Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ


Team Udayavani, Oct 4, 2024, 10:47 PM IST

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

ದುಬೈ: ವನಿತಾ ಟಿ20 ವಿಶ್ವಕಪ್‌ ಶುಕ್ರವಾರದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 10 ವಿಕೆಟ್‌ಗಳಿಂದ ವೆಸ್ಟ್‌ ಇಂಡೀಸನ್ನು ಮಣಿಸಿ ಇತರೆ ತಂಡಗಳಿಗೆ ಎಚ್ಚರಿಕೆ ನೀಡಿದೆ. “ಬಿ’ ವಿಭಾಗದ ಈ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವೆಸ್ಟ್‌ ಇಂಡೀಸ್‌ಗೆ ಗಳಿಸಲು ಸಾಧ್ಯವಾದದ್ದು 6 ವಿಕೆಟಿಗೆ 118 ರನ್‌ ಮಾತ್ರ. ದಕ್ಷಿಣ ಆಫ್ರಿಕಾ ಬರೀ 17.5 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 119 ರನ್‌ ಬಾರಿಸಿತು.

ಎಡಗೈ ಸ್ಪಿನ್ನರ್‌ ನೊಂಕುಲುಲೆಕೊ ಮಲಾಬಾ 29 ರನ್ನಿಗೆ 4 ವಿಕೆಟ್‌ ಕೆಡವಿ ವೆಸ್ಟ್‌ಇಂಡೀಸ್‌ ಕುಸಿತದಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದು ಅವರ ಜೀವನಶ್ರೇಷ್ಠ ಬೌಲಿಂಗ್‌ ಸಾಧನೆಯಾಗಿದೆ. ಉಳಿದೆರಡು ವಿಕೆಟ್‌ ಮರಿಜಾನ್‌ ಕಾಪ್‌ ಪಾಲಾದವು. ವಿಂಡೀಸ್‌ ಪರ ಅಜೇಯ 44 ರನ್‌ ಮಾಡಿದ ಸ್ಟಫಾನಿ ಟೇಲರ್‌ ಅವರದೇ ಹೆಚ್ಚಿನ ಗಳಿಕೆ. ಕೀಪರ್‌ ಶಿಮೇನ್‌ ಕ್ಯಾಂಬೆಲ್ಲೆ 17, ಝೈದಾ ಜೇಮ್ಸ್‌ ಅಜೇಯ 15 ರನ್‌ ಮಾಡಿದರು.

ಚೇಸಿಂಗ್‌ ವೇಳೆ ದಕ್ಷಿಣ ಆಫ್ರಿಕಾ ಆರಂಭಿಕರಾದ, ನಾಯಕಿ ಲಾರಾ ವೋಲ್ವಾರ್ಟ್‌ 59 (55 ಎಸೆತ, 7 ಬೌಂಡರಿ) ಮತ್ತು ಟಾಜ್ಮಿನ್‌ ಬ್ರಿಟ್ಸ್‌ 57 (52 ಎಸೆತ, 6 ಬೌಂಡರಿ ) ರನ್‌ ಬಾರಿಸಿ ಅಜೇಯರಾಗಿ ಉಳಿದರು. ನೊಂಕುಲುಲೆಕೊ ಮಲಾಬಾ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ವೆಸ್ಟ್‌ ಇಂಡೀಸ್‌ 20 ಓವರ್‌, 118/6 (ಸ್ಟಫಾನಿ ಟೇಲರ್‌ 44, ಶಿಮೇನ್‌ ಕ್ಯಾಂಬೆಲ್ಲೆ 17, ನೊಂಕುಲುಲೆಕೊ ಮಲಾಬಾ 29ಕ್ಕೆ 4, ಮರಿಜಾನ್‌ 14ಕ್ಕೆ 2). ದ.ಆಫ್ರಿಕಾ 17.5 ಓವರ್‌, 119/0 (ಲಾರಾ ವೋಲ್ವಾರ್ಟ್‌ ಅಜೇಯ 59, ಟಾಜ್ಮಿನ್‌ ಬ್ರಿಟ್ಸ್‌ ಅಜೇಯ 57).

ಪಂದ್ಯಶ್ರೇಷ್ಠ: ನೊಂಕುಲುಲೆಕೊ ಮಲಾಬಾ.

ಪಂದ್ಯದ ತಿರುವು
ಮೊದಲು ಬ್ಯಾಟಿಂಗ್‌ ಮಾಡಿದ ವಿಂಡೀಸ್‌ನ ಅಗ್ರ 5 ವಿಕೆಟ್‌ಗಳು 62 ರನ್‌ಗಳಿಗೆ ಉರುಳಿಕೊಂಡಿದ್ದವು. ಆಗಲೇ ಅದು ಕಡಿಮೆ ಮೊತ್ತ ಗಳಿಸುವುದು ಖಾತ್ರಿಯಾಗಿ, ಸೋಲಿನತ್ತ ಧಾವಿಸಿತ್ತು.

ಇದನ್ನೂ ಓದಿ: BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

9

Cricketer: ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ರಶೀದ್‌ ಖಾನ್

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.