Naxalites Encounter: ಛತ್ತೀಸ್‌ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!

ಒಂದೇ ವರ್ಷದಲ್ಲಿ 185 ನಕ್ಸಲರ ಕೊಂದ ಭದ್ರತಾ ಪಡೆಗಳು, ಪೊಲೀಸರು, ದೊಡ್ಡ ಯಶಸ್ವಿ ಕಾರ್ಯಾಚರಣೆ ಎಂದ ಸಿಎಂ ವಿಷ್ಣು ದೇವ್ ಸಾಯಿ

Team Udayavani, Oct 4, 2024, 11:03 PM IST

Naxal

ದಾಂತೇವಾಢ: ಛತ್ತೀಸ್‌ಗಢದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಶುಕ್ರವಾರ ಪೊಲೀಸ್ ಪಡೆಗಳು ಬಸ್ತಾರ್‌ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಎನ್‌ಕೌಂಟರ್‌ನಲ್ಲಿ 30 ಮಂದಿ ನಕ್ಸಲರು ಹತರಾಗಿದ್ದಾರೆ.

ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ, ನಾರಾಯಣಪುರ ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿರುವ ಅಭುಜ್‌ಮಾದ್‌ನ ತುಲುತುಲಿ ಮತ್ತು ನೆಂದೂರ್ ಗ್ರಾಮಗಳ ನಡುವಿನ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತರ್ ಪ್ರದೇಶದ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್  ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಎಕೆ 47, ಶಸ್ತ್ರಾಸ್ತ್ರಗಳ ವಶ
ಛತ್ತೀಸ್‌ಗಢ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಕಾರ್ಯಾಚರಣೆ ವೇಳೆ ಎಕೆ 47  ಮತ್ತು ಸ್ವಯಂ ಲೋಡಿಂಗ್ ರೈಫಲ್  ಸೇರಿದಂತೆ ಶಸ್ತ್ರಾಸ್ತ್ರಗಳ ವಶಪಡಿಸಿಕೊಳ್ಳಲಾಗಿದೆ ಎಂದರು.

185 ನಕ್ಸಲರ ಎನ್‌ಕೌಂಟರ್‌
 ದಾಂತೇವಾಡ ಮತ್ತು ನಾರಾಯಣಪುರ ಸೇರಿ ಒಟ್ಟು ಏಳು ಜಿಲ್ಲೆಗಳ ಒಳಗೊಂಡ ಬಸ್ತಾರ್ ಪ್ರದೇಶದಾದ್ಯಂತ, ಭದ್ರತಾ ಪಡೆಗಳು ಹಾಗೂ ಪೊಲೀಸರೊಂದಿಗಿನ ವಿವಿಧ ಗುಂಡಿನ ಕಾಳಗದಲ್ಲಿ ಕನಿಷ್ಠ 185 ನಕ್ಸಲರ ಎನ್‌ಕೌಂಟರ್‌ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಏ.16 ರಂದು ಸಹ, ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ಸಂಘಟನೆಯ ಹಿರಿಯ ನಕ್ಸಲ್​ಗಳು ಸೇರಿದಂತೆ 29 ನಕ್ಸಲೀಯರು ಎನ್‌ಕೌಂಟರ್‌ ಮಾಡಿದ್ದರು.

ನಕ್ಸಲಿಸಂ ಸಂಪೂರ್ಣ ನಿರ್ನಾಮ ಮಾಡುವೆವು: ಛತ್ತೀಸ್‌ಗಢ ಸಿಎಂ
ಒಂದು ದೊಡ್ಡ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಿದ್ದೇವೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲ ಪೊಲೀಸ್‌ ಸಿಬ್ಬಂದಿಗೆ ಶುಭಾಶಯಗಳು..  ಭದ್ರತಾ ಸಿಬ್ಬಂದಿ ಸಾಧಿಸಿದ ಈ ಮಹಾನ್ ಯಶಸ್ಸು ಶ್ಲಾಘನೀಯವಾದ್ದು, ಅವರ ಧೈರ್ಯ, ಅದಮ್ಯ ಶೌರ್ಯಕ್ಕೆ ನಾನು ವಂದಿಸುತ್ತೇನೆ. ರಾಜ್ಯದಲ್ಲಿ  ನಕ್ಸಲಿಸಂ ತನ್ನ ಕೊನೆಯ ಉಸಿರನ್ನಷ್ಟೇ ಉಳಿಸಿಕೊಂಡಿದೆ. ರಾಜ್ಯದಲ್ಲಿ ನಕ್ಸಲಿಸಂ ಸಂಪೂರ್ಣ ನಿರ್ನಾಮ ಮಾಡುತ್ತೇವೆ.

ನಮ್ಮ ಡಬಲ್ ಎಂಜಿನ್ ಸರ್ಕಾರದ ಗುರಿಯಾಗಿದೆ. ನಕ್ಸಲಿಸಂ ನಾಶ ಮಾಡುವ ಉದ್ದೇಶದಿಂದ ಕಳೆದ 9 ತಿಂಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿ ಮಾರ್ಚ್‌ 2026ರೊಳಗೆ ನಕ್ಸಲಿಸಂನ್ನು ಕೊನೆಗಾಣಿಸುವ ಗುರಿ ಸಾಧಿಸುವ ಮಾತುಗಳನ್ನು ಹೇಳಿದ್ದು, ಅದಕ್ಕೆ ಪೂರಕವಾದ ಕೆಲಸದಲ್ಲಿ ನಿರತರಾಗಿದ್ದೇವೆ  ಎಂದು ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಹೇಳಿದ್ದಾರೆ.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

1-sadguru

Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

1-reasad

Pune; ಘಾಟ್ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇ*ಪ್:ಸ್ನೇಹಿತನಿಗೆ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.