J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

ಸಂವಿಧಾನದ ಮೂಲಭೂತ ತತ್ವಗಳ ಮೇಲಿನ ಆಕ್ರಮಣ ಎಂದ ಕಾಂಗ್ರೆಸ್‌ ಮುಖಂಡ ರವೀಂದರ್ ಶರ್ಮಾ

Team Udayavani, Oct 5, 2024, 9:28 PM IST

JK-Congress

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದು ಫಲಿತಾಂಶ ಪ್ರಕಟಕ್ಕೂ ಮೊದಲೇ ವಿಧಾನಸಭೆಗೆ ಐವರು ಸದಸ್ಯರ ನಾಮ ನಿರ್ದೇಶನಗೊಳಿಸಿದ್ದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ವಿಧಾನಸಭೆಗೆ ಐವರು ಸದಸ್ಯರ ನಾಮ ನಿರ್ದೇಶನಕ್ಕೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದ್ದು, ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಈ ಕ್ರಮವನ್ನು ಪ್ರಜಾಪ್ರಭುತ್ವದ ತತ್ವಗಳು ಮತ್ತು ಸಂವಿಧಾನದ ಮೇಲಿನ ದಾಳಿ, ಈ ನಾಮನಿರ್ದೇಶನ ಸರ್ಕಾರ ರಚನೆಯ ಮೇಲೆ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್‌ ಹೇಳಿದೆ ಹಾಗೂ ಐವರು ಪ್ರತಿನಿಧಿಗಳ ನಾಮನಿರ್ದೇಶನ ಅನುಮೋದಿಸದಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾಗೆ ಆಗ್ರಹಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಹಿರಿಯ ಉಪಾಧ್ಯಕ್ಷ ರವೀಂದರ್ ಶರ್ಮಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಗೂ ಮುನ್ನ ಲೆಫ್ಟಿನೆಂಟ್ ಗವರ್ನರ್ ಐವರು ಶಾಸಕರ ನಾಮನಿರ್ದೇಶನವನ್ನು ನಾವು ವಿರೋಧಿಸುತ್ತೇವೆ. ಅಂತಹ ಯಾವುದೇ ಕ್ರಮವು ಪ್ರಜಾಪ್ರಭುತ್ವ, ಜನರ ಆದೇಶ ಮತ್ತು ಸಂವಿಧಾನದ ಮೂಲಭೂತ ತತ್ವಗಳ ಮೇಲಿನ ಆಕ್ರಮಣ ಎಂದು ಹೇಳಿದ್ದಾರೆ.

ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರವೇ ನಾಮನಿರ್ದೇಶನಗಳ ಮಾಡಬೇಕೆಂದು ಕಾಂಗ್ರೆಸ್ ಕರೆ ನೀಡಿದೆ. ಬೇರೆ ಯಾವುದೇ ವಿಧಾನವು ಜನರ ಆದೇಶಕ್ಕೆ ದ್ರೋಹವಾಗುತ್ತದೆ ಎಂದು ಸಮರ್ಥಿಸಿಕೊಂಡಿದೆ.  ಲೆಫ್ಟಿನೆಂಟ್ ಗವರ್ನರ್ ಅನುಮೋದಿಸಿದ ನಾಮನಿರ್ದೇಶನಗಳು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019ಕ್ಕೆ ಮಾಡಿದ ತಿದ್ದುಪಡಿಗಳ ಭಾಗವಾಗಿದೆ.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯಡಿ, ಕಾಶ್ಮೀರಿ ಪಂಡಿತರು ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ನಿರಾಶ್ರಿತರಿಗೆ ಪ್ರಾತಿನಿಧ್ಯ ಸೇರಿದಂತೆ 5 ಸದಸ್ಯರನ್ನು ನಾಮನಿರ್ದೇಶಿಸುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಹೊಂದಿದ್ದಾರೆ. ಆದರೆ, ಲೆಫ್ಟಿನೆಂಟ್ ಗವರ್ನರ್ ಚುನಾವಣೆಯ ನಂತರ ರಚನೆಯಾಗುವ ಸಚಿವ ಸಂಪುಟ ಸಲಹೆ ಆಧರಿಸಿ ಮಾತ್ರ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ವಾದಿಸಿದೆ.

ಚುನಾವಣೆಯ ನಂತರದ ಬಹುಮತ ಅಥವಾ ಅಲ್ಪ ಮತ ಸ್ಥಿತಿ ಬದಲಾಯಿಸಲು ನಾಮನಿರ್ದೇಶನದ ನಿಬಂಧನೆ ದುರುಪಯೋಗಪಡಿಸಿಕೊಳ್ಳುವುದು ಒಳ್ಳೆಯದಲ್ಲ. ಸರ್ಕಾರ ರಚನೆಯ ಮೊದಲು ಅಂತಹ ನಾಮನಿರ್ದೇಶನ “ಅಸಾಂವಿಧಾನಿಕ” ಎಂದು ಕಾಂಗ್ರೆಸ್ ಟೀಕಿಸಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.