ!
Team Udayavani, Oct 4, 2024, 11:20 AM IST
ಆಗ್ರಾ: ಟೆಲಿಫೋನ್ ನಲ್ಲಿನ ವಂಚನೆಗಳು (Cyber Scam) ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ, ಆದರೆ ಅಂತಹ ಒಂದು ಪ್ರಯತ್ನದ ವಂಚನೆಯ ಕಾರಣದಿಂದ ಮಹಿಳೆಯೊಬ್ಬರು ಜೀವ ಕಳೆದುಕೊಂಡ ಘಟನೆ ವರದಿಯಾಗಿದೆ.
ಕಳೆದ ಸೋಮವಾರ (ಸೆ.30) ಆಗ್ರಾದ (Agra) ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ವಾಟ್ಸಾಪ್ ಕರೆಯೊಂದನ್ನು ಸ್ವೀಕರಿಸಿದ್ದಾರೆ. ಕರೆ ಮಾಡಿದಾತನ ವಾಟ್ಸಾಪ್ ಡಿಪಿಐಲ್ಲಿ ಪೊಲೀಸ್ ಅಧಿಕಾರಿಯ ಫೋಟೋ ಇತ್ತು. ತನ್ನ ಕಾಲೇಜಿಗೆ ಹೋಗುತ್ತಿರುವ ಮಗಳು ಸೆ*ಕ್ಸ್ ರ್ಯಾಕೆಟ್ ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ಕರೆ ಮಾಡಿದ ವ್ಯಕ್ತಿ ಶಿಕ್ಷಕಿಗೆ ಹೇಳಿದ್ದಾನೆ.
ವರ್ಮಾ ಅವರ ಮಗ ದೀಪಾಂಶು ಮಾತನಾಡಿ, ಮಧ್ಯಾಹ್ನದ ವೇಳೆಗೆ ಕರೆ ಬಂದಿದ್ದು, ಮಗಳು ಸುರಕ್ಷಿತವಾಗಿ ಮನೆಗೆ ಬರುವುದನ್ನು ಖಚಿತಪಡಿಸಿಕೊಳ್ಳಲು 1 ಲಕ್ಷ ರೂ. ನಿರ್ದಿಷ್ಟ ಖಾತೆಗೆ ಜಮಾ ಮಾಡುವಂತೆ ಆ ವ್ಯಕ್ತಿ ಕೇಳಿದ್ದಾನೆ ಮತ್ತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದ್ದ.
ತಮ್ಮ ಮಗಳು ಸೆಕ್ಸ್ ರ್ಯಾಕೆಟ್ ಸಂಬಂಧಿತ ಪ್ರಕರಣದಲ್ಲಿ ಸಿಲುಕಿದ್ದು, ಸಮಾಜಕ್ಕೆ ತಿಳಿದರೆ ಕುಟುಂಬದ ಮರ್ಯಾದೆ ಹೋಗುತ್ತದೆ, ಆದ ಕಾರಣ ತಾನು ಕರೆ ಮಾಡುತ್ತಿದ್ದೇನೆ ಎಂದು ಆ ವ್ಯಕ್ತಿ ಎಂಎಸ್ ವರ್ಮಾಗೆ ತಿಳಿಸಿದ್ದಾನೆ.
“ನನ್ನ ತಾಯಿ ಆಗ್ರಾದ ಅಚ್ನೇರಾದಲ್ಲಿರುವ ಸರ್ಕಾರಿ ಬಾಲಕಿಯರ ಜೂನಿಯರ್ ಹೈಸ್ಕೂಲ್ ನಲ್ಲಿ ಪಾಠ ಮಾಡುತ್ತಿದ್ದರು. ಆ ವ್ಯಕ್ತಿಯಿಂದ ಕರೆ ಬಂದ ನಂತರ ಅವರು ಗಾಬರಿಗೊಂಡು ನನಗೆ ಕರೆ ಮಾಡಿದರು ಮತ್ತು ಅವರು ಕರೆ ಸ್ವೀಕರಿಸಿದ ಸಂಖ್ಯೆಯನ್ನು ನಾನು ಕೇಳಿದೆ. ನಾನು ಸಂಖ್ಯೆಯನ್ನು ಪರಿಶೀಲಿಸಿದಾಗ , ಇದು +92 ಹೊಂದಿದೆ. ತಾಯಿ ಆತಂಕದಿಂದ ಅಸ್ವಸ್ಥಳಾಗಿದ್ದಳು” ಎಂದು ದೀಪಾಂಶು ಹೇಳಿದರು.
“ನಾನು ಆಕೆಯನ್ನು ಸಮಾಧಾನಪಡಿಸಿದೆ. ನಾನು ನನ್ನ ಸಹೋದರಿಯೊಂದಿಗೆ ಮಾತನಾಡಿದೆ, ಆಕೆ ಕಾಲೇಜಿನಲ್ಲಿ ಕ್ಷೇಮವಾಗಿದ್ದಳು. ಆದರೆ ನನ್ನ ತಾಯಿಯ ಆರೋಗ್ಯವು ಹದಗೆಡುತ್ತಲೇ ಇತ್ತು. ಶಾಲೆಯಿಂದ ಹಿಂತಿರುಗಿದಾಗ, ಸ್ವಲ್ಪ ನೋವು ಅನುಭವಿಸುತ್ತಿದ್ದಾಳೆ ಎಂದು ಹೇಳಿದರು. ಆದರೆ ಪರಿಸ್ಥಿತಿ ಹದಗೆಟ್ಟು ಆಕೆ ಅಸುನೀಗಿದರು”ಎಂದು ಪುತ್ರ ಹೇಳಿದರು.
ಕುಟುಂಬದವರು ಗುರುವಾರ ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮಯಾಂಕ್ ತಿವಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ
Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ
GST;ನವೆಂಬರ್ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?
Google ಜತೆ ಬೆಂಗಳೂರಿನ ಕ್ಲೀನ್ಮ್ಯಾಕ್ಸ್ ಸಹಯೋಗ: ಪವನ ವಿದ್ಯುತ್ ಉತ್ಪಾದನೆ
Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.