ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ


Team Udayavani, Oct 5, 2024, 3:29 PM IST

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ವಿಜಯಪುರ: ನಾನೊಬ್ಬ ಸಣ್ಣ ದಲಿತ. ಆದರೂ, ನನಗೆ ಮುಂದೆ ಗುರಿಗಳು ಇವೆ. ಹಿಂದೆ ಗುರುಗಳು ಇದ್ದಾರೆ. ನನ್ನ ಜೀವ ಇರುವವರಿಗೂ ಮತ್ತು ಆ ಗುರಿಗಳು ಈಡೇರುವವರೆಗೆ ನಾನು ನನ್ನ ಪ್ರಯತ್ನ ಬಿಡಲ್ಲ ಎಂದು ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಬಾವುಕರಾದರು.

ಜಿಲ್ಲೆಯ ಇಂಡಿ ತಾಲೂಕಿನ ಕ್ಯಾತನಕೇರಿ ಗ್ರಾಮದಲ್ಲಿ ಶನಿವಾರ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ನನ್ನ ಪ್ರಯತ್ನ ಯಶಸ್ಸು ಆಗುತ್ತೋ, ಇಲ್ಲವೋ ಗೊತ್ತಿಲ್ಲ. ನನ್ನಂತಹ ದಲಿತರಿಗೆ ಒಳ್ಳೆಯದು ಆಗದಿದ್ದರೆ, ಮುಂದೆ ಯಾವ ದಲಿತರಿಗೂ ಒಳ್ಳೆಯದು ಆಗಲ್ಲ ಎಂಬುದು ಬಹಳ ಸ್ಪಷ್ಟ ಎಂದರು. ಈ ಮೂಲಕ ಮುಂದೆ ಬಿಜೆಪಿಗೆ ಬಹುಮತ ಬಂದರೆ ಮುಖ್ಯಮಂತ್ರಿ ಆಗುವ ಆಸೆಯನ್ನು ಜಿಗಜಿಣಗಿ ಬಿಚ್ಚಿಟ್ಟರು.

ನಾನು ಯಾರ ಮನ ನೋಯಿಸಿಲ್ಲ. ಯಾರ ಮನೆ ಮುರಿದಿಲ್ಲ. ಯಾರಿಗೂ ತೊಂದರೆಯನ್ನೂ ಮಾಡಿಲ್ಲ. ನನ್ನ ಜೀವನದಲ್ಲಿ ಕೆಲವು ಗುರಿಗಳು ಇವೆ. ನಮ್ಮಂತೋರು ಆಗದೇ ಇದ್ದರೆ, ಈ ದೇಶದಲ್ಲಿ ಮತ್ತ್ಯಾರು ಆಗುವವರು ಇದ್ದಾರೆ ಎಂದೂ ಪ್ರಶ್ನಿಸಿದರು.

ನಾನು 7 ಚುನಾವಣೆಗಳನ್ನು ಗೆದ್ದಿದ್ದೇನೆ. ಚಿಕ್ಕೋಡಿಯಲ್ಲಿ ಬೇರೆ-ಬೇರೆ ಪಕ್ಷದಿಂದ ಜನ ನನ್ನನ್ನು 3 ಸಲ ಗೆಲ್ಲಿಸಿದರು. ಮರಳಿ ಬಿಜಾಪುರಕ್ಕೆ ಬಂದೆ, ನೀವು 4 ಸಲ ಗೆಲ್ಲಿಸಿದಿರಿ. ಈ ಸಲ ನನ್ನನ್ನು ಸೋಲಿಸಲು ಬಹಳ ಪ್ರಯತ್ನ ಮಾಡಿದರು. ಕೋಟಿಗಟ್ಟಲೆ ಹಣ ಖರ್ಚು ಮಾಡಿದರು. ಆದರೆ, ನಾನು ‘ಪುಕ್ಕಟೆ ಗಿರಾಕಿ’ ಎಂದು ಹೇಳಿಕೊಂಡೇ ಪ್ರಚಾರ ಮಾಡಿದೆ ಎಂದರು.

ರಾಜಕಾರಣ ಮಾಡಲು ನಾವು ಹಣ ಎಲ್ಲಿಂದ ತರೋದು. ಹಣ ತರೋದು ಒಬ್ಬ ದಲಿತನಿಂದ ಸಾಧ್ಯ ಇದೆಯಾ?, ಮಕ್ಕಳು ದೊಡ್ಡೋರು ಆಗಿದ್ದಾರೆ. ಇರುವ ಆಸ್ತಿ ಮಾರಲು ಬಿಡಲ್ಲ. ನನ್ನದು ಒಣಗೈ ರಾಜಕಾರಣ. ಅದಕ್ಕೆ ನೀವು (ಜನ) ನನಗಾಗಿ ಒಂದು ದಿನ ಕೆಲಸ ಮಾಡಿ. ನಾನು ನಿಮಗಾಗಿ 5 ವರ್ಷ ಪುಕ್ಕಟೆ ಕೆಲಸ ಮಾಡುತ್ತೇನೆ ಅಂತಾ ಕೇಳಿಕೊಂಡೆ. ಅದಕ್ಕೆ ಜನರೂ ಮೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದರು.

ಜೀವನದಲ್ಲಿ ಹಣವಷ್ಟೇ ಮುಖ್ಯವಲ್ಲ, ನಡತೆಯೂ ಇರಬೇಕು. ಸಮಾಜ ಕೂಡ ಸೂಕ್ಷ್ಮವಾಗಿ ನೋಡುತ್ತದೆ. ಚುನಾವಣೆ ಬಂದರೆ ಎಲ್ಲ ರಾಜಕಾರಣಿಗಳು ತಮ್ಮ-ತಮ್ಮ ಸಮಾಜಗಳ ಹಿಂದೆ ಗಂಟು ಬೀಳುತ್ತಾರೆ. ನಾನು ಒಂದು ದಿನ ಸಹ ದಲಿತರ ಕೇರಿಗೆ ಹೋಗಿಲ್ಲ. ಹೋಗೋದು ಇಲ್ಲ. ಈ ಇಂತಹ ಧೈರ್ಯ ರಾಜಕಾರಣದಲ್ಲಿ ಯಾರಾದರೂ ಮಾಡ್ತಾರಾ?. ನಾನು 50 ವರ್ಷ ರಾಜಕಾರಣದಲ್ಲಿ ಎಲ್ಲ ಸಮಾಜಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.