Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
ದೇಶದಲ್ಲಿ ಸದಸ್ಯತ್ವ ಅಭಿಯಾನದಡಿ 9 ಕೋಟಿ ಮಂದಿ ಈಗಾಗಲೇ ಪಕ್ಷದ ಪ್ರಾಥಮಿಕ ಸದಸ್ಯರು: ಯುವ ಮೋರ್ಚಾ ರಾಜ್ಯಾಧ್ಯಕ್ಷ
Team Udayavani, Oct 5, 2024, 1:41 AM IST
ಮಂಗಳೂರು: ರಾಜ್ಯದಲ್ಲಿ ಈ ತಿಂಗಳೊಳಗೆ ಒಂದೂವರೆ ಕೋಟಿಗೂ ಹೆಚ್ಚು ಮಂದಿಯನ್ನು ಬಿಜೆಪಿ ಸದಸ್ಯರನ್ನಾಗಿಸುವ ನಿಟ್ಟಿನಲ್ಲಿ ಅಭಿಯಾನ ಸಾಗುತ್ತಿದೆ. ಪ್ರತಿ ಮನೆಯಿಂದಲೂ ಓರ್ವ ಬಿಜೆಪಿ ಕಾರ್ಯಕರ್ತರನ್ನು ಹೊಂದುವುದು ಪಕ್ಷದ ಉದ್ದೇಶವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ತಿಳಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನಕ್ಕಾಗಿ ಆಗಮಿಸಿರುವ ಅವರು ಮಂಗಳೂರಿನ ಕುಲಶೇಖರ ದಲ್ಲಿ ಶುಕ್ರವಾರ ಜರಗಿದ ಅಭಿಯಾನದ ಸಂದರ್ಭದಲ್ಲಿ ಪಾಲ್ಗೊಂಡು ಪತ್ರಕರ್ತರೊಂದಿಗೆ ಮಾತನಾಡಿದರು. ದೇಶದಲ್ಲಿ ಸದಸ್ಯತ್ವ ಅಭಿಯಾನದಡಿ 9 ಕೋಟಿ ಮಂದಿ ಈಗಾಗಲೇ ಸದಸ್ಯತ್ವ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ 50 ಲಕ್ಷ ಮಂದಿ ಸದಸ್ಯತ್ವ ಪಡೆದುಕೊಂಡಿದ್ದಾರೆ.
ಬಿಜೆಪಿಯ ಆಂತರಿಕ ಸಂವಿಧಾನದಂತೆ ಪ್ರತಿ 6 ವರ್ಷಕ್ಕೊಮ್ಮೆ ಸದಸ್ಯತ್ವವನ್ನು ಪಡೆಯಲಾಗುತ್ತದೆ. ಅದರಂತೆ ಅಭಿಯಾನ ನಡೆಯುತ್ತಿದ್ದು, ದ.ಕ. ಜಿಲ್ಲೆಯಲ್ಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ. ನಿಗದಿತ ಗುರಿಗಿಂತ ಎರಡುಪಟ್ಟು ಹೆಚ್ಚು ಮಂದಿಯನ್ನು ಸದಸ್ಯರನ್ನಾಗಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ವಿಕಸಿತ ಭಾರತಕ್ಕಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ನಮ್ಮ ದೇಶವನ್ನು ಜಗತ್ತು ತಿರುಗಿ ನೋಡುವಂತಾಗಿದೆ. ಹಿಂದೆ ಯಾವತ್ತೂ ಸಿಗದ ಗೌರವ ಭಾರತಕ್ಕೆ ಇಂದು ಸಿಗುತ್ತಿದೆ. 2047ಕ್ಕೆ ಸ್ವಾತಂತ್ರ್ಯೋತ್ಸವದ ನೂರನೇ ವರ್ಷ ಆಚರಣೆ ಸಂದರ್ಭದಲ್ಲಿ ವಿಕಸಿತ ಭಾರತವನ್ನಾಗಿ ಮಾಡುವುದು ನರೇಂದ್ರ ಮೋದಿಯವರ ಗುರಿಯಾಗಿದೆ. ಅದಕ್ಕೆ ಪೂರಕವಾಗಿ ಮತದಾರರು, ನಾಗರಿಕರ ಸದಸ್ಯತ್ವ ಪಡೆದುಕೊಳ್ಳಲಾಗುತ್ತಿದೆ ಎಂದು ಧೀರಜ್ ಹೇಳಿದರು.
ಶಾಸಕ ವೇದವ್ಯಾಸ ಕಾಮತ್, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ಅಶ್ವಿತ್ ಕೊಟ್ಟಾರಿ, ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಮೌನೇಶ್ ಚೌಟ, ಋತ್ವಿಕ್ ಕದ್ರಿ, ಕಿಶೋರ್ ಕೊಟ್ಟಾರಿ, ಕಾವ್ಯಾ ನಟರಾಜ್, ರೂಪಶ್ರೀ ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!
Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ
Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ
Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.