ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
Team Udayavani, Oct 5, 2024, 3:54 PM IST
ಗದಗ: ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ವಿಧಾನಸಭೆಯಲ್ಲಿ ಸಚಿವರ, ಶಾಸಕರ ಧ್ವನಿ ಅಡಗಿದ ಕಾರಣ ನ್ಯಾಯಾಂಗದ ಮೂಲಕ ಹೋರಾಟ ಆರಂಭಿಸಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಎಲ್ಲ ಸಚಿವರು, ಶಾಸಕರು ಮಾತನಾಡುತ್ತಿದ್ದರು. ಸಿಎಂ ಸಿದ್ದರಾಮಯ್ಯ ಅವರ ಎದುರು ಸಮಾಜದ ಸಚಿವರು, ಶಾಸಕರು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಮಕ್ಕಳಿಗೆ ನ್ಯಾಯ ಸಿಗಬೇಕು, ಶೈಕ್ಷಣಿಕವಾಗಿ, ಸರಕಾರಿ ಉದ್ಯೋಗಕ್ಕಾಗಿ, ಸಂವಿಧಾನಬದ್ಧ ಹಕ್ಕುಗಳಿಗಾಗಿ ಪಂಚಮಸಾಲಿ ಸಮಾಜದ ವಕೀಲರು ಹೋರಾಟ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಅ. 15ರಂದು ಪಂಚಮಸಾಲಿ ಸಮಾಜದ ಪ್ರಮುಖ ವಕೀಲರ ಸಭೆ ಕರೆದಿದ್ದಾರೆ. ಆದರೆ, ಸಭೆಯ ಸಮಯ ಹಾಗೂ ಸ್ಥಳ ಸಭೆ ನಿಗದಿಯಾಗಿಲ್ಲ, ಕೂಡಲೇ ಸಮಯ ಹಾಗೂ ಸ್ಥಳ ನಿಗದಿಗೊಳಿಸಬೇಕು. ಮುಖ್ಯಮಂತ್ರಿಗಳ ಬಳಿ ತೆರಳುವ ನಿಯೋಗದಲ್ಲಿ ಯಾವ ಯಾವ ವಿಷಯಗಳನ್ನು ಚರ್ಚಿಸಬೇಕು ಎಂದು ಈಗಾಗಲೇ ತೀರ್ಮಾನ ಮಾಡಲಾಗಿದೆ. 10 ಜನ ವಕೀಲರೊಂದಿಗೆ ಸಮುದಾಯದ ಪ್ರಮುಖರು, ಪಂಚಮಸಾಲಿ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಭೆಯಲ್ಲಿ ಮೀಸಲಾತಿ ಹಾಗೂ ಅದರಿಂದ ಸಮಾಜಕ್ಕೆ ಉಂಟಾಗುವ ಅನುಕೂಲಗಳ ಕುರಿತು ಚರ್ಚಿಸುವುದರ ಜೊತೆಗೆ ಮನವೊಲಿಸಲಾಗುವುದು, ಒಂದು ವೇಳೆ ಬೇರೆ ಬೇರೆ ಕಾರಣ, ನೆಪವೊಡ್ಡಿ ಸಭೆಯನ್ನು ಮೊಟಕುಗೊಳಿಸಿದ್ದಲ್ಲಿ ವಕೀಲರೊಂದಿಗೆ, ಸಮುದಾಯದ ಮುಖಂಡರು, ಹೋರಾಟಗಾರರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು.
ಸಿಎಂ ಸಿದ್ದರಾಮಯ್ಯ ಅವರು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುತ್ತಾರೆ ಎಂಬ ವಿಶ್ವಾಸವಿದೆ. ಇಲ್ಲವಾದಲ್ಲಿ 10 ಸಾವಿರಕ್ಕೂ ಹೆಚ್ಚು ಸಮಾಜದ ಮುಖಂಡರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು, ಜಾತಿ ಜನಗಣತಿ ಮಾಡುವ ಬಗ್ಗೆ ಎಲ್ಲೆಡೆ ಅಸಮಾಧಾನವಿದ್ದು, ವೈಜ್ಞಾನಿಕವಾಗಿ, ಸತ್ಯವನ್ನು ಆಧರಿಸಿ ಜಾತಿ ಜನಗಣತಿಯಾದರೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.
ಇದನ್ನೂ ಓದಿ: ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.