Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

ಶುಕ್ರವಾರದ ಪ್ರಾರ್ಥನೆ ಬಳಿಕ ಸಾವಿರಾರು ಇರಾನಿಯನ್ನರನ್ನು ಉದ್ದೇಶಿಸಿ ಮಾತು

Team Udayavani, Oct 4, 2024, 9:58 PM IST

1-trew

ಟೆಹರಾನ್‌: “ಇನ್ನು ಹೆಚ್ಚು ದಿನ ಇಸ್ರೇಲ್‌ ಉಳಿ ಯುವುದಿಲ್ಲ’ ಎಂಬ ಕಠಿನ ಸಂದೇಶವನ್ನು ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ನೀಡಿದ್ದಾರೆ. 5 ವರ್ಷಗಳಲ್ಲಿಯೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಶುಕ್ರವಾರ ಟೆಹರಾನ್‌ನ ಮಸೀದಿ ಯಲ್ಲಿ ಸಾಮೂಹಿಕ ಪ್ರಾರ್ಥನೆಯಾಗಿ ಭಾಗಿಯಾದ ಬಳಿಕ ಅವರು ಮಾತನಾಡಿದರು.

ಖಮೇನಿ, ಇಸ್ರೇಲ್‌ ವಿರುದ್ಧ ಪ್ಯಾಲೆಸ್ತೀನಿಯರು ಮತ್ತು ಲೆಬನಾನಿಗರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಜತೆಗೆ ಇತ್ತೀಚೆಗೆ ಇಸ್ರೇಲ್‌ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ’ ಎಂದೂ ಬಣ್ಣಿಸಿದರು. ಹಮಾಸ್‌ ಅಥವಾ ಹೆಜ್ಬುಲ್ಲಾ ವಿರುದ್ಧ ಇಸ್ರೇಲ್‌ ಹೆಚ್ಚು ಬಾಳಿಕೆ ಬರಲ್ಲ ಎಂದು ಖಮೇನಿ ಹೇಳುತ್ತಿದ್ದಂತೆ, ಮಸೀದಿಯ ಆವರಣದಲ್ಲಿ ಸೇರಿದ್ದ ಸಾವಿರಾರು ಜನರು “ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಘೋಷಣೆ ಮೊಳಗಿಸಿದರು.

ಐತಿಹಾಸಿಕ ಇಮಾಮ್ ಖೊಮೇನಿ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಸಾವಿರಾರು ಇರಾನಿಯನ್ನರನ್ನು ಉದ್ದೇಶಿಸಿ ಮಾತನಾಡಿದ  ಖಮೇನಿ ಅವರು  ರಷ್ಯಾ ನಿರ್ಮಿತ ಡ್ರಾಗುನೋವ್ ರೈಫಲ್ ಹಿಡಿದಿದ್ದರು.

ಪ್ರತಿಭಟನೆ ನಡೆಸುತ್ತಿರುವ ಲೆಬನಾನ್‌ ಮತ್ತು ಪ್ಯಾಲೆಸ್ತೀನಿಯರ ಬಗ್ಗೆ ಆಕ್ಷೇಪಿಸಲು ಯಾವುದೇ ಅಂತಾರಾಷ್ಟ್ರೀಯ ಕಾನೂನುಗಳಿಗೆ ಅವಕಾಶವಿಲ್ಲ ಎಂದರು. ಭಾಷಣದಲ್ಲಿ ಖಮೇನಿ ಇತ್ತೀಚೆಗೆ ಇಸ್ರೇಲ್‌ ದಾಳಿಗೆ ಸಾವನ್ನಪ್ಪಿದ ಹೆಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನನ್ನೂ ಹಾಡಿ ಹೊಗಳಿದರು. ವಿಶೇಷವೆಂದರೆ, ಈ ಭಾಷಣದ ವೇಳೆ ಖಮೇನಿ ಅವರು ತಮ್ಮ ಪಕ್ಕದಲ್ಲೇ ಗನ್‌ವೊಂದನ್ನು ಇರಿಸಿಕೊಂಡಿದ್ದು ಎಲ್ಲರ ಗಮನ ಸೆಳೆಯಿತು.

ಖಮೇನಿ ಭಾಷಣ ಅಂತ್ಯ ಆಗುತ್ತಿದ್ದಂತೆ ಹೆಜ್ಬುಲ್ಲಾ ದಾಳಿ

ಟೆಹರಾನ್‌: ಇಸ್ರೇಲ್‌-ಇರಾನ್‌ ಸಂಘರ್ಷದ ಹಿನ್ನೆಲೆಯಲ್ಲಿ ಸುಮಾರು 5 ವರ್ಷಗಳ ಅಯತೊಲ್ಲಾ ಅಲಿ ಖಮೇನಿ ಸಾರ್ವಜನಿಕವಾಗಿ ಶುಕ್ರವಾರ ಮಾತನಾಡಿದರು. ಅವರ ಭಾಷಣ ಪೂರ್ಣಗೊಳ್ಳುತ್ತಿದ್ದಂತೆ ಉತ್ತರ ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ಬಂಡುಕೋರರು ದಾಳಿ ನಡೆಸಿದ್ದಾರೆಂದು ವರದಿಯಾಗಿದೆ.

ಹೌತಿ ಬಂಡುಕೋರರ ಮೇಲೆ ಅಮೆರಿಕ ದಾಳಿ?

ಸನಾ: ಯೆಮೆನ್‌ನಲ್ಲಿ ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ 3 ನಗರಗಳ ಮೇಲೆ ಅಮೆರಿಕ ದಾಳಿ ಮಾಡಿದೆ ಎಂದು ಯೆಮೆನ್‌ನ ಮಾಧ್ಯ ಮಗಳು ವರದಿ ಮಾಡಿವೆ. ರಾಜಧಾನಿ ಸನಾ, ಹೊದೈದಾ,  ದಕ್ಷಿಣದ ಧಮಾರ್‌ ನಗರವನ್ನೂ ಗುರಿಯಾಗಿಸಿ ಹಲವಾರು ಬಾರಿ ಅಮೆರಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇಸ್ರೇಲ್‌ ಪಡೆ ಮೇಲೆ ಲೆಬನಾನ್‌ ಸೇನೆ ದಾಳಿ

ಇದೇ ಮೊದಲ ಬಾರಿಗೆ ಲೆಬನಾನ್‌ ಸೇನಾ ಪಡೆಗಳು ಇಸ್ರೇಲಿ ಸೇನೆ ಮೇಲೆ ದಾಳಿ ನಡೆಸಿವೆ. ದಕ್ಷಿಣ ಲೆಬ ನಾನ್‌ನಲ್ಲಿರುವ ಪಡೆಗಳ ವಿರುದ್ಧ ಕಾರ್ಯಾ ಚರಣೆಯನ್ನು ಕೈಗೊಂಡಿವೆ. ಒಳ ನುಗ್ಗಿರುವ ವಿರುದ್ಧ ಇಸ್ರೇಲ್‌ ಪಡೆಗಳ ವಿರುದ್ಧ ದಾಳಿಗಳು ನಡೆದಿವೆ ಎಂದು ಹೆಜ್ಬುಲ್ಲಾ ಹೇಳಿಕೊಂಡಿದೆ. ಪ್ರತ್ಯೇಕ ಘಟನೆ ಗಳಲ್ಲಿ 12ಕ್ಕೂ ಹೆಚ್ಚು ತಮ್ಮ ಯೋಧರು ಮೃತಪಟ್ಟ ಹಿನ್ನೆಲೆಯಲ್ಲಿ ಲೆಬನಾನ್‌ ಸೇನೆ ಈ ದಾಳಿ ನಡೆಸಿದೆ.

2 ತಿಂಗಳ ಬಳಿಕ ಇಸ್ರೇಲ್‌ ಮೇಲೆ ಹಮಾಸ್‌ ದಾಳಿ

ಶುಕ್ರವಾರ ಗಾಜಾ ಪಟ್ಟಿಯಿಂದ 2 ರಾಕೆಟ್‌ ದಾಳಿ ನಡೆದಿದೆ ಎಂದು ಇಸ್ರೇಲ್‌ ಸೇನೆ ಹೇಳಿದೆ. ಸುಮಾರು 2 ತಿಂಗಳ ಬಳಿಕ ಗಾಜಾ ಪಟ್ಟಿಯಿಂದ ಈ ದಾಳಿ ನಡೆದಿದೆ. ದಾಳಿ ನಡೆಯುತ್ತಿದ್ದಂತೆ ಗಾಜಾ ಪಟ್ಟಿಯ ಬಳಿ ಇರುವ ಕಿಸ್ಸು ಫ‌ುಮ್‌, ಹಶ್ಲೋಶಾ ಪ್ರದೇಶಲ್ಲಿ ಸೈರನ್‌ ಮೊಳಗಿಸಲಾಯಿತು. ಆದರೆ, ಸಾವು ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ.

ಟಾಪ್ ನ್ಯೂಸ್

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Exam 2

SSLC; ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ ಅ. 25 ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.