Women: ಕ್ಷಮಯಾ ಧರಿತ್ರಿ


Team Udayavani, Oct 4, 2024, 6:00 PM IST

14-uv-fusion

ಹೆಣ್ಣು ಈ ಭೂಮಿಗೆ ದೇವರ ನೀಡಿದ ಅತ್ಯಮೂಲ್ಯ ಕೊಡುಗೆ. ಭೂಮಿ ಮತ್ತು ಹೆಣ್ಣನ್ನು ಸಮಾನವಾಗಿ ಕಾಣುತ್ತದೆ ನಮ್ಮ ಸಂಸ್ಕೃತಿ. ಏಕೆಂದರೆ ಇಬ್ಬರಿಗೂ ಸೃಷ್ಟಿಸುವ ಶಕ್ತಿ ಇದೆ. ಜಗತ್ತಿನ ಎಲ್ಲ ಜೀವರಾಶಿಗಳಿಗೆ ಜನ್ಮ ಕೊಡುವವಳು ಹೆಣ್ಣು (ಪ್ರಕೃತಿ), ಜಗತ್ತಿನ ಅತಿರಥ ಮಹಾರಥರಿಗೆಲ್ಲಾ ಜನ್ಮ ಕೊಟ್ಟಿರುವವಳು ಹೆಣ್ಣು. ಆದರೆ ಈ ಸೃಷ್ಟಿಸುವ ಶಕ್ತಿಯೇ ಹೆಣ್ಣಿಗೂ ಭೂಮಿಗೂ ಅನನುಕೂಲವಾಗಿ ಪರಿಣಮಿಸಿರುವುದು ಇತಿಹಾಸಗಳುದ್ದಕ್ಕೂ ಕಾಣುತ್ತೇವೆ.

ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾ, ಅಂದರೆ ಹೆಣ್ಣನ್ನು ಎಲ್ಲಿ ನಾವು ಆರಾಧಿಸುತ್ತೇವೆಯೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದು. ಸ್ತ್ರೀಯನ್ನು ಶಕ್ತಿ ಸ್ವರೂಪಿಣಿಯಾಗಿ ಆರಾಧಿಸಿದ ದೇಶ ನಮ್ಮದು. ಸ್ತ್ರೀಯನ್ನು ಕತೃಥ್ವ, ನೇತೃಥ್ವ, ತಾಯತ್ವ ಎಂಬ ಮೂರು ದೃಷ್ಟಿಯಿಂದ ನೋಡುತ್ತೇವೆ.

ಖ್ಯಾತ ವಾಕ್ಯವೊಂದಿದೆ. ನಾನು ಹುಟ್ಟಿದಾಗ ಒಬ್ಬ ಹೆಂಗಸು ನನ್ನ ಕೈ ಹಿಡಿದುಕೊಂಡಳು, ಅವಳೇ ತಾಯಿ. ನಾನು ಮಗುವಾಗಿ ಆಟವಾಡುತಿದ್ದಾಗ ಒಬ್ಬ ಹೆಂಗಸು ನನ್ನ ಜೋಪಾನ ಮಾಡಿ ನನ್ನ ಜತೆ ಆಟವಾಡುತಿದ್ದಳು, ಅವಳೇ ಅಕ್ಕ. ಪ್ರತಿಯೊಂದಕ್ಕೂ ತರಲೆ ಮಾಡುತ್ತಾ ಪೀಡಿಸಿದರೂ ಇಷ್ಟ ಪಡುವವಳೇ ತಂಗಿ. ನಾನು ಶಾಲೆಗೆ ಹೋಗುವಾಗ ಒಬ್ಬ ಹೆಂಗಸು ನನಗೆ ಪಾಠ ಹೇಳಿ ಕೊಡುತ್ತಿದ್ದಳು, ಅವಳೇ ಶಿಕ್ಷಕಿ. ಸದಾ ಸಹಾಯ ಮಾಡುತ್ತಾ ಗಂಡನ ಬೇಕು ಬೇಡಗಳನ್ನು ನೋಡಿಕೊಳ್ಳುತ್ತಾ, ಪ್ರೀತಿ ಮಾಡುತ್ತಾ, ಬಂದವಳು, ಅವಳೇ ಹೆಂಡತಿ. ಅಪ್ಪನಿಗೆ ಕಷ್ಟ ಬಂದಾಗ ಕಣ್ಣೀರು ಹಾಕಿದವಳು, ಅವಳೇ ಮಗಳು. ಕೊನೆಗೆ ಸತ್ತು ಚಟ್ಟವೇರಿದಾಗ ಮಲಗಲು ಜಾಗ ಕೊಟ್ಟ ಭೂಮಿಯೂ ಒಂದು ಹೆಣ್ಣು. ಹೀಗೆ ಸರ್ವ ಪಾತ್ರಗಳನ್ನು ನಿಭಾಯಿಸುವ ಆಧಾರಸ್ತಂಭ ಹೆಣ್ಣಾಗಿದ್ದಾಳೆ.

ಆದರೆ ಇಂದಿನ ಪ್ರಪಂಚದಲ್ಲಿ ಸ್ತ್ರೀಯ ಮೇಲೆ ನಡೆಯುತ್ತಿರುವ ಹತ್ತಾರು ರೀತಿಯ ಶೋಷಣೆಗಳಿಂದ ಇಂತಹ ಅಮೂಲ್ಯ ಸಂಪತ್ತನ್ನು ಅರ್ಥೈಸುವಲ್ಲಿ, ಗೌರವಿಸುವಲ್ಲಿ ನಾವು ಎಡವಿದ ಬಗ್ಗೆ ಕಳವಳವಿದೆ. ಬಣ್ಣಬಣ್ಣದ ಕನಸು ಕಟ್ಟಿದ ಹೆಣ್ಣಿಗೆ ಮಸಿ ಬಳಿಯುವವರೇ ಬಹಳ. ಹೆಣ್ಣಿನ ಮೇಲೆ ಪುರುಷ ವರ್ಗದ ಪೌರುಷ ಅಗಣಿತ. ವಿಶ್ವಾದ್ಯಂತ ಹೆಣ್ಣು ಮಕ್ಕಳ ಮೇಲೆ ವಿವಿಧ ರೀತಿಯಲ್ಲಿ ದಾಳಿಗಳಾಗುತ್ತಿವೆ. ಹೆಣ್ಣಿಗೆ ಶ್ರೇಷ್ಠ ಸ್ಥಾನ ನೀಡಿರುವ ಭಾರತದಲ್ಲೂ ಆಕೆ ಅಸುರಕ್ಷಿತವಾಗಿದ್ದಾಳೆ.

2021ರಲ್ಲಿ 31,677 ಅತ್ಯಾಚಾರ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. 2012ರಲ್ಲಿ ದಿಲ್ಲಿಯಲ್ಲಿ ನಡೆದ ನಿರ್ಭಯ ಮೇಲಿನ ಸಾಮೂಹಿಕ ಅತ್ಯಾಚಾರ, 2018ರಲ್ಲಿ ನಡೆದ 8 ವರ್ಷದ ಬಾಲಕಿ ಆಸಿಫಾ ಮೇಲಿನ ಅತ್ಯಾಚಾರ, 2019ರಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿ ದಿಶಾ ಮೇಲಿನ ಅತ್ಯಾಚಾರ, ಸೌಜನ್ಯಾಳ ಮೇಲಿನ ಅತ್ಯಾಚಾರ, ಇದೇ ವರ್ಷ ನಡೆದ ಕೊಲ್ಕತಾದ ವೈದ್ಯಕೀಯ ವಿದ್ಯಾರ್ಥಿನಿ ಮೌಮಿತ ಮೇಲಿನ ಸಾಮೂಹಿಕ ಅತ್ಯಾಚಾರ ಹೀಗೆ ಸಾಲು ಸಾಲು ಅತ್ಯಾಚಾರಗಳು ದೇಶದಲ್ಲಿ ನಡೆಯುತ್ತಿದ್ದರೂ ನಮ್ಮ ದೇಶದ ಕಾನೂನು ಅಪರಾಧಿಗಳಿಗೆ ಶಿಕ್ಷೆಯನ್ನು ವಿಧಿಸುವಲ್ಲಿ ಯಾಕೆ ಮೌನವಾಗಿದೆ ಎಂಬುದು ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಕಾನೂನು ಕಟ್ಟಡಗಳಲ್ಲಿ ಸ್ತ್ರೀ ಪರವಾದ ವಿಚಾರಗಳಿವೆ, ಸಾಮಾಜಿಕವಾಗಿ ಮಹಿಳಾ ಆಯೋಗಗಳ ನೆರಳಿದೆ, ಇವೇನೇ ಇರಲಿ ಸ್ತ್ರೀಶೋಷಣೆ ಮುಕ್ತವಾಗಿಲ್ಲ ಎಂಬುದಂತೂ ಕಟುಸತ್ಯ.

ಹೆಣ್ಣಿನ ಮೇಲಿನ ದೌರ್ಜನ್ಯಕ್ಕೆ ಧರ್ಮವಿಲ್ಲವಾಗಿದೆ. ಕಾಮಕ್ಕೆ ಕಣ್ಣಿಲ್ಲ’ ಎನ್ನುತ್ತಲೇ ಆಕೆಯ ಮೇಲೆ ಮೃಗಗಳಂತೆ ಎರಗುತ್ತಿದ್ದಾರೆ. ಅಸಹಾಯಕಳಾಗಿ ಬಳಿಗೆ ಬಂದ ಹೆಣ್ಣು ಗಂಡಿನ ಕಾಮಕ್ಕೆ ಸಮ್ಮತಿಯೆಂಬ ಭಾವನೆಯಲ್ಲಿ ಬದುಕುವ ಸಮೂಹ ನಮ್ಮದು. ಅದನ್ನು ತಡೆಯುವ ಸಾಮರ್ಥ್ಯವಿದ್ದರೂ ಮೌನಕ್ಕೆ ಜಾರಿರುವ ವ್ಯವಸ್ಥೆ ನಮ್ಮದು.

ಜನ್ಮಕೊಟ್ಟ ತಾಯಿಯೂ ಒಂದು ಹೆಣ್ಣೇ. ಹೆಣ್ಣಿಗೆ ಮಾನವೇ ಭೂಷಣ. ಹೆಣ್ಣನ್ನು ಗೌರವಿಸದ ಸಮಾಜ ಸಭ್ಯವೆನಿಸಿಕೊಳ್ಳದು. ಆಕೆಗೆ ಕೆಲವೊಂದು ಇತಿಮಿತಿಗಳಿವೆ. ಆದರೆ ಅವುಗಳೇ ಆಕೆಯ ಶೋಷಣೆಗೆ ಸಕಾರಣವಾಗದು. ಹೆಣ್ಣಿನ ತ್ಯಾಗ ಅದೆಷ್ಟೋ ಸಂಸಾರದ ಸಂತಸಕ್ಕೆ ಕಾರಣವಾಗಿವೆ. ತನ್ನೆಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಮಾಡುವ ಅವಳ ಗುಣಕ್ಕೆ ಇರಬಹುದು ಕ್ಷಮಯಾಧರಿತ್ರಿ ಎಂದು ಆಕೆಯನ್ನು ಸಂಬೋಧಿಸಿರುವುದು. ಮನುಕುಲದ ಮುನ್ನಡೆಯುವಿಕೆಗೆ ಪ್ರಕೃತಿ ಮತ್ತು ಹೆಣ್ಣು ಅನಿವಾರ್ಯ. ಹೆಣ್ಣಿನ ಸಹನಾಶೀಲತೆಯೇ ನಮಗೆ ಶ್ರೀರಕ್ಷೆ ಎಂಬುದನ್ನು ಅರಿತುಕೊಂಡು, ಆಕೆಗೆ ಗೌರವ ನೀಡಿದಾಗಲೇ ಪ್ರಕೃತಿ ನಮ್ಮನ್ನು ಕ್ಷಮಿಸಬಲ್ಲದು.

 ಅಪ್ಸಾನಾ ಬಿ. ಎನ್‌.

ಎಂ.ಎಸ್‌.ಆರ್‌.ಎಸ್‌. ಕಾಲೇಜು,

ಶಿರ್ವ

ಟಾಪ್ ನ್ಯೂಸ್

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

DK-Shiva-Kumar

By Polls: ಚನ್ನಪಟ್ಟಣದ ಅಭಿವೃದ್ಧಿ ನಾನೇ ಮಾಡುವೆ, ಅಭ್ಯರ್ಥಿ ನೆಪಕ್ಕೆ ಮಾತ್ರ: ಡಿಕೆಶಿ

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಮೃಗಗಳ ಜಗತ್ತು

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

9

Cricketer: ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ರಶೀದ್‌ ಖಾನ್

dw

Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.