ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಸಾರಸ್ವತ ಕೊಂಕಣಿಯಲ್ಲಿ ಇದುವರೆಗೆ ತಯಾರಾದ ಚಿತ್ರಗಳೇ ಕೇವಲ ಎಂಟು

Team Udayavani, Oct 4, 2024, 3:55 PM IST

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಉದಯವಾಣಿ ಸಮಾಚಾರ
ಹೊನ್ನಾವರ: ತಮ್ಮ ಅಪ್ಸರಧಾರ ಕೊಂಕಣಿ ಮತ್ತು ಕನ್ನಡ ಚಲನಚಿತ್ರವನ್ನು ಉತ್ತರ ಕನ್ನಡದಲ್ಲಿ ಚಿತ್ರೀಕರಣ ಮಾಡಿ, ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಿದ್ದ ರಮೇಶ ಕಾಮತ್‌ ತಮ್ಮ ಇಳಿವಯಸ್ಸಿನಲ್ಲಿ ಅನಾರೋಗ್ಯದ ನಡುವೆಯೂ ಇನ್ನೊಂದು ಕೊಂಕಣಿ ಚಲನಚಿತ್ರವನ್ನು ಸಿದ್ಧಪಡಿಸಿದ್ದಾರೆ. ಅದು ನವೆಂಬರ್‌ ಮೊದಲ ವಾರದಲ್ಲಿ ತೆರೆಕಾಣಲಿದೆ.

ಪುಣೆ ಫಿಲಂ ಇನ್ಸಟಿಟ್ಯೂಟ್‌ ಪದವೀಧರ ಹಾಗೂ ಕೊಂಕಣಿ ಸಾಹಿತ್ಯ ಅಕೆಡಮಿ ಪ್ರಶಸ್ತಿ ವಿಜೇತ ಡಾ| ಕೆ. ರಮೇಶ್‌ ಕಾಮತ್‌ ಹೊಸ ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ದ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಮಡಿಕೇರಿಯಲ್ಲಿ ಚಿತ್ರೀಕರಣ ಸಂಪೂರ್ಣಗೊಂಡಿದೆ. ಚಲನಚಿತ್ರವೂ ಆದಿತ್ಯ ಸಿನಿ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಕಿರಣ್ಮಯಿ ಕಾಮತ್‌ ನಿರ್ಮಿಸುತ್ತಿದ್ದಾರೆ.

ಅಲ್ಪ ಸಂಖ್ಯಾತರ ಭಾಷೆ ಕೊಂಕಣಿಯಲ್ಲಿ, ಸಾರಸ್ವತ ಕೊಂಕಣಿಯಲ್ಲಿ ಇದುವರೆಗೆ ತಯಾರಾದ ಚಿತ್ರಗಳೇ ಕೇವಲ ಎಂಟು. ಅದರಲ್ಲಿ ಮೂರು ಚಲನಚಿತ್ರಗಳನ್ನು ಡಾ| ರಮೇಶ್‌ ಕಾಮತ್‌ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಕೇವಲ ಭಾಷಾ ಅಭಿಮಾನದಿಂದ, ತಮ್ಮ 72ನೇ ವಯಸ್ಸಿನಲ್ಲಿ ಈಗ ನಾಲ್ಕನೇ ಕೊಂಕಣಿ ಚಲನಚಿತ್ರ ನಿರ್ದೇಶಿಸುತ್ತಿದ್ದಾರೆ. ಅಂತ್ಯಾರಂಭ ಸಾಧಾರಣ ಮನರಂಜನಾತ್ಮಕ ಚಿತ್ರವಾಗದೇ, ಒಂದು ತತ್ವಾಧಾರಿತ ಕಲಾತ್ಮಕ ಚಿತ್ರವಾಗಲಿದೆ.

ಜೀವನದ ವಿವಿಧ ಹಂತದಲ್ಲಿ ಮಾನವನಿಗೆ ಹಲವಾರು ಕಷ್ಟ – ಸಂಕಷ್ಟ ಎದುರಾಗುತ್ತೇವೆ. ಆ ಕಷ್ಟಕ್ಕೆ ಮಾನವ ಹೆದರಿ ಅದೇ ಜೀವನದ ಅಂತ್ಯ ಎಂದು ಭಾವಿಸುತ್ತಾನೆ. ಆದರೆ ಡಾ| ಕಾಮತ್‌ರು, ಸಿನಿಮಾ ಕಥೆಯ ಮೂಲಕ ಜೀವನ ಪಯಣದಲ್ಲಿ ಅಂತ್ಯ ಎಂಬುದೇ ಇಲ್ಲ, ಅದು ಹೊಸ ಆರಂಭಕ್ಕೆ ನಾಂದಿ ಹಾಡುತ್ತದೆ ಎಂಬ ಗಹನ ತತ್ವ ತಿಳಿಸುತ್ತಾರೆ.

ಸಿನಿಮಾದ ಪ್ರಮುಖ ಪಾತ್ರದಲ್ಲಿ ಹಿರಿಯ ವೃದ್ಧ ನಾಯಕನ ಪಾತ್ರದಲ್ಲಿ ಡಾ| ರಮೇಶ್‌ ಕಾಮತ್‌, ಯುವ ನಾಯಕನಾಗಿ ದಾಮೋದರ್‌ ನಾಯಕ್‌, ಯುವ ನಾಯಕಿಯಾಗಿ ಪ್ರಖ್ಯಾತ ರೂಪದರ್ಶಿ ಪ್ರತೀಕ್ಷಾ ಕಾಮತ್‌, ವಿಠೋಭ ಭಂಡಾರ್ಕರ್‌, ಸ್ಟಾನಿ ಆಲ್ವಾರೀಸ್‌, ಪ್ರಖ್ಯಾತ ಯಕ್ಷಿಣಿಗಾರ ಉದಯ್‌ ಜಾದೂಗಾರ್‌, ಶೀಲಾ ನಾಯಕ್‌, ವಸುಧಾ ಪ್ರಭು, ಅನಂತ್‌ ನಾಯಕ್‌ ಸಗ್ರಿ, ನರಸಿಂಹ ನಾಯಕ್‌, ಮಾಸ್ಟರ್‌ ಆದಿತ್ಯ ನಾಯಕ್‌, ಮಾಸ್ಟರ್‌ ಯತಾರ್ಥ, ಸಂದೀಪ್‌ ಮಲಾನಿ, ಪ್ರಕಾಶ್‌ ಕಿಣಿ, ಉಮೇಶ್‌ ಶೆಣೈ, ಕೃಷ್ಠಾ ನಾಯಕ್‌, ಆನಂದ ನಗರ್ಕರ್‌, ವಿನುತಾ ಕಿರಣ್‌, ಗೋವಿಂದರಾಯ್‌ ಶಾನಭೋಗ್‌, ಮತ್ತಿತರರು ಅಭಿನಯಿಸಿದ್ದಾರೆ.

ತಾಂತ್ರಿಕ ವರ್ಗದಲ್ಲಿ ಛಾಯಾಗ್ರಾಹಕರಾಗಿ ಪಿವಿಆರ್‌ ಸ್ವಾಮಿ, ಸಂಕಲನಕಾರರಾಗಿ ನಾಗೇಶ್‌, ಸಂಗೀತ ನಿರ್ದೇಶಕರಾಗಿ ಸುರೇಶ್‌, ಗಾಯಕರಾಗಿ ಶಂಕರ್‌ ಶಾನುಭೋಗ್‌ ಮತ್ತು ಸಂಭಾಷಣೆಯನ್ನು ಪ್ರಶಸ್ತಿ ವಿಜೇತ ಶಾ.ಮಂ. ಕೃಷ್ಣಾರಾಯರು ಬರೆದಿದ್ದಾರೆ.

ನಿರ್ಮಾಪಕಿ: ಕಿರಣ್ಮಯಿ ಕಾಮತ್‌ ಕಥೆ- ಚಿತ್ರಕಥೆ- ಗೀತೆ ರಚನೆ ಮತ್ತು ನಿರ್ದೇಶನ : ಡಾ| ಕೆ. ರಮೇಶ್‌ ಕಾಮತ್‌. ದಕ್ಷಿಣೋತ್ತರ ಕರಾವಳಿ ಜಿಲ್ಲೆಗಳಲ್ಲಿ ಕೊಂಕಣಿ ಭಾಷಿಕರು ಬಹುಸಂಖ್ಯೆಯಲ್ಲಿದ್ದು ತಮ್ಮ ಹಿಂದಿನ ಚಲನಚಿತ್ರಗಳಿಗೆ ನೀಡಿದಂತೆ ಪ್ರೋತ್ಸಾಹ
ನೀಡಬೇಕು ಎಂದು ಡಾ| ರಮೇಶ ಕಾಮತ್‌ವಿನಂತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

1-reasad

Pune; ಘಾಟ್ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇ*ಪ್:ಸ್ನೇಹಿತನಿಗೆ ಹಲ್ಲೆ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.