UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಎಪ್ರಿಲ್‌ನಿಂದಲೇ ಪದವಿಯ ಪ್ರಥಮ ಸೆಮಿಸ್ಟರ್‌ಗೆ ದಾಖಲಾತಿ ಪ್ರಕ್ರಿಯೆ ಆರಂಭ

Team Udayavani, Oct 5, 2024, 6:55 AM IST

Exam 3

ಬೆಂಗಳೂರು: ರಾಜ್ಯಾದ್ಯಂತ ಇರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಮತ್ತು ಹೊಸ ಕೋರ್ಸ್‌ಗಳ ಸಂಯೋಜನೆ ಪ್ರಕ್ರಿಯೆಗೆ ಏಕರೂಪದ ವೇಳಾಪಟ್ಟಿ ಪ್ರಕಟಿಸಲು ಉನ್ನತ ಶಿಕ್ಷಣ ಇಲಾಖೆ ದೃಢ ಹೆಜ್ಜೆ ಇರಿಸಿದ್ದು 2025-26ನೇ ಸಾಲಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಂಯೋಜನ ವೇಳಾಪಟ್ಟಿಯು ಅ. 2024ರಿಂದಲೇ ಆರಂಭಗೊಂಡು 2025ರ ಮಾರ್ಚ್‌/ಎಪ್ರಿಲ್‌ನಲ್ಲಿ ಅಂತ್ಯಗೊಳ್ಳಲಿದೆ. ಎಪ್ರಿಲ್‌ನಿಂದಲೇ ಪದವಿಯ ಪ್ರಥಮ ಸೆಮಿಸ್ಟರ್‌ಗೆ ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಉನ್ನತ ಶಿಕ್ಷಣ ಇಲಾಖೆ ಮೂರ್ನಾಲ್ಕು ವರ್ಷದಿಂದ ಏಕರೂಪದ ವೇಳಾಪಟ್ಟಿ ತಯಾರಿಸಿ, ಜಾರಿಗೊಳಿಸುವ ಪ್ರಯತ್ನ ನಡೆಸುತ್ತಿದ್ದು ಅಂತಿಮವಾಗಿ ಇದೀಗ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ಸಿದ್ಧತೆ ಆರಂಭಿಸಿದೆ.

ಪದವಿಯ ಮೊದಲ ಸೆಮಿಸ್ಟರ್‌ನ ದಾಖಲಾತಿ ಎ.15ರಿಂದ ಆರಂಭಗೊಳ್ಳಲಿದೆ. ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್‌ ಜು. 9ರಿಂದ ಆರಂಭಗೊಳ್ಳಲಿದ್ದು ಈ ಸೆಮಿಸ್ಟರ್‌ ಸೆ.26ಕ್ಕೆ ಕೊನೆಗೊಳ್ಳಲಿದೆ.
ಸ್ನಾತಕೋತ್ತರ ಕೋರ್ಸ್‌ಗಳ ದಾಖಲಾತಿ ಪ್ರಕ್ರಿಯೆ ಆ. 19ರಿಂದ ಆರಂಭಗೊಳ್ಳಲಿದೆ. ಸಪ್ಟೆಂಬರ್‌ 1ಕ್ಕೆ ಪ್ರಥಮ, ತೃತೀಯ ಸೆಮಿಸ್ಟರ್‌ನ ತರಗತಿಗಳು ಆರಂಭಗೊಳ್ಳಲಿದ್ದು ಡಿ. 19ಕ್ಕೆ ಅಂತ್ಯಗೊಳ್ಳಲಿದೆ. ಪರೀಕ್ಷೆಗಳು ಡಿ.12ಕ್ಕೆ ಆರಂಭವಾಗಲಿದೆ.

ಯುಜಿಸಿ ನಿಯಮದಂತೆ 2025-26ರ ಸಾಲಿನಲ್ಲಿ ಪ್ರತಿ ಸೆಮಿಸ್ಟರ್‌ನಲ್ಲಿ ಕನಿಷ್ಠ 90 ದಿನಗಳ ಕೆಲಸದ ಅವಧಿ ಇರುವಂತೆ ವೇಳಾಪಟ್ಟಿ ರೂಪಿಸಲಾಗಿದೆ. ವಾರದಲ್ಲಿ ಆರು ದಿನಗಳನ್ನು ಕೆಲಸದ ದಿನಗಳೆಂದು ಪರಿಗಣಿಸಲಾಗಿದೆ.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿ ಬರುವ ಸಾರ್ವಜನಿಕ ವಿ.ವಿ.ಗಳಲ್ಲಿ ಸಂಯೋಜನ ಪ್ರಕ್ರಿಯೆ
ಯನ್ನು ಇದೇ ಅ. 9ರಿಂದ ಆರಂಭಿಸಿ 2025ರ ಮಾರ್ಚ್‌ 31ರೊಳಗೆ ಪೂರ್ಣಗೊಳಿಸಬೇಕು. ಖಾಸಗಿ ವಿ.ವಿ.ಗಳ ಸೀಟು ಹೆಚ್ಚಳ, ಕಡಿತ, ಹೊಸ ಸಂಯೋಜನೆ ಸೇರಿದಂತೆ ಇನ್ನಿತರ ಚಟುವಟಿ ಕೆಗೆ ಇದೇ ಅ. 7ರಿಂದ ಅವಕಾಶ ಆರಂಭವಾಗ ಲಿದ್ದು ಮಾ. 31ಕ್ಕೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ.

ಬಿಇ, ಬಿ.ಟೆಕ್‌ ಮತ್ತು ಬಿ.ಅರ್ಕ್‌ ಕೋರ್ಸ್‌ಗೆ ಸಂಬಂಧಿಸಿದಂತೆ 2025ರ ಎಪ್ರಿಲ್‌ 10ರಿಂದ ವಿಟಿಯು ಸ್ಥಳ ಪರಿಶೀಲನೆ ನಡೆಸುವುದರೊಂದಿಗೆ ಆರಂಭಗೊಳ್ಳಲಿದ್ದು ಮೇ 21ಕ್ಕೆ ರಾಜ್ಯ ಸರಕಾರ ದಿಂದ ನಿರಾಕ್ಷೇಪಣ ಪತ್ರ ಪಡೆಯಲು ಕೊನೆಯ ದಿನವಾಗಿರಲಿದೆ. ಇನ್ನು ಎಂಬಿಎ, ಎಂಸಿಎ, ಎಂಟೆಕ್‌ ಮತ್ತು ಎಂ. ಅರ್ಕ್‌ ಸ್ನಾತಕೋತ್ತರ ಕೋರ್ಸ್‌ ಗಳ ಸಂಯೋಜನೆ, ಸೀಟು ಹೆಚ್ಚಳ ಪ್ರಕ್ರಿಯೆಗೆ ವಿಟಿಯು 2025ರ ಎಪ್ರಿಲ್‌ 10ಕ್ಕೆ ಸ್ಥಳ ಪರಿಶೀಲನೆ ನಡೆಸಲಿದೆ. ಮೇ 21 ರಾಜ್ಯ ಸರಕಾರ ನಿರಾಕ್ಷೇಪಣ ಪತ್ರ ನೀಡಲಿದೆ.

ಎಪ್ರಿಲ್‌ 18, 19ಕ್ಕೆ ಸಿಇಟಿ
ಎಂಜಿನಿಯರಿಂಗ್‌, ನರ್ಸಿಂಗ್‌, ಪಶು ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)- 2025-26ನೇ ಸಾಲಿನಲ್ಲಿ ಎಪ್ರಿಲ್‌ 18 ಮತ್ತು ಎ. 19ರಂದು ನಡೆಯಲಿದೆ. ಮೇ 28ಕ್ಕೆ ಫ‌ಲಿತಾಂಶ ಪ್ರಕಟಗೊಳ್ಳಲಿದ್ದು ಜೂನ್‌ 25ಕ್ಕೆ ಮೊದಲ ಸುತ್ತಿನ ಕೌನ್ಸಿಲಿಂಗ್‌, ಜುಲೈ 10ಕ್ಕೆ ಎರಡನೇ ಸುತ್ತಿನ ಕೌನ್ಸಿಲಿಂಗ್‌ ಮತ್ತು ಜು. 25 ಎರಡನೇ ಸುತ್ತಿನ ಮುಂದುವರಿದ ಕೌನ್ಸಿಲಿಂಗ್‌ ನಡೆಯಲಿದ್ದು ಆಗಸ್ಟ್‌ 1ಕ್ಕೆ ತರಗತಿ ಆರಂಭವಾಗಲಿದೆ.

ಇನ್ನು ಎಂಬಿಎ, ಎಂಸಿಎ, ಎಂಟೆಕ್‌ ಮತ್ತು ಎಂ. ಅರ್ಕ್‌ ಸ್ನಾತಕೋತ್ತರ ಕೋರ್ಸ್‌ಗಳಿಗೆ ಸಿಇಟಿ ಜೂನ್‌ 30ಕ್ಕೆ ನಿಗದಿಯಾಗಿದ್ದು ಆಗಸ್ಟ್‌ 5ಕ್ಕೆ ಫ‌ಲಿತಾಂಶ ಪ್ರಕಟಗೊಳ್ಳಲಿದೆ. ಮೊದಲ ಸುತ್ತಿನ ಕೌನ್ಸಿಲಿಂಗ್‌ ಆ.26, ಎರಡನೇ ಸುತ್ತಿನ ಕೌನ್ಸಿಲಿಂಗ್‌ ಸೆ.4ಕ್ಕೆ ನಡೆಯಲಿದ್ದು ಸೆ.10ಕ್ಕೆ ತರಗತಿಗಳು ಆರಂಭವಾಗಲಿವೆ.

ಟಾಪ್ ನ್ಯೂಸ್

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

4-Kanahosahalli

Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.