ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Team Udayavani, Oct 5, 2024, 8:53 AM IST
ಹುಬ್ಬಳ್ಳಿ: ಮುಡಾ ವಿಚಾರದಲ್ಲಿ ಬಿಜೆಪಿ ಅನವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ಪ್ರಧಾನಿ ಅಂಥವರು ವಿವಿಧ ರಾಜ್ಯಗಳ ಚುನಾವಣಾ ರ್ಯಾಲಿಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ನಮಗೂ ಸಹ ಇವರ ರೀತಿ ರಾಜಕಾರಣ ಮಾಡಲು ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹರಿಹಾಯ್ದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತನಿಖೆ ನಡೆಯುತ್ತಿದೆ. ಇದನ್ನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿಯವರು ಈ ವಿಷಯವನ್ನು ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸುತ್ತಾರೆ. ಇದು ರಾಜಕಾರಣ ಅಲ್ಲದೇ ಮತ್ತಿನ್ನೇನು. ನಮಗೂ ರಾಜಕಾರಣ ಮಾಡಲು ಬರುತ್ತದೆ. ನಮ್ಮ ಕಾಂಗ್ರೆಸ್ ಸರ್ಕಾರ ಅದಕ್ಕೆ ಸಮರ್ಥ ಉತ್ತರ ಕೊಡುತ್ತದೆ ಎಂದು ಕುಟುಕಿದರು.
ನಾವು ಯಾರ ಮೇಲೂ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಮುಡಾ ವಿಚಾರವಾಗಿ ಈಗಾಗಲೇ ತನಿಖೆ ನಡೆದಿದೆ. ಪ್ರತಿ ಪಕ್ಷದವರು ಸರ್ಕಾರಕ್ಕೆ ಸಲಹೆ, ಸೂಚನೆ ಕೊಡಬೇಕು. ಅದನ್ನು ಮೀರಿ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದರು.
ಸೈಟ್ ವಾಪಸ್ ವಿಚಾರವಾಗಿ ವಿಪಕ್ಷ ನಾಯಕ ಆರ್. ಅಶೋಕ ಮೊದಲು ರಾಜೀನಾಮೆ ಕೊಡಲಿ. ಆ ನಂತರ ಉಳಿದವರ ರಾಜೀನಾಮೆ ಪ್ರಶ್ನೆ ಬರುತ್ತದೆ ಎಂದರು.
ಬೆಂಗಳೂರಿನಲ್ಲಿ ಪಾಕಿಸ್ತಾನದವರು ಅಕ್ರಮವಾಗಿ ನೆಲೆಸಿದ್ದನ್ನು ಪತ್ತೆ ಹಚ್ಚಿ ಬಂಧಿಸಿರುವುದು ಕರ್ನಾಟಕದ ಪೋಲಿಸರು. ಆದರೆ, ಕೇಂದ್ರದ ಸಿಬಿಐ ಸೇರಿದಂತೆ ಎಲ್ಲಾ ಎಜೆನ್ಸಿಗಳು ದೇಶದಲ್ಲಿ ಪಾಕಿಸ್ತಾನದವರ ಇರುವಿಕೆ ಪತ್ತೆ ಹಚ್ಚುವಲ್ಲಿ ವಿಫಲವಾಗಿವೆ ಎಂದರು.
ಜಾತಿ ಗಣತಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ. ನಂತರ ತೀರ್ಮಾನ ಮಾಡಲಾಗುವುದು. ಪಿಎಸ್ಐ ಅಭ್ಯರ್ಥಿಗಳ ವಿವಾದ ನ್ಯಾಯಾಲಯದಲ್ಲಿದೆ. ಹೀಗಾಗಿ ಕಗ್ಗಂಟಾಗಿದೆ. ಶೀಘ್ರವೇ ಇದು ಪರಿಹಾರವಾಗಲಿದೆ. ಹುಬ್ಬಳ್ಳಿಯ ಮೇಲ್ಸೇತುವೆ ಅವಘಡದಲ್ಲಿ ಎಎಸ್ಐ ಅಧಿಕಾರಿ ಸಾವಿನ ಬಗ್ಗೆ ಮಾಹಿತಿ ಇಲ್ಲ. ತಿಳಿದುಕೊಳ್ಳುವೆ ಎಂದರು.
ಇದನ್ನೂ ಓದಿ: Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ
Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಮೆಡಿಕಲ್ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ
Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.