Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ
Team Udayavani, Oct 5, 2024, 12:03 PM IST
ಗುಂಡ್ಲುಪೇಟೆ(ಚಾಮರಾಜನಗರ): ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ತಿರುವೊಂದರಲ್ಲಿ ಆ.5ರ ಶನಿವಾರ ಬೆಳಗ್ಗೆ ನಡೆದಿದ್ದು, ಚಾಲಕನಿಗೆ ತೀವ್ರ ಗಾಯಗಳಾಗಿದೆ.
ತಮಿಳುನಾಡಿನಿಂದ ರಬ್ಬರ್ ತುಂಬಿಕೊಂಡು ಬರುತ್ತಿದ್ದ ಲಾರಿ ಬಂಡೀಪುರದ ಮೇಲುಕಾಮನಹಳ್ಳಿ ಚೆಕ್ ಪೋಸ್ಟ್ ಸಮೀಪದ ಎಸ್. ಆಕಾರದ ತಿರುವಿನಲ್ಲಿ ಪಲ್ಟಿ ಹೊಡೆದಿದೆ.
ಈ ಪರಿಣಾಮ ಚಾಲಕ ಲಾರಿಯಡಿಯಲ್ಲಿ ಸಿಲುಕಿಕೊಂಡಿದ್ದು, ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಆಗಮಿಸಿ ಕ್ರೇನ್ ಸಹಾಯದಿಂದ ಚಾಲಕನನ್ನು ಹೊರ ತೆಗೆದು ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಚಾಲಕನ ಕೈ,ಕಾಲಿಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಬ್ಇನ್ಸ್ ಪೆಕ್ಟರ್ ಸಾಹೇಬಗೌಡ, ಅಗ್ನಿಶಾಮಕ ದಳ ಹಾಗೂ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ ಲಾರಿಯನ್ನು ಮೇಲೆತ್ತುವ ಕೆಲಸಕ್ಕೆ ಮುಂದಾಗಿದ್ದಾರೆ.
ಘಟನೆಯಲ್ಲಿ ಲಾರಿ ನಜ್ಜುಗುಜ್ಜಾಗಿದ್ದು, ರಬ್ಬರ್ ತುಂಬಿದ ಚೀಲಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.