ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


Team Udayavani, Oct 5, 2024, 7:32 PM IST

01

ಉಡುಪಿ: ಉಚ್ಚಿಲ ದಸರಾ ರೂವಾರಿ, ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ| ಜಿ. ಶಂಕರ್ ಅವರ 69ನೇ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶನಿವಾರ ಚಂಡಿಕಾಯಾಗ, ಪೂರ್ಣಾಹುತಿ ಮತ್ತು ಮಹಾಅನ್ನಸಂತರ್ಪಣೆ ನಡೆಯಿತು.

ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ಕೆ. ವಿ. ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಪೂರ್ಣಕುಂಭದೊಂದಿಗೆ ಸ್ವಾಗತಿಸಿ, ಮಹಾಲಕ್ಷ್ಮೀ ದೇವರಿಗೆ ಮಹಾಮಂಗಳಾರತಿ ಬೆಳಗಲಾಯಿತು. ಬಳಿಕ ಯಜ್ಣ ಮಂಟಪದಲ್ಲಿ ಪ್ರಧಾನ ಅರ್ಚಕರ ಪೌರೋಹಿತ್ಯದಲ್ಲಿ ಋತ್ವಿಜರ ಸಹಕಾರದೊಂದಿಗೆ ಅರ್ಗಲಾಕೀಲಕ ಸ್ತೋತ್ರ, ಕಲ್ಪೋಕ್ತ ಪೂಜೆ, ಸಪ್ತಶತಿ ಸಹಸ್ರ ಶ್ಲೋಕಗೊಂದಿಗೆ ಹವಿಸ್ಸು ಅರ್ಪಣೆ ಸಹಿತ ಚಂಡಿಕಾ ಪುರ್ಣಾಹುತಿ ನಡೆಸಲಾಯಿತು.

ನಾಡೋಜ ಡಾ| ಜಿ. ಶಂಕರ್, ಪತ್ನಿ ಶಾಲಿನಿ ಜಿ. ಶಂಕರ್, ಮಗಳು ಶ್ಯಾಮಿಲಿ ನವೀನ್, ಅಳಿಯ ನವೀನ್, ಮೊಮ್ಮಕ್ಕಳಾದ ಶನಾಯ, ಸಾನ್ವಿಕಾ ಚಂಡಿಕಾ ಯಾಗದಲ್ಲಿ ಪಾಲ್ಗೊಂಡರು. ಶರನ್ನವರಾತ್ರಿ ಪ್ರಯುಕ್ತ ಭಕ್ತಾಽಗಳಿಂದ ಯಾಗ ಕುಂಡದಲ್ಲಿ ಸಾಮೂಹಿಕ ನಿತ್ಯ ಚಂಡಿಕಾ ಹೋಮ ನಡೆಯಿತು. ಬಳಿಕ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಮಟ್ಟು, ಕೋಶಾಽಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್, ಮಹಾಜನ ಮಹಿಳಾ ಸಂಘದ ಅಧ್ಯಕ್ಷೆ ಉಷಾ ರಾಣಿ, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್, ನಾಲ್ಕು ಪಟ್ಣ ಮೊಗವೀರ ಮಹಾಸಭಾ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣಾ ಕರ್ಕೇರ, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಪ್ರಮುಖರಾದ ಚೇತನ್ ಬೇಂಗ್ರೆ, ಮೋಹನ್ ಬಂಗೇರ ಕಾಪು, ರಮೇಶ್ ಕಾಂಚನ್, ಮಹಾಬಲ ಕುಂದರ್, ಶಂಕರ ಸಾಲ್ಯಾನ್, ಸತೀಶ್  ಸಾಲ್ಯಾನ್, ಸುಜಿತ್ ಸಾಲ್ಯಾನ್ ಮೂಲ್ಕ್ಕಿ, ನಾರಾಯಣ ಸಿ. ಕರ್ಕೇರ, ಸುಧಾಕರ ಕುಂದರ್, ದಿನೇಶ್ ಎರ್ಮಾಳು, ಮೋಹನ್ ಬಂಗೇರ, ರವೀಂದ್ರ ಶ್ರೀಯಾನ್, ನಾರಾಯಣ ಕುಂದರ್ ಕಲ್ಮಾಡಿ, ಲೋಕೇಶ್ ಮೆಂಡನ್, ಸತೀಶ್ ಅಮೀನ್ ಪಡುಕೆರೆ, ಯತೀಶ್ ಕಿದಿಯೂರು ಮೊದಲಾದವರು ಉಪಸ್ಥಿತರಿದ್ದರು.

ಸಮ್ಮಾನ, ಗೌರವಾರ್ಪಣೆ : ದ.ಕ. ಮೊಗವೀರ ಮಹಾಜನ ಸಂಘ, ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ, ಕರ್ನಾಟಕ ಬ್ಯಾಂಕ್ ಲಿ., ಮಹಾಲಕ್ಷ್ಮೀ ಕೋ. ಆಪರೇಟಿವ್ ಬ್ಯಾಂಕ್ ಲಿ., ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಕರಾವಳಿ ಕರ್ನಾಟಕದ ಸಮಸ್ತ ಮೊಗವೀರ ಸಂಘಟನೆಗಳ ಸಹಿತ ವಿವಿಧ ಸಂಘ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳ ವತಿಯಿಂದ ಡಾ| ಜಿ. ಶಂಕರ್ ಅವರನ್ನು ಸಮ್ಮಾನಿಸಿ, ಗೌರವಿಸಿ, ಅಭಿನಂದಿಸಲಾಯಿತು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.