Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ


Team Udayavani, Oct 4, 2024, 3:46 PM IST

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು: ಕೊಟ್ಟಾರ ಬಂಗ್ರಕೂಳೂರಿನ ಪೋದಾರ್ ಇಂಟರ್ ನ್ಯಾಶನಲ್ ಸ್ಕೂಲ್‌ನ ಹತ್ತಿರದ ಗಣೇಶ್ ಭಾಗ್ ಲೇಔಟ್‌ನ ವಿದ್ಯಾರ್ಥಿ ಗ್ರಾಮದಲ್ಲಿ ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಶುಕ್ರವಾರ(ಅ.04) ಉದ್ಘಾಟನೆಗೊಂಡಿತು.

ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಟ್ಠಲದಾಸ ಸ್ವಾಮೀಜಿಯವರು ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಆಶೀರ್ವಚನ ನೀಡಿದ ಅವರು, ತ್ರಿಶಾ ಕಾಲೇಜಿನ ಕ್ಯಾಂಪಸ್‌ನೊಳಗೆ ಕಾಲಿರಿಸುತ್ತಿದ್ದಂತೆ ಮನಸ್ಸಿಗೆ ಆಹ್ಲಾದಕರ ಭಾವನೆ ಮೂಡಿದೆ. ತರಗತಿ ಕೊಠಡಿಗಳಿಗೆ ಇಟ್ಟಿರುವ ಮುನಿಗಳು, ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳು, ನಮ್ಮ ಪರಂಪರೆ, ಆಧ್ಯಾತ್ಮಿಕತೆ ಮುಂದುವರಿಯುವ ಸಂಕೇತವಾಗಿದೆ. ಸಂಸ್ಥೆಯ ಶಿಕ್ಷಣದ ಶ್ರೇಷ್ಠತೆಯನ್ನು ತಿಳಿಸುತ್ತದೆ. ಶಿಕ್ಷಣದಿಂದ ಮನುಷ್ಯತ್ವ ನಿರ್ಮಾಣವಾಗಬೇಕು. ಶೈಕ್ಷಣಿಕ ಫಲಿತಾಂಶಕ್ಕಿಂತ ಸಾಮಾಜಿಕವಾಗಿ ಉತ್ತಮ ಫಲಿತಾಂಶ ಮುಖ್ಯ ಎಂದರು.

ದೇಶ ನಿರ್ಮಾಣಕ್ಕೆ ಪೂರಕ ಶಿಕ್ಷಣ: ಯು.ಟಿ. ಖಾದರ್ 
ಮುಖ್ಯ ಅತಿಥಿಯಾಗಿದ್ದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಾತನಾಡಿ, ತರಗತಿಯಲ್ಲಿ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಬಲಿಷ್ಠವಾದರೆ ದೇಶ ಬಲಿಷ್ಠವಾಗಲು ಸಾಧ್ಯ. ಇದಕ್ಕೆ ಪೂರಕವಾದ ಶಿಕ್ಷಣವನ್ನು ತ್ರಿಶಾ ಸಂಸ್ಥೆ ನೀಡುತ್ತಿರುವುದು ಶ್ಲಾಘನೀಯ. ಶಿಕ್ಷಣ ಜತೆ ವ್ಯಕ್ತಿತ್ವ ರೂಪಿಸುವ ಕೆಲಸ ಆಗಬೇಕು. ಜೀವನದಲ್ಲಿ ಯಶಸ್ವಿಯಾಗಲು ಮಾನವೀಯತೆ, ಕರುಣೆ ಮೊದಲಾದ ಗುಣಗಳನ್ನು ಹೊಂದಿರುವುದು ಅಗತ್ಯ. ಸಂಸ್ಥೆ ಇನ್ನಷ್ಟು ಯಶಸ್ವಿಯಾಗಿ ಮುಂದುವರಿಯಲಿ ಎಂದರು.

ಶಿಕ್ಷಣದ ಜತೆ ನಾಯಕತ್ವ ಗುಣ
ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಯ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ, ತ್ರಿಶಾ ಶಿಕ್ಷಣ ಸಮೂಹದ ಮಂಗಳೂರಿನ ಹೊಸ ಕ್ಯಾಂಪಸ್ ವಿದ್ಯಾರ್ಥಿಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮೌಲ್ಯಾಧಾರಿತ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ತ್ರಿಶಾ ಹೆಚ್ಚಿನ ಆದ್ಯತೆ ನೀಡುತ್ತಿದೆ. ನಮ್ಮ ಸಂಸ್ಕೃತಿ, ಪರಂಪರೆಯನ್ನು ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ವಿವರಿಸುವ ಕೆಲಸವೂ ನಡೆಯಲಿದೆ. ಆ ಮೂಲಕ ಭವಿಷ್ಯದ ಭಾರತದ ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಆದ್ಯತೆ ನೀಡಲಾಗುವುದು ಎಂದರು.

ತ್ರಿಶಾದ ಹೊಸ ಮೈಲಿಗಲ್ಲು
ಮಂಗಳೂರಿನ ಅಳಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡವು ಕೊಟ್ಟಾರದ ಬಂಗ್ರಕೂಳೂರಿನ ಪೋದಾರ್ ಇಂಟರ್‌ನ್ಯಾಷನಲ್ ಸ್ಕೂಲ್ ಬಳಿಯ ಗಣೇಶ್ ಬಾಗ್ ಲೇಔಟ್‌ನ ವಿದ್ಯಾರ್ಥಿ ಗ್ರಾಮಕ್ಕೆ ಸ್ಥಳಾಂತರ ಗೊಂಡಿದೆ. 1.2 ಎಕರೆ ಜಾಗದಲ್ಲಿ ಸುಸಜ್ಜಿತ ಕ್ಯಾಂಪಸ್ ನಿಮಿರ್ಸಸಲಾಗಿದೆ. ನೂತನ ಕಟ್ಟಡವು ವಿದ್ಯಾರ್ಥಿಗಳ ಅಭ್ಯಾಸಕ್ಕೆ ಪೂರಕವಾದ ವಾತಾವರಣ, ವಿದ್ಯಾರ್ಥಿ ಸ್ನೇಹಿ ಕ್ಯಾಂಪಸ್ ಹಾಗೂ ನುರಿತ ಅಧ್ಯಾಪಕ ವೃಂದ ಹಾಸ್ಟೆಲ್ ಸೌಲಭ್ಯವನ್ನು ಹೊಂದಿದೆ. ಮುಂದಿನ ವರ್ಷದಿಂದ ಪಿಯು ಕಾಲೇಜು (ವಿಜ್ಞಾನ ಮತ್ತು ವಾಣಿಜ್ಯ ವಿಭಾಗವನ್ನು ಆರಂಭಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಕಂಪ್ಯೂಟರ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಪ್ರಾರಂಭಿಸಲು ಇಚ್ಛಿಸಿದೆ.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ ವೈ., ಡಿ.ವೇದವ್ಯಾಸ ಕಾಮತ್, ಮೈಸೂರು ಎಂಜಿಬಿ ವಕನ ಪ್ರಮೋಟರ್ ಗೋವಿಂದ ಜಗನಾಥ ಶೆಣೈ, ದೀಕ್ಷಾ ಸಂಸ್ಥೆಯ ಸ್ಥಾಪಕ ಡಾಣ ಶ್ರೀಧರ್ ಜಿ., ಐಸಿಎಐನ ಎಸ್‌ಐಆರ್‌ಸಿ ಮಂಗಳೂರು ಶಾಖೆಯ ಅಧ್ಯಕ್ಷ ಗೌತಮ್ ಪೈ ಡಿ., ಕೆ೨ ಲರ್ನಿಂಗ್ ಸಂಸ್ಥಾಪಕ ಶ್ರೀಪಾಲ್ ಜೈನ್, ಐಸಿಐಸಿಐ ಬ್ಯಾಂಕ್‌ನ ವಲಯ ಮುಖ್ಯಸ್ಥ ಶಶಿಕುಮಾರ್ ಎನ್., ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಡಾ. ನಾರಾಯಣ್ ಕಾಯರ್‌ಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಕಳದ ಜ್ಞಾನಸುಧಾ ಸಂಸ್ಥಾಪಕ ಡಾ. ಸುಧಾಕರ್ ಶೆಟ್ಟಿ, ಪ್ರಮುಖರಾದ ನರಸಿಂಹ ಶೆಣೈ, ಸಿದ್ಧಾಂತ ಫೌಂಡೇಶನ್‌ನ ಆಡಳಿತ ಟ್ರಸ್ಟಿ ರಾಮ್ ಪ್ರಭು, ತ್ರಿಶಾ ಕಾಲೇಜಿನ ಪ್ರಾಂಶುಪಾಲ ಟ್ರಸ್ಟಿ ನಮಿತಾ ಗೋಪಾಲಕೃಷ್ಣ ಭಟ್, ಪ್ರಾಂಶುಪಾಲ ಮಂಜುನಾಥ ಕಾಮತ್ ಎಂ. ತ್ರಿಶಾ ಕ್ಲಾಸಸ್ ಮಂಗಳೂರು ಸೆಂಟರ್ ಹೆಡ್ ಯಶಸ್ವಿನಿ ಯಶ್‌ಪಾಲ್ ಮೊದಲಾದವರು ಉಪಸ್ಥಿತರಿದ್ದರು.

ಪ್ರೊ. ಸಹನಾ ಶೆಟ್ಟಿ ಸಂಸ್ಥೆ ನಡೆದು ಬಂದ ಹಾದಿಯ ಬಗ್ಗೆ ವಿವರಿಸಿದರು. ಸಂಧ್ಯಾ ಕಾಲೇಜು ಪ್ರಾಂಶುಪಾಲೆ ಪ್ರೊ. ಸುಪ್ರಭಾ ಎಂ. ಸ್ವಾಗತಿಸಿದರು.

ಟಾಪ್ ನ್ಯೂಸ್

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

courts-s

Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

1-reasad

Pune; ಘಾಟ್ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇ*ಪ್:ಸ್ನೇಹಿತನಿಗೆ ಹಲ್ಲೆ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.