Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

ಥೈ ಚೈನೀಸ್‌ ಸಮುದಾಯದವರಿಂದ ನವರಾತ್ರಿಯನ್ನು ನಂಬಿಕೆ, ಭಕ್ತಿ ರೂಪಕವಾಗಿ ಆಚರಣೆ

Team Udayavani, Oct 5, 2024, 2:35 PM IST

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

ನವದೇವಿಯರನ್ನು ಆರಾಧಿಸುವ ನವರಾತ್ರಿ ಹಬ್ಬಕ್ಕೆ ಜಗದಲೆಲ್ಲ ಖ್ಯಾತಿಯಿದೆ. ಒಂಬತ್ತು ದಿನಗಳು ದೇವಿಯ ಒಂದೊಂದು ಸ್ವರೂಪವನ್ನು ಆರಾಧಿಸಲಾಗುತ್ತದೆ. ವಿವಿಧ ದೇವಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಕೇವಲ ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿ ನೆಲೆಸಿರುವ ಹಲವು ಭಾರತೀಯ ಸಮುದಾಯದವರು ನವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ವಿವಿಧ ದೇಶಗಳಲ್ಲಿ ನವರಾತ್ರಿ ಆಚರಣೆ ಹೇಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ನ್ಯೂಜಿಲ್ಯಾಂಡ್‌
ದುರ್ಗಾಪೂಜೆ ಮಾಡುವ ಮೂಲಕ ಇಲ್ಲಿನ ಅನಿವಾಸಿ ಭಾರತೀಯರು 9 ದಿನಗಳ ಕಾಲ ಶ್ರದ್ಧಾ-ಭಕ್ತಿಯಿಂದ ನವರಾತ್ರಿಯನ್ನು ಆಚರಿಸುತ್ತಾರೆ. ಅಕ್‌ಲ್ಯಾಂಡ್‌ ನಗರದ ಭಾರತೀಯ ಮಂದಿರ, ಮಹಾತ್ಮ ಗಾಂಧಿ ಸೆಂಟರ್‌, ಶಿರಿಡಿ ಸಾಯಿ ಮಂದಿರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿಜೃಂಭಣೆಯಿಂದ ಹಬ್ಬವು ನಡೆಯುತ್ತದೆ. ಇಡೀ ಒಂಬತ್ತು ದಿನವೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗುತ್ತವೆ.

ಥೈಲ್ಯಾಂಡ್‌
ಪ್ರಾಚೀನ ಕಾಲದಿಂದಲೂ ಥೈಲ್ಯಾಂಡ್‌ ಜನರ ಮೇಲೆ ಹಿಂದೂ ಧರ್ಮ ಪ್ರಭಾವ ಬೀರಿರುವುದರಿಂದ ದಕ್ಷಿಣ ಭಾರತದಿಂದ ವಲಸೆ ಬಂದ ಭಾರತೀಯರಲ್ಲಿ ಥೈಲ್ಯಾಂಡ್‌ ಜನರು ದೇವಿ ಪಾರ್ವತಿ ರೂಪವನ್ನು ಕಂಡಿದ್ದರು. ರಾಜ ರಾಮಾ ವಿ ( 1868-1910) ಆಳ್ವಿಕೆಯ ಸಂದರ್ಭದಲ್ಲಿ ಬ್ಯಾಂಕಾಕ್‌ನ ಸಿಲೋಮ್‌ ರಸ್ತೆಯಲ್ಲಿ ಕಟ್ಟಿಸಿದ್ದ ಶ್ರೀ ಮಹಾ ಮರಿಯಮ್ಮನ್‌ ದೇವಸ್ಥಾನ ಸೇರಿದಂತೆ ವಿವಿಧ ಹಿಂದೂ ದೇವಸ್ಥಾಗಳಲ್ಲಿ ಥೈ ಇಂಡಿಯನ್‌, ಥೈ ಚೈನೀಸ್‌ ಸಮುದಾಯದವರಿಂದ ನವರಾತ್ರಿಯನ್ನು ನಂಬಿಕೆ, ಭಕ್ತಿ ರೂಪಕವಾಗಿ ಆಚರಿಸಲಾಗುತ್ತದೆ.

ಮಲೇಶಿಯಾ
ಇಲ್ಲಿ 1920ರಿಂದಲೂ ನವರಾತ್ರಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಒಂಬತ್ತು ದಿನಗಳ ಕಾಲ ಹೆಚ್ಚು ಜನರು ಸೇರುವ ಮೂಲಕ ದುರ್ಗಾ, ಲಕ್ಷ್ಮೀ ಮತ್ತು ಸರಸ್ವತಿ ದೇವಿಗಳಿಗೆ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಾರೆ. ರಥೋತ್ಸವದ ಸಂದರ್ಭದಲ್ಲಿ ದಾರಿಯುದ್ದಕ್ಕೂ ಭಜನೆ, ಸಂಗೀತ ಕಾರ್ಯಕ್ರಮಗಳು ನಡೆಯುತ್ತವೆ.

ನೈಜೀರಿಯಾ
ಇಲ್ಲಿ 200 ಅಧಿಕ ಬಂಗಾಲಿ ಕುಟುಂಬದವರು ನೆಲೆಸಿರುವ ಕಾರಣ 1981ರಿಂದ ನವರಾತ್ರಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. 2023ರಲ್ಲಿ ಕಾಳಿ ದೇಗುಲವನ್ನು ನಿರ್ಮಿಸಿ ದಿನನಿತ್ಯವೂ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ.

ಅಮೆರಿಕ
ಅಮೆರಿಕದಲ್ಲಿ 1970ರಿಂದ ದುರ್ಗಾ ಪೂಜೆಗಳು ಆರಂಭಗೊಂಡಿತು. ಅಮೆರಿಕದಲ್ಲಿ ನವರಾತ್ರಿಯನ್ನು ಹೆಚ್ಚಾಗಿ ಭಾರತೀಯ ವಲಸಿಗರು ಆಚರಿಸುತ್ತಾರೆ. ಅನೇಕ ಸಮುದಾಯ ಕೇಂದ್ರಗಳು ಮತ್ತು ದೇವಾಲಯಗಳು ಗರ್ಬಾ ಮತ್ತು ದಾಂಡಿಯಾ ರಾಸ್‌ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಅವರ ಸಂಸ್ಕೃತಿ ಮತ್ತು ಪರಂಪರೆಯನ್ನು ಆಚರಿಸುವ ಜನರನ್ನು ಒಟ್ಟುಗೂಡಿಸಿ ಈ ಹಬ್ಬವನ್ನು ಆಚರಿಸುತ್ತಾರೆ.

ಇಂಗ್ಲೆಂಡ್‌
ಇಂಗ್ಲೆಂಡಿನಲ್ಲಿ ಲಂಡನ್‌, ಲೀಸೆಸ್ಟರ್‌ ಮತ್ತು ಬರ್ಮಿಂಗ್‌ಹ್ಯಾಮ್‌ ನಗರಗಳಲ್ಲಿ ನವರಾತ್ರಿಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ವಿವಿಧ ಸಾಂಸ್ಕೃತಿಕ ಗುಂಪುಗಳು ಕಾರ್ಯಕ್ರಮಗಳು ಮತ್ತು ಗರ್ಬಾ ಪಾರ್ಟಿಗಳನ್ನು ಆಯೋಜಿಸುತ್ತಾರೆ. ಈ ಹಬ್ಬಗಳು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವ ಅವಕಾಶವಾಗಿ ಕಾರ್ಯನಿರ್ವಹಿಸುತ್ತದೆ.

ನೇಪಾಲ
ನೇಪಾಲದಲ್ಲಿ ನವರಾತ್ರಿಯನ್ನು ದಶೈನ್‌ ಎಂದು ಕರೆಯುತ್ತಾರೆ. ಇದು ವರ್ಷದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದ್ದು, 15 ದಿನಗಳ ಕಾಲ ಈ ಹಬ್ಬವನ್ನು ಆಚರಿಸುತ್ತಾರೆ. ಈ ಸಮಯದಲ್ಲಿ ಜನರು ದುರ್ಗಾದೇವಿಯನ್ನು ವಿವಿಧ ರೂಪದಲ್ಲಿ ಪೂಜಿಸುತ್ತಾರೆ. ಇಲ್ಲಿನ ವಿಶೇಷವೆಂದರೆ “ಜಮರ’ ಆಚರಣೆ. ಇದರ ಭಾಗವಾಗಿ ಬಾರ್ಲಿ ಬೀಜವನ್ನು ಮಡಿಕೆಯಲ್ಲಿ ಬಿತ್ತಲಾಗುತ್ತದೆ. ಮೊಳಕೆಯೊಡೆದ ಈ ಬೀಜಗಳನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ ಮತ್ತು ಅಕ್ಕಪಕ್ಕದವರೊಂದಿಗೆ ವಿನಿಮಯ ಮಾಡಿಕೊಳ್ಳಲಾಗುತ್ತದೆ.

ಆಸ್ಟ್ರೇಲಿಯಾ
ಆಸ್ಟ್ರೇಲಿಯಾದಲ್ಲಿ 1974ರಲ್ಲಿ, ನ್ಯೂ ಸೌತ್‌ ವೇಲ್ಸನ್‌ ಭಾರತೀಯ ಸಮುದಾಯದ ಜನರು ಒಟ್ಟಾಗಿ ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಸಾಂಸ್ಕೃತಿಕ ತಂಡಗಳಿಂದ ದಾಂಡಿಯಾ ರಾಸ್‌ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಸ್ಥಳಗಳನ್ನು ವರ್ಣರಂಜಿತವಾಗಿ ಅಲಂಕರಿಸಲಾಗುತ್ತದೆ. ಉತ್ಸಾಹಭರಿತ ಸಂಗೀತಗಳು ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತವೆ.

ಬಾಂಗ್ಲಾದೇಶ
ಬಾಂಗ್ಲಾದ ಢಾಕಾದಲ್ಲಿರುವ ಢಾಕೇಶ್ವರ ದೇವಸ್ಥಾನದಲ್ಲಿ ನವರಾತ್ರಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ ದುರ್ಗಾದೇವಿ ದೇವಸ್ಥಾನವು ಜನರಿಂದ ತುಂಬಿ ತುಳುಕುತ್ತಿರುತ್ತದೆ. ಬಾಂಗ್ಲಾದಲ್ಲಿ ನೆಲೆಸಿರುವ ಬಹುಪಾಲು ಬಂಗಾಲಿಯರು ಈ ಹಬ್ಬವನ್ನು ಆಚರಿಸುತ್ತಾರೆ.

(ಸಂಗ್ರಹ ಮಾಹಿತಿ)

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.