Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ಆ ವ್ಯಕ್ತಿಯ ಎಲ್ಲ ಇಷ್ಟಾರ್ಥಗಳು ಈಡೇರುತ್ತವೆ.
Team Udayavani, Oct 5, 2024, 12:32 PM IST
ಶಾರದೀಯ ನವರಾತ್ರಿ ಅಕ್ಟೋಬರ್ 3 ರಿಂದ ಪ್ರಾರಂಭವಾಗಿದೆ. ಈ ಒಂಬತ್ತು ದಿನಗಳಲ್ಲಿ ಮಾತೃದೇವತೆಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ. ನವರಾತ್ರಿಯ ಮೊದಲ ದಿನವನ್ನು ತಾಯಿ ಶೈಲಪುತ್ರಿಗೆ ಸಮರ್ಪಿಸಲಾಗುತ್ತದೆ. ಶೈಲಪುತ್ರಿ ದೇವಿಯ ಆರಾಧನೆಯು ನವರಾತ್ರಿಯ ಮೊದಲ ದಿನದಂದು ಮಾತ್ರವಲ್ಲ, ಜೀವನದ ಪ್ರತಿಯೊಂದು ಸಂದರ್ಭದಲ್ಲೂ ಮುಖ್ಯವಾಗಿ ಮಾಡಬೇಕು. ಈಕೆಯ ಆರಾಧನೆಯು ನಮಗೆ ತಾಳ್ಮೆ, ಧೈರ್ಯ ಮತ್ತು ಶಾಂತಿಯ ಮಾರ್ಗವನ್ನು ತೋರಿಸುತ್ತಾಳೆ. ಆಕೆಯ ಅನುಗ್ರಹದಿಂದ ಸಾಧಕನು ಜೀವನದ ಪ್ರತೀಯೊಂದು ಕ್ಷೇತ್ರದಲ್ಲೂ ಯಶಸ್ಸು ಮತ್ತು ತೃಪ್ತಿಯನ್ನು ಪಡೆಯುತ್ತಾನೆ.
ಶೈಲಪುತ್ರಿ ದೇವಿಯ ಹೆಸರು ಸ್ವತಃ ಶಕ್ತಿ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ ಮತ್ತು ಅವಳನ್ನು ಪೂಜಿಸುವುದರಿಂದ ಭಕ್ತನು ಅಪಾರ ಸಂತೋಷ ಮತ್ತು ಶಾಂತಿಯನ್ನು ಪಡೆಯುತ್ತಾನೆ. ನವರಾತ್ರಿಯ ಮೊದಲ ದಿನದಂದು ತಾಯಿ ಶೈಲಪುತ್ರಿಯ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನದಂದು ಶೈಲಪುತ್ರಿ ದೇವಿಯನ್ನು ಪೂಜಿಸುವುದರಿಂದ, ಸಾಧಕರ ಮನಸ್ಸು ಅಧ್ಯಾತ್ಮಿಕತೆ ಮತ್ತು ಸಕಾರಾತ್ಮಕ ಶಕ್ತಿಯಿಂದ ತುಂಬಿರುತ್ತದೆ. ಶೈಲಪುತ್ರಿಯನ್ನು ಪೂಜಿಸುವ ವಿಧಾನವು ತುಂಬಾ ಸರಳವಾಗಿದೆ ಮತ್ತು ಅದನ್ನು ಸರಿಯಾಗಿ ಮಾಡುವುದರಿಂದ ಸಾಧಕನು ಅವಳ ಅಪಾರ ಆಶೀರ್ವಾದವನ್ನು ಪಡೆಯುತ್ತಾನೆ.
ಎಲ್ಲಕ್ಕಿಂತ ಮೊದಲು ಸಾಧಕನು ಶುದ್ಧನಾಗಿರಬೇಕು ಮತ್ತು ಪೂಜೆ ಮಾಡುವ ಸ್ಥಳವನ್ನು ಶುದ್ಧಗೊಳಿಸಬೇಕು. ಶೈಲಪುತ್ರಿ ದೇವಿಯ ವಿಗ್ರಹ ಅಥವಾ ಫೋಟೋವನ್ನು ಪವಿತ್ರ ಸ್ಥಳದಲ್ಲಿ ಸ್ಥಾಪಿಸಿ ಮತ್ತು ಅದಕ್ಕೆ ಹೂವಿನ ಹಾರವನ್ನು ಅರ್ಪಿಸಿ. ಬಿಳಿ ಬಣ್ಣದ ಬಟ್ಟೆ ಮತ್ತು ಹೂವುಗಳನ್ನು ತಾಯಿಗೆ ಅರ್ಪಿಸಿ, ಏಕೆಂದರೆ ಈ ಬಣ್ಣವು ಶಾಂತಿ ಮತ್ತು ಶುದ್ಧತೆಯ ಸಂಕೇತವಾಗಿದೆ.
ಇದರ ಅನಂತರ, ಪೂಜೆ ಮಾಡುವ ವ್ಯಕ್ತಿಯು ತಾಯಿ ಶೈಲಪುತ್ರಿಯ ಮಂತ್ರಗಳನ್ನು ಪಠಿಸಬೇಕು. ಮಂತ್ರವನ್ನು ಪಠಿಸುವುದರಿಂದ ಮನಸ್ಸು ಶಾಂತವಾಗುತ್ತದೆ ಮತ್ತು ಆ ವ್ಯಕ್ತಿಯ ಎಲ್ಲ ಇಷ್ಟಾರ್ಥಗಳು ಈಡೇರುತ್ತವೆ. ಶೈಲಪುತ್ರಿಯ ಮುಖ್ಯ ಮಂತ್ರವೆಂದರೆ: “ಓಂ ಶೈಲಪುತ್ರೈ ನಮಃ’ ಈ ಮಂತ್ರವನ್ನು 108 ಬಾರಿ ಪಠಿಸುವುದು ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರೊಂದಿಗೆ ತಾಯಿಗೆ ಪ್ರಸಾದವನ್ನು ಅರ್ಪಿಸಿ ಮತ್ತು ಅಂತಿಮವಾಗಿ ತಾಯಿಗೆ ಆರತಿಯನ್ನು ಮಾಡಬಹುದು.
ನವರಾತ್ರಿಯಲ್ಲಿ ಶೈಲಪುತ್ರಿ ದೇವಿಯ ಪೂಜೆ ಮಹತ್ವ ನವರಾತ್ರಿಯ ಮೊದಲ ದಿನವು ಭಕ್ತನಿಗೆ ಹೊಸ ಸಂಕಲ್ಪಗಳು ಮತ್ತು ಹೊಸ ಶಕ್ತಿಯೊಂದಿಗೆ ಪ್ರಾರಂಭವಾಗುವ ದಿನವಾಗಿದೆ. ಶೈಲಪುತ್ರಿ ದೇವಿಯ ಆರಾಧನೆಯು ಸಾಧಕನಿಗೆ ತನ್ನ ಜೀವನದಲ್ಲಿ ಬರುವ ಎಲ್ಲ ಕಷ್ಟಗಳನ್ನು ತಾಳ್ಮೆಯಿಂದ ಎದುರಿಸಲು ಮತ್ತು ತನ್ನ ಗುರಿಯತ್ತ ಸಾಗಲು ಪ್ರೇರೇಪಿಸುತ್ತದೆ.
ನವರಾತ್ರಿಯ ಒಂಬತ್ತು ದಿನಗಳಲ್ಲಿ ದುರ್ಗಾ ದೇವಿಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ ಮತ್ತು ನವರಾತ್ರಿಯು ಶೈಲಪುತ್ರಿಯ ಆರಾಧನೆಯೊಂದಿಗೆ ಪ್ರಾರಂಭವಾಗುತ್ತದೆ. ತಾಯಿ ಶೈಲಪುತ್ರಿಯನ್ನು ಪೂಜಿಸುವುದರಿಂದ ಎಲ್ಲ ರೀತಿಯ ಸಮಸ್ಯೆಗಳು ಮತ್ತು ಅಡೆತಡೆಗಳು ಪರಿಹಾರವಾಗುತ್ತವೆ ಎನ್ನುವ ನಂಬಿಕೆಯಿದೆ. ಈ ದಿನದಂದು, ಒಬ್ಬ ವ್ಯಕ್ತಿಯು ತನ್ನ ಮನಸ್ಸನ್ನು ಶುದ್ಧೀಕರಿಸಿ ಮತ್ತು ಏಕಾಗ್ರಗೊಳಿಸಿ ಮತ್ತು ಮಾತೃ ದೇವಿಯನ್ನು ಪೂಜಿಸಿದರೆ, ಆಗ ಅವಳ ಅನುಗ್ರಹದಿಂದ ಅವನ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಶಾಂತಿ ಬರುತ್ತದೆ.
ಶೈಲಪುತ್ರಿ ದೇವಿಯ ಕಥೆ
ಸತಿ ದೇವಿಯು ತನ್ನ ತಂದೆ ದಕ್ಷನ ಯಾಗಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಾಗ, ಅವಳು ತನ್ನ ಮುಂದಿನ ಜನ್ಮದಲ್ಲಿ ಪರ್ವತಗಳ ರಾಜ ಹಿಮಾಲಯದ ಮಗಳಾಗಿ ಜನಿಸಿದಳು. ಶೈಲ ಎಂಬುದು ಹಿಮಾಲಯದ ಇನ್ನೊಂದು ಹೆಸರು. ಪರ್ವತಗಳ ರಾಜನಾದ ಹಿಮಾಲಯದ ಸ್ಥಳದಲ್ಲಿ ಆಕೆಯು ಜನಸಿರುವುದರಿಂದ ಆಕೆಗೆ ಈ ಹೆಸರನ್ನು ನೀಡಲಾಗಿದೆ. ಆಕೆಯ ಮೂಲ ಹೆಸರು ಪಾರ್ವತಿ. ದೇವಿಯು ಶಿವನನ್ನು ತನ್ನ ಪತಿಯನ್ನಾಗಿ ಪಡೆದುಕೊಳ್ಳುವುದಕ್ಕಾಗಿ ತೀವ್ರ ತಪಸ್ಸನ್ನು ಮಾಡಿದಳು. ಆಕೆಯ ತಪಸ್ಸಿಗೆ ಸಂತಸಗೊಂಡ ಶಿವನು ಅವಳಿಗೆ ಕಾಣಿಸಿಕೊಂಡು ತನ್ನ ಪತ್ನಿಯನ್ನಾಗಿ ಸ್ವೀಕರಿಸಿದನು.
ಶೈಲಪುತ್ರಿ ದೇವಿ ಪ್ರಸಾದ
ತಾಯಿ ಶೈಲಪುತ್ರಿಯ ಹಸುವಿನ ಮೇಲೆ ಕುಳಿತು ಸವಾರಿಯನ್ನು ಮಾಡುತ್ತಾಳೆ. ಆದ್ದರಿಂದ ಹಸುವಿನ ಹಾಲಿನಿಂದ ಮಾಡಿದ ವಸ್ತುಗಳನ್ನು ಮಾತ್ರ ಅವಳಿಗೆ ಅರ್ಪಿಸಲಾಗುತ್ತದೆ. ಪಂಚಾಮೃತವನ್ನು ಹೊರತುಪಡಿಸಿ, ನೀವು ಶೈಲಪುತ್ರಿ ದೇವಿಗೆ ಹಾಲಿನಿಂದ ಮಾಡಿದ ಖಾದ್ಯವನ್ನು ತಯಾರಿಸಬಹುದು.
*ಮಹಾಲಕ್ಷ್ಮೀ ಸುಬ್ರಹ್ಮಣ್ಯ, ಶಾರ್ಜಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.