Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Team Udayavani, Oct 4, 2024, 12:59 PM IST
ಕಲಬುರಗಿ: ಜಿಲ್ಲೆಯ ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಕೊಬ್ಬು ಜಾಸ್ತಿಯಾಗಿದೆ, ಚಳಿ ಬಿಡಿಸಬೇಕಾಗಿದೆ. ಇಲ್ಲದೆ ಹೋದರೆ ನಮ್ಮ ಮಾತು ಕೇಳುವುದಿಲ್ಲ ಎಂದು ಆಳಂದ ಶಾಸಕ ಹಾಗೂ ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವ ಅಧಿಕಾರಿಯೂ ನಮ್ಮ ಮಾತು ಕೇಳುತ್ತಿಲ್ಲ. ಜನರ ಸಮಸ್ಯೆಗಳಿಗೂ ಸ್ಪಂಧಿಸುತ್ತಿಲ್ಲ. ಮೂಲಭೂತಗಳಿಗಾಗಿ ಜನರು ಪರದಾಡುತ್ತಿದ್ದಾರೆ. ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಪಾಲಿಕೆ ಕಮಿಷನರ್ ಸೇರಿದಂತೆ ಯಾವ ಅಧಿಕಾರಿ ಈ ಸಮಸ್ಯೆ ಕುರಿತು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಇವರೆಲ್ಲಾ ಕೊಬ್ಬಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಪಂ ಸಿಇಓ, ಪಾಲಿಕೆ ಆಯುಕ್ತ ಮಾತೇ ಕೇಳುತ್ತಿಲ್ಲ. ಇದರಿಂದ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದೆಲ್ಲವನ್ನು ಉಸ್ತುವಾರಿ ಸಚಿವ ಪ್ರಿಯಾಂಕ್ ಅವರಿಗೆ ನಾವು ಮಕ್ಕಳಂತೆ ದೂರು ನೀಡಬೇಕಾಗಿದೆ. ಇದು ಸರಿಯೇ ಎಂದು ಪ್ರಶ್ನೆ ಮಾಡಿದರು.
ಕೆಲವು ಕಾಮಗಾರಿ ಕಳಪೆಯಾದಾಗ ಆ ಅಧಿಕಾರಿ ಕರೆದು ಬಿಲ್ ಮಾಡಬೇಡಿ ಅಂದ್ರು ಮಾಡಿ ಕಳಿಸ್ತಾರೆ. ಇದಕ್ಕೆ ಪಾಲಿಕೆ ಉಪ ಆಯುಕ್ತ ಜಾಧವ್ ಅವರನ್ನು ಕೂಡಲೇ ಕಿತ್ತು ಹಾಕಬೇಕು. ಈ ಮನುಷ್ಯ ಎಲ್ಲ ಸರಕಾರದಲ್ಲೂ ಇರುತ್ತಾನೆ. ಹೇಗೆ ಇವರೆಲ್ಲಾ ಒಂದೇ ಸ್ಥಳದಲ್ಲಿ 20 ವರ್ಷ ಕೆಲಸ ಮಾಡುತ್ತಾರೆ ಎಂದು ಕಿಡಿಕಿಡಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು
DNA Test: ಮುನಿರತ್ನಗೆ ಡಿಎನ್ಎ ಟೆಸ್ಟ್: ಎಸ್ಐಟಿ ನಿರ್ಧಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್
UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ
Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ
ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.