Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ
ಕುಡಿತದಿಂದ ಕೆಲಸ ಕಳೆದುಕೊಂಡಿದ್ದ ಯುವಕ ; ಇದಕ್ಕೆ ತನ್ನ ಇಬ್ಬರು ಸ್ನೇಹಿತರೇ ಕಾರಣ ಎಂದು ಗಲಾಟೆ
Team Udayavani, Oct 5, 2024, 1:01 PM IST
ಬೆಂಗಳೂರು: ಕೆಲಸ ಬಿಡಿಸಿದ ಕಾರಣಕ್ಕೆ ಕುಡಿದು ಬಂದು ಜಗಳ ಮಾಡುತ್ತಿದ್ದ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಮೈಕೋ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ಸುಜಿತ್ (22) ಕೊಲೆಯಾ ದವ. ಕೃತ್ಯ ಎಸಗಿದ ಆತನ ಸ್ನೇಹಿತರಾದ ಸಂಜಯ್ (24) ಮತ್ತು ಅವಾನ್ (24) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು ಅ.3ರಂದು ರಾತ್ರಿ ತಮ್ಮ ಸ್ನೇಹಿತ ಸುಜಿತ್ ಮೇಲೆ ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಹತ್ಯೆಗೈದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಬಿಹಾರ ಮೂಲದ ಸುಜಿತ್ ಹಾಗೂ ಇಬ್ಬರು ಆರೋ ಪಿಗಳು 3 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಬಿಳೇಕಹಳ್ಳಿಯಲ್ಲಿರುವ ಫ್ಲೈವುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಹೊತ್ತು ಅಲ್ಲಿಯೇ ಮಲಗುತ್ತಿ ದ್ದರು. ಆದರೆ, ಸುಜಿತ್ ಸರಿಯಾಗಿ ಕೆಲಸ ಮಾಡಿಸುತ್ತಿರ ಲಿಲ್ಲ. ಜತೆಗೆ ಮದ್ಯ ಸೇವಿಸುತ್ತಿದ್ದ. ಅದರಿಂದ ಮೂವರು ಸ್ನೇಹಿತರ ನಡುವೆ ಜಗಳವಾಗುತ್ತಿತ್ತು. ಈ ಮಧ್ಯೆ ಸುಜಿತ್ ನನ್ನು ಮಾಲೀಕರು ಕೆಲಸದಿಂದ ತೆಗೆದಿದ್ದರು. ಅದರಿಂದ ಕೋಪಗೊಂಡಿದ್ದ ಸುಜಿತ್ ಬೇರೆಡೆ ವಾಸವಾಗಿದ್ದ.
ಆದರೂ ಫ್ಲೈವುಡ್ ಅಂಗಡಿ ಬಳಿ ಬಂದು, ಮಾಲಿಕರು ಕೆಲಸದಿಂದ ತೆಗೆಯಲು “ನೀವುಗಳೇ ಕಾರಣ’ ಎಂದು ಇಬ್ಬರು ಸ್ನೇಹಿತರ ಜತೆ ಗಲಾಟೆ ಮಾಡುತ್ತಿದ್ದ. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಮದ್ಯ ಸೇವಿಸಿ ಬಂದಿದ್ದ ಸುಜಿತ್, ಆರೋಪಿಗಳ ಜತೆ ಜಗಳ ಮಾಡಿದ್ದಾನೆ. ಅದು ವಿಕೋಪಕ್ಕೆ ಹೋದಾಗ, ಆರೋ ಪಿಗಳು ಸುಜಿತ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಕತ್ತು ಹಿಸುಕಿ ಕೊಲೆಗೈದಿದ್ದಾರೆ. ಬಳಿಕ ಆತಂಕಗೊಂಡ ಆರೋಪಿಗಳು ಸ್ಥಳದಿಂದ ಪರಾ ರಿಯಾಗಿದ್ದರು. ಕೆಲ ಹೊತ್ತಿನ ಬಳಿಕ ಇತರೆ ಕಾರ್ಮಿಕರು ಅಂಗಡಿಗೆ ಬಂದಾಗ ಕೊಲೆ ವಿಚಾರ ಬೆಳಕಿಗೆ ಬಂದಿದೆ.
ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ ಕೆಲ ಹೊತ್ತಿನಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತನ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.