![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 4, 2024, 2:44 PM IST
ಉಡುಪಿ: ನವರಾತ್ರಿಯ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡುವ ಕದಿರು ಕಟ್ಟುವ ಹಬ್ಬ ಈಗ ಎಲ್ಲೆಡೆ ನಡೆಯುತ್ತಿದೆ. ಕದಿರು ಕಟ್ಟುವ ಹಬ್ಬವನ್ನು ಅನಂತ ಚತುದರ್ಶಿಯಿಂದ ದೀಪಾವಳಿ ಯವರೆಗೆ ಮಾಡಬಹುದು ಎಂದಿದೆ. ಆದರೆ, ಚತುದರ್ಶಿ ಸಂದರ್ಭದಲ್ಲಿ ಪೈರು ಬಲಿತಿರುವುದಿಲ್ಲ, ದೀಪಾವಳಿ ಹೊತ್ತಿಗೆ ಕಟಾವಾಗಿ ರುತ್ತದೆ. ಹೀಗಾಗಿ ಹೆಚ್ಚಿನವರು ನವರಾತ್ರಿಯ ಒಂದು ದಿನ ಕದಿರು ಹಬ್ಬ ಆಚರಿಸುತ್ತಾರೆ.
ಭತ್ತದ ತೆನೆಯನ್ನು ಮಾವಿನ ಎಲೆ, ಬಿದಿರು ಎಲೆಗಳಿಂದ ಸುತ್ತಿ ದಡ್ಡಲದ ತೊಗಟೆ ನಾರಿನಿಂದ ಕಟ್ಟಿದಾಗ ಅದು ಕೊರಳು ಆಗುತ್ತದೆ. ಅದನ್ನು ದೇವರ ಪೀಠ, ತೊಟ್ಟಿಲು, ಹಣದ ಪೆಟ್ಟಿಗೆ, ಅಟ್ಟ, ಬಾಗಿಲು, ಧಾನ್ಯ ಕಣಜ, ಮೊಸರು ಕಡೆಯುವ ಕಂಬ, ಬಾವಿಯ ಕಂಬ ಸೇರಿ ಎಲ್ಲ ಕಡೆ ಕಟ್ಟಲಾಗುತ್ತದೆ.
ವಾಹನಗಳು, ಕಂಪ್ಯೂಟರ್ ಕೂಡಾ ಆ ವ್ಯಾಪ್ತಿಗೆ ಬರುತ್ತದೆ. ಮನೆಗೆ ಮತ್ತು ಇರುವ ಎಲ್ಲ ವಸ್ತುಗಳಿಗೆ ಹೊಸ ಚೈತನ್ಯ ತುಂಬುವ ಆಶಯ ಇದರಲ್ಲಿದೆ. ಕೊರಳಿನಲ್ಲಿ ಧಾನ್ಯ ಲಕ್ಷ್ಮಿಯ ಅನುಸಂಧಾನವಿದ್ದು, ಕಟ್ಟಿದಾಗ ಮನೆಯಲ್ಲಿ ಧನಾತ್ಮಕತೆ ಪ್ರಾಪ್ತಿಯಾಗುತ್ತದೆ ಎಂಬುವುದು ನಂಬಿಕೆ.
ಸಂಪ್ರದಾಯಬದ್ಧವಾಗಿರಲಿ
ಉತ್ತರ ಕನ್ನಡ ಭಾಗದಲ್ಲಿ ಸಂಕ್ರಮಣಕ್ಕೆ ಕದಿರು ಕಟ್ಟುತ್ತಾರೆ. ಕರಾವಳಿ ಭಾಗದಲ್ಲಿ ಈಗ ಬೆಳೆ ಬರುತ್ತಿರುವ ಕಾರಣ ಹೆಚ್ಚಾಗಿ ನವರಾತ್ರಿ ವೇಳೆ ಆಚರಣೆ ನಡೆಯುತ್ತದೆ. ಹೊಸ ಬೆಳೆಯನ್ನು ಮನೆಗೆ ತಂದು ಹೊಸಕ್ಕಿ ಊಟ ಮಾಡುವ ಸಂಪ್ರದಾಯ ಅದೇ ಭಕ್ತಿಯಿಂದ ಮುಂದುವರಿದರೆ ಉತ್ತಮ.
-ಡಾ| ಬಿ.ಗೋಪಾಲ ಆಚಾರ್ಯ, ನಿರ್ದೇಶಕರು, ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ
ಕದಿರು ತರುವ ಕ್ರಮ ಹೇಗೆ?
ಕೊರಳಿಗೆ ಬೇಕಾದ ತೆನೆ, ಮಾವಿನಎಲೆಗಳನ್ನು ಹಿಂದಿನ ದಿನವೇ ತಂದಿರಿಸುವುದು ಕ್ರಮ. ಗದ್ದೆಯಿಂದ ಪೈರನ್ನು ಕೊಯ್ದು ಬಾಳೆ ಎಲೆ ಹಾಸಿದ ಹರಿವಾಣದಲ್ಲಿ ಇಡಬೇಕು. ಯಜಮಾನ ಮುಂಡಾಸು ಕಟ್ಟಿದ ತಲೆಯಲ್ಲಿ ಅದನ್ನು ಹೊತ್ತು ಮನೆಗೆ ತರಬೇಕು. ಮನೆಯಲ್ಲಿ ತುಳಸಿ ಕಟ್ಟೆಯ ಬಳಿ ಅದಕ್ಕೆ ಪೂಜೆ ನಡೆಸಿ ಒಳಗೆ ತಂದು ಮರದ ಕುರ್ಚಿಯಲ್ಲಿ ಇರಿಸಬೇಕು. ಕುರ್ಚಿಯಲ್ಲಿ ಹರಿವೆ ಸೊಪ್ಪು, ಸೌತೆಕಾಯಿ, ಮುಳ್ಳುಸೌತೆ, ತೆಂಗಿನಕಾಯಿ ಸಹಿತ ಮನೆಯಲ್ಲಿ ಬೆಳೆದ ಪ್ರಮುಖ ಬೆಳೆಗಳನ್ನು ಅದರಲ್ಲಿಡಬೇಕು. ಮನೆಯ ಯಜಮಾನ ಕದಿರಿಗೆ ಪೂಜೆ ಮಾಡಿ ಬಳಿಕ ಕಟ್ಟುವ ಕೆಲಸ ನಡೆಯುತ್ತದೆ.
ಹೊಸತೆನೆ ಊಟ ಹೇಗಿರುತ್ತದೆ?
-ಪುನೀತ್ ಸಾಲ್ಯಾನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.