TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ
Team Udayavani, Oct 5, 2024, 7:00 AM IST
ರಾಜ್ಯದಲ್ಲಿ ಚಾರಣವನ್ನು ವ್ಯವಸ್ಥಿತವಾಗಿಸುವ ಹಾಗೂ ಅರಣ್ಯ ಪ್ರದೇಶದ ಪರಿಸರ ಮತ್ತು ವನ್ಯಜೀವಿಗಳ ಆವಾಸಸ್ಥಾನ ಮತ್ತು ಓಡಾಟಕ್ಕೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವ ಮಹತ್ತರ ಉದ್ದೇಶದಿಂದ ರಾಜ್ಯ ಸರಕಾರ ಚಾರಣಿಗರಿಗೆ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆಯನ್ನು ಆರಂಭಿಸಿದೆ. ಇದಕ್ಕಾಗಿ ಪ್ರತ್ಯೇಕ ಅರಣ್ಯವಿಹಾರ ಎನ್ನುವ ವೆಬ್ಸೈಟ್ ಅನ್ನು ಪರಿಚಯಿಸಲಾಗಿದ್ದು, ಇದರ ಮೂಲಕ ಮುಂಗಡ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಈ ಹೊಸ ವ್ಯವಸ್ಥೆಯ ಪರಿಚಯದಿಂದ ರಾಜ್ಯದ ಚಾರಣ ಪ್ರದೇಶಗಳಿಗೆ ಭೇಟಿ ನೀಡುವವರ ಸವಿವರ ಮಾಹಿತಿ ಇಲಾಖೆಗೆ ಲಭಿಸಲಿದೆಯಲ್ಲದೆ ಯಾವ್ಯಾವ ಚಾರಣ ಪಥದಲ್ಲಿ ಎಷ್ಟೆಷ್ಟು ಮಂದಿ ಚಾರಣ ಕೈಗೊಂಡಿದ್ದಾರೆ ಎಂಬ
ಅಧಿಕೃತ ಅಂಕಿಅಂಶವೂ ದೊರೆಯಲಿದೆ. ಸದ್ಯ ಆರಂಭಿಸಲಾಗಿರುವ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆಯ ಮೂಲಕ ಒಂದು ಫೋನ್ ನಂಬರ್ನಿಂದ 10 ಟಿಕೆಟ್ಗಳನ್ನಷ್ಟೇ ಕಾಯ್ದಿರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಮುಂಗಡ ಟಿಕೆಟ್ ಕಾಯ್ದಿರಿಸುವ ಸಂದರ್ಭದಲ್ಲಿ ಚಾರಣಕ್ಕೆ ತೆರಳಲಿರುವ ಸದಸ್ಯರೆಲ್ಲರೂ ಇಲಾಖೆ ನಿಗದಿಪಡಿಸಿರುವ ಅಧಿಕೃತ ಗುರುತಿನ ಚೀಟಿಗಳ ಪೈಕಿ ಯಾವುದಾದರೊಂದನ್ನು ಕಡ್ಡಾಯವಾಗಿ ಸಲ್ಲಿಸಬೇಕು ಹಾಗೂ ಯಾರು ಚಾರಣಕ್ಕಾಗಿ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡಿದ್ದಾರೋ ಅವರು ಮಾತ್ರವೇ ಚಾರಣಕ್ಕೆ ತೆರಳಬಹುದಾಗಿದೆ. ಇದರಿಂದಾಗಿ ಬೇಕಾಬಿಟ್ಟಿಯಾಗಿ ಚಾರಣಕ್ಕೆ ತೆರಳುವ ಜನರ ಚಾಳಿಗೆ
ಕಡಿವಾಣ ಬೀಳಲಿದೆ. ಇದೇ ವೇಳೆ ನಿರ್ದಿಷ್ಟ ಚಾರಣ ಪಥದಲ್ಲಿ ಪ್ರತೀದಿನ 300 ಚಾರಣಿಗರ ಪ್ರವೇಶಕ್ಕೆ ಮಾತ್ರವೇ ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಕ್ರಮದಿಂದ ಚಾರಣ ಪಥದಲ್ಲಿ ಜನದಟ್ಟಣೆ ಹೆಚ್ಚಿ, ವನ್ಯಜೀವಿಗಳ ಸಹಜ ಓಡಾಟಕ್ಕೆ ಸಮಸ್ಯೆಯಾಗುವುದು ತಪ್ಪಲಿದೆ.
ಈ ಹೊಸ ವ್ಯವಸ್ಥೆಯಲ್ಲಿ ಅರಣ್ಯ ಪ್ರದೇಶದ ಪರಿಸರ ರಕ್ಷಿಸುವ ನಿಟ್ಟಿನಲ್ಲಿಯೂ ಕೆಲವು ಸೂಕ್ತ ಉಪಕ್ರಮಗಳನ್ನು ಪರಿಚಯಿಸಲಾಗಿದೆ. ಪ್ರತೀ 10-20 ಮಂದಿ ಚಾರಣಿಗರಿಗೆ ಇಕೋ ಟೂರಿಸಂ ಬೋರ್ಡ್ನಲ್ಲಿ ನೋಂದಣಿ ಮಾಡಿಕೊಂಡಿರುವ ಓರ್ವ ಗೈಡ್ ಅನ್ನು ನಿಯೋಜಿಸಲಾಗುವುದು. ಚಾರಣದ ವೇಳೆ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳು, ಮದ್ಯ ಸಹಿತ ಇನ್ನಿತರ ಎಲ್ಲ ನಿಷೇಧಿತ ವಸ್ತುಗಳನ್ನು ಚಾರಣಿಗರು ತಮ್ಮ ಬಳಿ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಚಾರಣಿಗರು ಹಿಂದಿರುಗಿದ ಬಳಿಕ ಚಾರಣ ಪಥದಲ್ಲಿ ಯಾವುದೇ ನಿಷೇಧಿತ ವಸ್ತುಗಳು, ಇವುಗಳ ತ್ಯಾಜ್ಯ ಪತ್ತೆಯಾದಲ್ಲಿ ಸಂಬಂಧಿತ ಚಾರಣಿಗರಿಗೆ ದಂಡ ವಿಧಿಸುವ ಪ್ರಸ್ತಾವವನ್ನು ಇದು ಒಳಗೊಂಡಿದೆ.
ಇತ್ತೀಚಿನ ವರ್ಷಗಳಲ್ಲಿ ಚಾರಣ ಹೆಚ್ಚು ಪ್ರಚಲಿತ ಮತ್ತು ಜನಪ್ರಿಯಗೊಳ್ಳುತ್ತಿದ್ದು, ಚಾರಣಿಗರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಬಹುತೇಕ ಚಾರಣ ತಾಣಗಳು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿರುವುದರಿಂದ ಚಾರಣಿಗರ ಸುರಕ್ಷೆ, ಅರಣ್ಯ ಪ್ರದೇಶ ಮತ್ತು ವನ್ಯಜೀವಿಗಳ ಸಂರಕ್ಷಣೆ ಅರಣ್ಯ ಇಲಾಖೆಗೆ ಬಲುದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೇ ವೇಳೆ ಚಾರಣ ಎನ್ನುವುದು ಯುವಜನಾಂಗದ ಪಾಲಿಗೆ ಮೋಜುಮಸ್ತಿನ ವಿಹಾರವಾಗಿ ಮಾರ್ಪಟ್ಟಿದ್ದು, ಈ ಕಾರಣದಿಂದಾಗಿಯೇ ಹಲವಾರು ಅನಾಹುತಗಳು ಸಂಭವಿಸಿ, ಜೀವಹಾನಿ ಸಂಭವಿಸಿರುವ ಸಾಕಷ್ಟು ಘಟನೆಗಳೂ ನಡೆದಿವೆ. ಅಷ್ಟು ಮಾತ್ರವಲ್ಲದೆ ಚಾರಣದ ನೆಪದಲ್ಲಿ ಅಪರಾಧ ಕೃತ್ಯಗಳು, ವನ್ಯಜೀವಿಗಳ ಕಳ್ಳಬೇಟೆಯಂತಹ ಅಕ್ರಮ ಚಟುವಟಿಕೆಗಳೂ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನರ ಬೇಕಾಬಿಟ್ಟಿ ಚಾರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಲಾಖೆ ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮತ್ತು ನಿಯಮಾವಳಿಗಳನ್ನು ಪಾಲಿಸದಲ್ಲಿ ಮಾತ್ರವೇ ಇಲಾಖೆ ತನ್ನ ಉದ್ದೇಶಿತ ಗುರಿಯನ್ನು ಸಾಧಿಸಲು ಸಾಧ್ಯ. ಇಲ್ಲೂ ಹೊಂದಾಣಿಕೆ, ರಾಜಿ, ಅಕ್ರಮಕ್ಕೆ ಅವಕಾಶ ಕಲ್ಪಿಸಿಕೊಟ್ಟದ್ದೇ ಆದಲ್ಲಿ ಇದು ಕೂಡ ನೀರ ಮೇಲಿಟ್ಟ ಹೋಮದಂತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ
Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್ ನಿಲುವು ಸ್ವಾಗತಾರ್ಹ
Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ
Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ
UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.