Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

ಇನ್ನೂ ನಂಬುತ್ತೀರಾ?... ಎಕ್ಸಿಟ್ ಪೋಲ್‌ ಕೇವಲ ಟೈಮ್ ಪಾಸ್ ಎಂದ ಒಮರ್ ಅಬ್ದುಲ್ಲಾ

Team Udayavani, Oct 5, 2024, 7:37 PM IST

congress

ಹೊಸದಿಲ್ಲಿ: ಹರಿಯಾಣದಲ್ಲಿ ಶನಿವಾರ 90 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್(Congress) ಬಿಜೆಪಿಯ(BJP) ಕೈಯಿಂದ ಅಧಿಕಾರ ಕಸಿದು ಮುಂದಿನ ಸರಕಾರವನ್ನು ರಚಿಸುವ ಸಾಧ್ಯತೆಯಿದೆ ಎಂದು ಹಲವು ಸಮೀಕ್ಷೆಗಳಲ್ಲಿ ಹೇಳಲಾಗಿದೆ. ನಾಲ್ಕು ಎಕ್ಸಿಟ್ ಪೋಲ್‌ಗಳು ಹರಿಯಾಣದ 90 ಸ್ಥಾನಗಳ ಪೈಕಿ 55 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿವೆ.

ನ್ಯಾಷನಲ್ ಕಾನ್ಫರೆನ್ಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಲುಗೈ ಸಾಧಿಸುತ್ತದೆ ಎಂದು ಸಮೀಕ್ಷೆಗಳು ಹೇಳಿವೆ. ಒಟ್ಟು 90 ಸ್ಥಾನಗಳನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ, ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟವು 43 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ಹೇಳಿವೆ. ಬಹುಮತ 46 ಅಗತ್ಯವಾಗಿದ್ದು ಅದಕ್ಕಿಂತ ಮೂರು ಸ್ಥಾನ ಕಡಿಮೆ ಮೈತ್ರಿಕೂಟ ಗೆಲ್ಲುತ್ತದೆ ಎಂದು ಭವಿಷ್ಯ ನುಡಿಯಲಾಗಿದೆ.

2019 ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು, ಕಾಂಗ್ರೆಸ್ 31 ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) 10 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿಯು ಜೆಜೆಪಿ ಬೆಂಬಲದೊಂದಿಗೆ ಸರ್ಕಾರವನ್ನು ರಚಿಸಿತ್ತು. ಮನೋಹರ್ ಲಾಲ್ ಖಟ್ಟರ್ ಮುಖ್ಯಮಂತ್ರಿಯಾಗಿದ್ದರು.

ಇಂಡಿಯಾ ಟುಡೇ-ಸಿವೋಟರ್ ಎಕ್ಸಿಟ್ ಪೋಲ್ ಸಮೀಕ್ಷೆಯು ಕಾಶ್ಮೀರ ಪ್ರಾಂತ್ಯದ 46 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಪಡೆಯುವ ಮೂಲಕ ಇಂಡಿಯಾ ಬ್ಲಾಕ್ (ನ್ಯಾಶನಲ್ ಕಾನ್ಫರೆನ್ಸ್, ಕಾಂಗ್ರೆಸ್ ಮತ್ತು ಇತರ ಪಕ್ಷ) ಸ್ವೀಪ್ ಮಾಡುವ ಸಾಧ್ಯತೆಯಿದೆ ಎಂದಿದೆ,ಇಲ್ಲಿ ಬಿಜೆಪಿ ಖಾತೆಯೇ ತೆರೆಯುವ ಸಾಧ್ಯತೆ ಕಡಿಮೆ ಎಂದು ಸಮೀಕ್ಷೆ ಹೇಳಿದೆ.

ಮ್ಯಾಟ್ರಿಜ್ ಸಮೀಕ್ಷೆ ಹರಿಯಾಣದಲ್ಲಿ ಕಾಂಗ್ರೆಸ್‌ಗೆ 55-62 ಮತ್ತು ಬಿಜೆಪಿಗೆ 18-24 ಸ್ಥಾನಗಳ ಭವಿಷ್ಯ ನುಡಿದಿದೆ. JJP+ ಗೆ 0-3 ಸ್ಥಾನಗಳು, INLD+ ಗೆ 3-6 ಸ್ಥಾನಗಳು ಮತ್ತು ಇತರರಿಗೆ 2-5 ಸ್ಥಾನಗಳು ಎಂದಿದೆ ಎಎಪಿಗೆ ಶೂನ್ಯ ಎಂದಿದೆ.

ಕಾಂಗ್ರೆಸ್ 57 ಸ್ಥಾನಗಳನ್ನು ಗೆಲ್ಲಬಹುದು ಎಂದು ಧ್ರುವಿ ಭವಿಷ್ಯ ನುಡಿದಿದ್ದು, ಆಡಳಿತಾರೂಢ ಬಿಜೆಪಿ 27 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. JJP+, INLD+, ಮತ್ತು AAP ಗೆ ಶೂನ್ಯ ಸ್ಥಾನಗಳ ಭವಿಷ್ಯ ನುಡಿದಿದೆ. ಇತರರು ಆರು ಸ್ಥಾನಗಳನ್ನು ಗೆಲ್ಲಲಿದ್ದಾರೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ರಿಪಬ್ಲಿಕ್-ಗುಲಿಸ್ಥಾನ್ ಎಕ್ಸಿಟ್ ಪೋಲ್‌ಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಎರಡೂ 90 ಸದಸ್ಯರ ವಿಧಾನಸಭೆಯಲ್ಲಿ ತಲಾ 28 ರಿಂದ 30 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಇದು ಈ ಎರಡು ಪ್ರಮುಖ ಪಕ್ಷಗಳ ನಡುವಿನ ಪೈಪೋಟಿಯನ್ನು ಸೂಚಿಸುತ್ತದೆ.

ಎಕ್ಸಿಟ್ ಪೋಲ್‌ ಕೇವಲ ಟೈಮ್ ಪಾಸ್
ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ್ದು ”ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಎಕ್ಸಿಟ್ ಪೋಲ್‌ಗಳ ವಿಶ್ವಾಸಾರ್ಹತೆ ತಿಳಿದಿಲ್ಲವೇ? ನಾನು ಎಕ್ಸಿಟ್ ಪೋಲ್‌ಗಳ ವೈಫಲ್ಯದ ನಂತರವೂ ಆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿರುವ ಬಗ್ಗೆ ವಿಸ್ಮಯಗೊಂಡಿದ್ದೇನೆ. ಚಾನೆಲ್‌ಗಳು, ಸಾಮಾಜಿಕ ಮಾಧ್ಯಮಗಳು ಮತ್ತು ವಾಟ್ಸಾಪ್‌ಗಳಲ್ಲಿ ಹರಟೆ ಮಾಡಲಾಗುತ್ತಿದೆ. ಅಕ್ಟೋಬರ್ 8 ರಂದು ಹೊರ ಬೀಳುವ ಸಂಖ್ಯೆಗಳು ಸಂಖ್ಯೆಗಳು ಮಾತ್ರ ನಿಜವಾದದ್ದು. ಉಳಿದವು ಕೇವಲ ಟೈಮ್ ಪಾಸ್” ಎಂದಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.