Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್ ನಲ್ಲಿದ್ದ ವ್ಯಕ್ತಿ ಪಂಜಾಬ್ ನಲ್ಲಿ ಬಂಧನ!
ಭಾರತದಲ್ಲಿನ ಕೊಕೇನ್ ಮಾರಾಟ ಜಾಲದ ಮಾಸ್ಟರ್ ಮೈಂಡ್ ಎಂದು ಶಂಕೆ...
Team Udayavani, Oct 4, 2024, 12:25 PM IST
ನವದೆಹಲಿ: 5,000 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣದಲ್ಲಿ ದೆಹಲಿ ಪೊಲೀಸರು ಐದನೆ ಆರೋಪಿಯನ್ನು ಬಂಧಿಸಿದ್ದಾರೆ. ಈತ ದೇಶವನ್ನು ತೊರೆದು ಪರಾರಿಯಾಗಲು ಯತ್ನಿಸಿದ್ದ ವೇಳೆ ಅಮೃತ್ ಸರ್ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವುದಾಗಿ ವರದಿ ವಿವರಿಸಿದೆ.
ಜಿತೇಂದ್ರ ಪಾಲ್ ಸಿಂಗ್ ಅಲಿಯಾಸ್ ಜಸ್ಸಿ(40ವರ್ಷ) ಎಂಬಾತ ಡ್ರಗ್ ಜಾಲದ ವಹಿವಾಟಿಗಾಗಿ ಬ್ರಿಟನ್ ನಿಂದ ಭಾರತಕ್ಕೆ ಬಂದಿದ್ದ. ಆದರೆ ಡ್ರಗ್ಸ್ ಜಾಲ ಭೇದಿಸಿದ ದೆಹಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದರು, ಈ ವಿಷಯ ತಿಳಿಯುತ್ತಿದ್ದಂತೆಯೇ ಜಿತೇಂದ್ರ ಪಾಲ್ ಬ್ರಿಟನ್ ಗೆ ಪರಾರಿಯಾಗಲು ಸಿದ್ಧತೆ ನಡೆಸಿದ್ದ ಎಂದು ಮೂಲಗಳು ಹೇಳಿವೆ.
ಜಿತೇಂದ್ರ ಪಾಲ್ ಸಿಂಗ್ ಕಳೆದ 17 ವರ್ಷಗಳಿಂದ ಬ್ರಿಟನ್ ನಲ್ಲಿ ವಾಸವಾಗಿದ್ದು, ಯಕೆ (UK) ಗ್ರೀನ್ ಕಾರ್ಡ್ ಹೊಂದಿದ್ದಾನೆ ಎಂದು ವರದಿ ವಿವರಿಸಿದೆ.
ಅಕ್ಟೋಬರ್ 2ರಂದು ದೆಹಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 560 ಕಿಲೋ ಗ್ರಾಮ್ ಕೊಕೇನ್ ಮತ್ತು 40 ಕಿಲೋ ಗ್ರಾಮ್ ಹೈಡ್ರೋಪೋನಿಕ್. ಮರಿಜುವಾನಾ ವಶಪಡಿಸಿಕೊಂಡಿದ್ದು, ಇದರ ಅಂದಾಜು ಬೆಲೆ 5,620 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಆರೋಪಿ ತುಷಾರ್ ಗೋಯಲ್ ನನ್ನು ಬುಧವಾರ ಬಂಧಿಸಿದ್ದು, ಈತ ಭಾರತದಲ್ಲಿನ ಕೊಕೇನ್ ಮಾರಾಟ ಜಾಲದ ಮಾಸ್ಟರ್ ಮೈಂಡ್ ಎಂದು ಶಂಕಿಸಲಾಗಿದೆ. ಬಂಧಿತ ಆರೋಪಿ ಕಾಂಗ್ರೆಸ್ ಪಕ್ಷದ ನಂಟು ಹೊಂದಿರುವುದಾಗಿ ಬಿಜೆಪಿ ಆರೋಪಿಸಿದ್ದು, ಈ ವಿಚಾರ ಎರಡು ಪಕ್ಷಗಳ ನಾಯಕರು ಆರೋಪ, ಪ್ರತ್ಯಾರೋಪದಲ್ಲಿ ತೊಡಗುವಂತೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi:5,600 ಕೋಟಿ ರೂಪಾಯಿ ಡ್ರಗ್ ಸ್ಮಗ್ಲಿಂಗ್ ಕಿಂಗ್ ಪಿನ್ ಕಾಂಗ್ರೆಸ್ ಮುಖಂಡ? BJP
Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!
Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್ ವ್ಯವಸ್ಥೆಗೇ ಸವಾಲಾದ ಕಳ್ಳರು
Digital Arrest: ವರ್ಧಮಾನ್ ಗ್ರೂಪ್ ಮುಖ್ಯಸ್ಥನಿಗೆ 7 ಕೋಟಿ ರೂ. ವಂಚನೆ
Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್
UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ
Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ
ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.