Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

ಬಿಬಿಎಂಪಿಯಿಂದ ಫೇಸ್‌ಲೆಸ್‌, ಸಂಪರ್ಕ ರಹಿತ ಆನ್‌ಲೈನ್‌ ಇ-ಖಾತಾ ವ್ಯವಸ್ಥೆ ; 21 ಲಕ್ಷಕ್ಕೂ ಹೆಚ್ಚು ಕರಡು ಇ-ಖಾತಾಗಳ ಡಿಜಿಟಲೀಕರಣ

Team Udayavani, Oct 5, 2024, 4:13 PM IST

19-bbmp

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವಹಿಗಳಲ್ಲಿ ದಾಖಲಾಗಿರುವ ಎಲ್ಲ ಖಾತಾಗಳನ್ನು-ಎ ಖಾತಾ ಮತ್ತು ಬಿ ಖಾತಾ ಎರಡನ್ನೂ ಡಿಜಿಟಲೀಕರಣ ಮಾಡಲಾಗಿದೆ. 21 ಲಕ್ಷಕ್ಕೂ ಹೆಚ್ಚು ಕರಡು ಇ-ಖಾತಾಗಳನ್ನು ಯಾರಾದರೂ ಯಾವುದೇ ಸಮಯದಲ್ಲಿ, ಎಲ್ಲಿಯಾದರೂ ಆನ್‌ಲೈನ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಹೊಸ ದಾಗಿ ಅನುಷ್ಠಾನಗೊಳಿಸಲಾಗಿರುವ ಫೇಸ್‌ಲೆಸ್‌, ಸಂಪರ್ಕರಹಿತ ಆನ್‌ಲೈನ್‌ ಬಿಬಿಎಂಪಿ ಇ-ಖಾತಾ ವ್ಯವಸ್ಥೆ ಕುರಿತು ಬಿಬಿಎಂಪಿ ಮಾಹಿತಿ ನೀಡಿದೆ.

ಎ ಖಾತ ಮತ್ತು ಬಿ ಖಾತಾ ಸ್ವತ್ತುಗಳಿಗೆ ಸಂಬಂಧಿಸಿದ ಕರಡು ಇ-ಖಾತಾಗಳನ್ನು ಆನ್‌ಲೈನ್‌ಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ https://bbmpeaasthi.karnataka.gov.in/ ಲಿಂಕ್‌ ಮೂಲಕ ಕರಡು ಇ-ಖಾತಾ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ನಾಗರಿಕರು ತಮ್ಮ ಅಂತಿಮ ಇ-ಖಾತಾ ಪಡೆ ಯಲು ಬಿಬಿಎಂಪಿಯಲ್ಲಿ ಯಾರನ್ನೂ ಭೇಟಿ ಮಾಡುವ ಅವಶ್ಯಕತೆಯಿರುವುದಿಲ್ಲ. ಇದು ಸಂಪೂರ್ಣವಾಗಿ ಆನ್‌ಲೈನ್‌ ವ್ಯವಸ್ಥೆ ಮತ್ತು ಸಂಪರ್ಕ ರಹಿತ ವಾಗಿದೆ ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ದಾಖಲಾತಿಗಳು: ಇ-ಆಸ್ತಿ ತಂತ್ರಾಂಶವು ವಿದ್ಯುನ್ಮಾನವಾಗಿ ಕಾವೇರಿಯಿಂದ ಪಡೆಯುವ ಕ್ರಯ ಪತ್ರ ಅಥವಾ ನೋಂದಾಯಿತ ಪತ್ರದ ಸಂಖ್ಯೆ ಅಗತ್ಯವಾಗಿದೆ ಎಂದು ತಿಳಿಸಲಾಗಿದೆ.

2024ರ ಏ.1ರಿಂದ ಇಲ್ಲಿಯವರೆಗಿನ ಸ್ವತ್ತಿನ ಋಣಭಾರ ಪ್ರಮಾಣ ಪತ್ರ ಹಾಗೂ ಋಣಭಾರ ಪ್ರಮಾಣ ಪತ್ರ ಸಂಖ್ಯೆಯನ್ನು ಮಾತ್ರ ನಮೂದಿಸಿ. ಇ-ಆಸ್ತಿ ತಂತ್ರಾಂಶವು ವಿದ್ಯುನ್ಮಾನವಾಗಿ ಕಾವೇರಿಯಿಂದ ಪಡೆಯುತ್ತದೆ. ಆಸ್ತಿ ತೆರಿಗೆಯ 10 ಅಂಕಿಯ ಅರ್ಜಿ ಸಂಖ್ಯೆಯನ್ನು ನಮೂದಿಸಿ ಹಾಗೂ ಮಾಹಿತಿ ಯನ್ನು ವಿದ್ಯುನ್ಮಾನವಾಗಿ ಪಡೆಯಲಾಗುತ್ತದೆ. ಮಾಲಿಕರ ಆಧಾರ್‌ ಇ-ಕೆವೈಸಿ, ಬೆಸ್ಕಾಂ 10-ಅಂಕಿಯ ಖಾತಾ ಸಂಖ್ಯೆಯನ್ನು ನಮೂದಿಸಿ ಹಾಗೂ ಮಾಹಿತಿ ಯನ್ನು ವಿದ್ಯುನ್ಮಾನವಾಗಿ ಪರಿಶೀಲಿಸಲಾಗುವುದು, ಆಸ್ತಿಯ ಜಿಪಿಎಸ್‌ ಮತ್ತು ಆಸ್ತಿ ಭಾವಚಿತ್ರ ನೀಡಿ. ಎ- ಖಾತಾ ಗಾಗಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ (ನಾಗರಿಕರು ದಾಖಲೆಗಳು ಲಭ್ಯವಿಲ್ಲವೆಂದು ಘೋಷಿಸಬಹುದು ಆದರು ಸಹ ಅಂತಿಮ ಇ-ಖಾತಾವನ್ನು ನೀಡಲಾಗುವುದು).

ಮೇಲಿನ ವಿವರಗಳನ್ನು ವಿದ್ಯುನ್ಮಾನವಾಗಿ ಒದಗಿಸಿದ ನಂತರ ತಂತ್ರಾಂಶವು ಸ್ವತಃ ಎಲ್ಲ ದಾಖಲೆಗಳನ್ನು ಪರಿಶೀಲಿಸುತ್ತದೆ.

ನಂತರ ಸ್ವಯಂ ಚಾಲಿತವಾಗಿ ಅಂತಿಮ ಇ-ಖಾತಾವನ್ನು ನೀಡುತ್ತದೆ. ಅಂತಿಮ ಇ-ಖಾತಾ ಪಡೆಯಲು ಬಿಬಿಎಂಪಿಯಲ್ಲಿ ಯಾರನ್ನೂ ಭೇಟಿ ಮಾಡುವ ಅಗತ್ಯವಿಲ್ಲ. ನಮೂದಿಸಿದ ಮಾಹಿತಿಯು ಅಪೂರ್ಣವಾಗಿದ್ದರೆ, ಬಿಬಿಎಂಪಿ ದಾಖಲೆ ಗಳೊಂದಿಗೆ ಹೊಂದಿಕೆಯಾಗದಿದ್ದರೆ ಅಥವಾ ಅಂತಿಮ ಇ-ಖಾತಾವನ್ನು ನೀಡದಿರಲು ಯಾರಾ ದರೂ ಆಕ್ಷೇಪಣೆ ಸಲ್ಲಿಸಿದ್ದರೆ ಮಾತ್ರ ನಾಗರಿಕರು ಬಿಬಿಎಂಪಿಗೆ ಭೇಟಿ ನೀಡಬಹುದು. ಇದು ಅತ್ಯಂತ ಪಾರದರ್ಶಕ ಮತ್ತು ನಾಗರಿಕ ನಿಯಂತ್ರಣದಲ್ಲಿರುವ ಇ-ಖಾತಾ ವ್ಯವಸ್ಥೆಯಾಗಿದೆ.

ಯಾವೆಲ್ಲ ದಾಖಲೆ ಬೇಕು?

ಆನ್‌ಲೈನ್‌ನಲ್ಲಿ ಆಸ್ತಿ ತೆರಿಗೆಯ 10 ಅಂಕಿಯ ಅರ್ಜಿ ಸಂಖ್ಯೆಯನ್ನು ನಮೂದಿಸಿ ಹಾಗೂ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪಡೆಯ ಲಾಗುತ್ತದೆ. ಮಾಲಿಕರ ಆಧಾರ್‌ ಇ-ಕೆವೈಸಿ, ಬೆಸ್ಕಾಂ 10-ಅಂಕಿಯ ಖಾತಾ ಸಂಖ್ಯೆಯನ್ನು ನಮೂದಿಸಿ ಹಾಗೂ ಮಾಹಿತಿಯನ್ನು ವಿದ್ಯು ನ್ಮಾನವಾಗಿ ಪರಿಶೀಲಿಸಲಾಗುವುದು, ಆಸ್ತಿಯ ಜಿಪಿಎಸ್‌ ಮತ್ತು ಆಸ್ತಿ ಭಾವಚಿತ್ರ ನೀಡಿ. ಎ- ಖಾತಾಗಾಗಿ ಅಗತ್ಯ ದಾಖಲೆಗಳನ್ನು ಅಪ್‌ ಲೋಡ್‌ ಮಾಡಬೇಕು

ಈ ಲಿಂಕ್‌ ಕ್ಲಿಕ್‌ ಮಾಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಎ ಖಾತಾ ಹಾಗೂ ಬಿ ಖಾತಾ ಸ್ವತ್ತುಗಳಿಗೆ ಸಂಬಂಧಿಸಿದ ಕರಡು ಇ-ಖಾತಾಗಳನ್ನು https://bbmpeaasthi.karnataka.gov.in/  ಲಿಂಕ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಫೇಸ್‌ಲೆಸ್‌, ಸಂಪರ್ಕರಹಿತ ಆನ್‌ಲೈನ್‌ ಬಿಬಿ ಎಂಪಿ ಇ-ಖಾತಾ ವ್ಯವಸ್ಥೆ ಇದಾಗಿದೆ.

■ ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.