Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Team Udayavani, Oct 5, 2024, 2:27 PM IST
ಮಂಗಳೂರು: ಕಳೆದ ಒಂದೂವರೆ ವರ್ಷದಿಂದ ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಗ್ರಾ.ಪಂ.ನಿಂದ ಹಿಡಿದು ನಗರ ಸ್ಥಳೀಯ ಸಂಸ್ಥೆಯವರೆಗೆ ಎಲ್ಲ ಕಡೆಯೂ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ. ಶಾಸಕರ ನಿಧಿ ಕೂಡಾ ಬಿಡುಗಡೆಯಾಗಿಲ್ಲ, ಅಭಿವೃದ್ಧಿ ಕಡೆಗಣನೆಯಾಗಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸಿಎಂ ಆಗಿದ್ದಾಗ ಅತಿಹೆಚ್ಚು ಅಭಿವೃದ್ಧಿ ಅನುದಾನ ನೀಡಲಾಗಿತ್ತು. ಚುನಾವಣೆ ಮೊದಲು ಕಾಂಗ್ರೆಸ್ ಆಶ್ವಾಸನೆ ಕೊಟ್ಟಿತ್ತು. 5 ಗ್ಯಾರಂಟಿ ಘೋಷಿಸಿತ್ತು. ಆದರೆ ಈಗ ಫಲಾನುಭವಿಗಳಿಗೆ ಹಣ ಬರುತ್ತಿಲ್ಲ. ಯುವನಿಧಿಯಲ್ಲಿ ಇನ್ನೂ ಹಣವೇ ಬಂದಿಲ್ಲ ಎಂದರು.
ಉಚಿತ ಅಕ್ಕಿ ಕೊಡೋದಾಗಿ ಹೇಳಿದರು, ಈಗ ಅದನ್ನೂ ನಿಲ್ಲಿಸುವ ಯತ್ನದಲ್ಲಿದ್ದಾರೆ. ಎಲ್ಲಾ ಡೈರಿಗಳೂ ನಷ್ಟದಲ್ಲಿವೆ. ನಮ್ಮ ಮೇಲೆ ಯಾವುದೇ ಆಧಾರವಿಲ್ಲದೆ ಶೇ.40 ಕಮಿಷನ್ ಆರೋಪ ಮಾಡಿದ್ದರು. ಈಗ ಶೇ.80 ಆಗಿದೆ ಎಂದು ಹೇಳಿದರು.
ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ ಪೂರ್ಣ ದಾಖಲೆಗಳಿದ್ದರೂ ಸಿದ್ದರಾಮಯ್ಯ ನೈತಿಕತೆ ಆಧಾರದಲ್ಲಿ ರಾಜಿನಾಮೆ ಕೊಡುವ ಬದಲು ಮುಖವುಳಿಸುವ ಹೇಳಿಕೆ ನೀಡುತ್ತಿರುವುದು ಅಚ್ಚರಿ ಎಂದ ಅವರು ರಾಜ್ಯ ಸರಕಾರ ದಿವಾಳಿಯಾಗಿರುವುದು ಒಂದೆಡೆಯಾದರೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ವಿಫಲವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.