Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ


Team Udayavani, Oct 5, 2024, 11:24 AM IST

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಹುಬ್ಬಳ್ಳಿ: ಶಾಸಕ ಜಿ.ಟಿ. ದೇವೇಗೌಡ ಹೇಳಿಕೆಯಿಂದ ಬಿಜೆಪಿಗೆ ಯಾವುದೇ ಹಾನಿ ಆಗಲ್ಲ. ಇತ್ತೀಚೆಗೆ ರಾಜಕಾರಣದಲ್ಲಿ ಕೆಲವರಿಗೆ ತಮಗೆ ಬೇಕಾದ ಸ್ಥಾನಮಾನ ಸಿಗದಿದ್ದಾಗ ಸ್ವಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Prahlad Joshi) ಹರಿಹಾಯ್ದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡ ಮೊನ್ನೆ ಮೊನ್ನೆವರೆಗೆ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದರು. ಈಗ ಏಕಾಏಕಿ ಅವರ ಪರ ಮಾತನಾಡಿದ್ದಾರೆ.‌ ಈಗ ರಾಜಕಾರಣದಲ್ಲಿ ಕೆಲವರಿಗೆ ತಮಗೆ ಬೇಕಾದ ಸ್ಥಾನಮಾನ ಸಿಗದಿದ್ದಲ್ಲಿ ಸ್ವಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಪ್ರತಿಯೊಂದು ರಾಜಕೀಯ ಪಕ್ಷಕ್ಕೆ ಅದರದ್ದೆ ಆದ ವಿಚಾರಧಾರೆ ಇರುತ್ತದೆ. ಆದರೆ, ತಮ್ಮ ಸ್ವಂತದ ಅಧಿಕಾರದ ಸ್ಥಾನಮಾನಕ್ಕಾಗಿ ಬಡಿದಾಡಿ ಕೊಳ್ಳುವವರು ಜಾಸ್ತಿ ಆಗಿದೆ ಎಂದರು.

ಈಗ ಅಚಾನಕ್ಕಾಗಿ ಜೆಡಿಎಸ್ ಪಕ್ಷದಲ್ಲಿ ಏನು ಘಟನಾವಳಿಗಳು ಆಗಿವೆ ಎಂಬುದನ್ನು ನೋಡಬೇಕು. ಅದು ಅವರ ಪಕ್ಷದ ಆಂತರಿಕ ವಿಚಾರ. ಈಗ ರಾಜ್ಯ ಸರ್ಕಾರದ ವಿರುದ್ಧ ಮುಡಾ ಮತ್ತು ವಾಲ್ಮೀಕಿ ಹಗರಣ ಬಂದಿವೆ. ಇಂತಹ ಸಮಯದಲ್ಲಿ ಜಿ.ಟಿ. ದೇವೇಗೌಡರ ಹೇಳಿಕೆ ಸರಿಯಲ್ಲ ಎಂದರು.

ಬೇಜವಾಬ್ದಾರಿ ಹೇಳಿಕೆ ಸರಿಯಲ್ಲ: ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ನೆಲೆಸಿರುವ ಬಗ್ಗೆ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಬೇಜವಾಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೋರರು ಭಾರತಕ್ಕೆ ಬಂದಿದ್ದರು. ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ. ಎಲ್ಲೆಲ್ಲಿ ಬಾಂಬ್ ಬ್ಲಾಸ್ಟ್‌ಗಳಾಗಿ ಎಂಬುದನ್ನು ‌ತಿಳಿದು ಮಾತನಾಡಲಿ. ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ ಹೇಳಿಕೆಗೆ ಜೋಶಿಯವರು ಕಿಡಿಕಾರಿದರು.

ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹಮಂತ್ರಿಯಾಗಿ ಅವರು ಕೆಲಸ ಮಾಡಿದ್ದಾರೆ. ನುಸುಳುಕೋರರು ಭಾರತಕ್ಕೆ ನುಗ್ಗುವುದಕ್ಕೆ ಕಡಿವಾಣ ಹಾಕಿದ್ದೆ ಬಿಜೆಪಿ ಸರ್ಕಾರ. ಆದರೆ, ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಬೆಂಗಳೂರು, ಹೈದ್ರಾಬಾದ್, ಮುಂಬೈ, ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆ ಬಾಂಬ್ ಬ್ಲಾಸ್ಟ್‌ಗಳಾಗಿವೆ. ಅದೆಲ್ಲವನ್ನೂ ನೆನಪು ಮಾಡಿಕೊಳ್ಳಲಿ. ಬಾಂಬ್ ಬ್ಲಾಸ್ಟ್ ಆಗಲಿಕ್ಕೆ ಕಾರಣ ನುಸುಳುಕೋರರು. ಬಿಜೆಪಿ ಸರ್ಕಾರ ಬಂದ ಮೇಲೆ ಇವಕ್ಕೆಲ್ಲ ಕಡಿವಾಣ ಬಿದ್ದಿದೆ. ಈ ವಿಷಯದಲ್ಲಿ ನಾವು ರಾಜಕಾರಣ ಮಾಡಿಲ್ಲ. ಜಿ. ಪರಮೇಶ್ವರ್ ಅವರನ್ನು ನಾವು ಸಜ್ಜನ, ದೇಶ ಮತ್ತು ರಾಜ್ಯದ ಬಗ್ಗೆ ಕಳಕಳಿ ಇರುವವರು ಎಂದು ತಿಳಿದುಕೊಂಡಿದ್ದೇವೆ‌. ರಾಹುಲ್ ಗಾಂಧಿಯಂತೆ‌ ಚಿಲ್ಲರೆಯಾಗಿ ಮಾತನಾಡುವುದನ್ನ ಬಿಡಬೇಕು ಎಂದು ಕುಟುಕಿದರು.

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ

Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ

gold

Dharwad: ಖಾಸಗಿ ಬಸ್‌ನಲ್ಲಿ 77 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.