Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

ನವರಾತ್ರಿ- ನವದೇವಿ: ಪುರಾಣ ತಜ್ಞರ ಪ್ರಕಾರ ದೇವಿಯ ರೂಪವಾಗಿರುವ ವೈಷ್ಣೋದೇವಿಯು ಮಹಾದೇವಿ ಸ್ವರೂಪ

Team Udayavani, Oct 5, 2024, 11:29 PM IST

Vaishnodevi-Temple

ನಾಡಿನೆಲ್ಲೆಡೆ ಈಗ ನವರಾತ್ರಿಯ ಸಂಭ್ರಮ. ಈ ಹಬ್ಬವನ್ನು ದೇಶದೆಲ್ಲೆಡೆ ಅತ್ಯಂತ ವೈಭವ, ಸಡಗರಗಳಿಂದ ಆಚರಿಸಲಾಗುತ್ತಿದೆ. ದೇಶಾದ್ಯಂತ ಇರುವ ದುರ್ಗಾದೇವಿಯ ದೇವಾಲಯಗಳಲ್ಲಿ ಭಕ್ತರು ವಿಶೇಷ ಶ್ರದ್ಧಾಭಕ್ತಿಯಿಂದ ಶಕ್ತಿಮಾತೆಯ ಆರಾಧನೆಯಲ್ಲಿ ತೊಡಗಿದ್ದಾರೆ. ನವರಾತ್ರಿಯ ಈ ಸಂದರ್ಭದಲ್ಲಿ ದೇಶದ ಒಂಬತ್ತು ಪ್ರಸಿದ್ಧ ದೇವಿ ದೇವಾಲಯಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸುವ “ನವರಾತ್ರಿ- ನವದೇವಿ’ ಲೇಖನ ಮಾಲಿಕೆಯಲ್ಲಿ ಈ ದಿನ ಜಮ್ಮು -ಕಾಶ್ಮೀರದ
ಶ್ರೀ ಮಾತಾ ವೈಷ್ಣೋದೇವಿ ದೇಗುಲ.

ದುರ್ಗೆಯ ರೂಪ ಎಂದು ಹೇಳಲಾಗುವ ಶ್ರೀ ವೈಷ್ಣೋದೇವಿಯ ಈ ಮಂದಿರ ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದು. ಜಮ್ಮು-ಕಾಶ್ಮೀರದ ಕತ್ರಾದಲ್ಲಿರುವ ಈ ದೇಗುಲ 1,500 ಅಡಿಗಳಷ್ಟು ಎತ್ತರದಲ್ಲಿರುವ ತ್ರಿಕೂಟ ಪರ್ವತದಲ್ಲಿದೆ. ಇದು ಶಕ್ತಿಪೀಠಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ.
ಪುರಾಣ ಪ್ರಸಿದ್ಧವಾಗಿರುವ ಶ್ರೀ ವೈಷ್ಣೋದೇವಿ ದೇಗುಲದ ಉಲ್ಲೇಖ ಮಹಾ ಭಾರತದಲ್ಲಿಯೂ ಇದೆ. ಪಾಂಡವರು ವೈಷ್ಣೋದೇವಿಯನ್ನು ಪೂಜಿಸುತ್ತಿದ್ದರು.

ತ್ರಿಕೂಟ ಪರ್ವತದ ಗುಹೆಯಲ್ಲಿರುವ ಐದು ಬಂಡೆಗಳು ಪಂಚ ಪಾಂಡವರನ್ನು ಹೋಲುತ್ತದೆ ಎಂಬ ಪ್ರತೀತಿ ಇದ್ದು ಇದನ್ನು ಹಿಂದೂ ಬಾಂಧವರು ಇಂದಿಗೂ ನಂಬಿ ಕೊಂಡು ಬಂದಿದ್ದಾರೆ. ಅಷ್ಟು ಮಾತ್ರವಲ್ಲದೆ ಶ್ರೀ ವೈಷ್ಣೋದೇವಿ ನೆಲೆನಿಂತ ತ್ರಿಕೂಟ ಪರ್ವತದ ಉಲ್ಲೇಖವನ್ನು ಋಗ್ವೇದದಲ್ಲಿಯೂ ಕಾಣಬಹುದಾಗಿದೆ. ವೇದಗಳ ಕಾಲ ದಿಂದಲೂ ಪ್ರಸಿದ್ಧವಾಗಿರುವ ಈ ಗುಹಾ ದೇಗುಲ ಇಂದಿಗೂ ಹಿಂದೂಗಳ ಅತ್ಯಂತ ಪ್ರವಿತ್ರ ಶ್ರದ್ಧಾ ಮತ್ತು ಯಾತ್ರಾ ಕೇಂದ್ರವಾಗಿದೆ.

ಈ ದೇವಾಲಯದಲ್ಲಿ ಶಕ್ತಿಯ ವಿವಿಧ ರೂಪಗಳಾದ ಮಹಾಕಾಳಿ, ಮಹಾಲಕ್ಷ್ಮೀ ಹಾಗೂ ಮಹಾಸರಸ್ವತಿಯನ್ನು ಪೂಜಿಸಲಾಗುತ್ತದೆ. ಇಲ್ಲಿ ಹರಿಯುವ ಬಾಣಗಂಗಾ ನದಿಯ ನೀರಿನಿಂದ ದೇವಿಯನ್ನು ಶುದ್ಧಗೊಳಿಸಲಾಗುತ್ತದೆ. ಪುರಾಣ ತಜ್ಞರ ಪ್ರಕಾರ ದೇವಿಯ ರೂಪವಾಗಿರುವ ವೈಷ್ಣೋದೇವಿಯು ಮಹಾದೇವಿ ಸ್ವರೂಪ ರಚನೆಯಲ್ಲಿ ಅಡಗಿರುವ ಎಲ್ಲ ಶಕ್ತಿಗಳನ್ನು ಹೊಂದಿದ್ದಾಳೆ. ಇನ್ನು ಕೆಲವರ ಪ್ರಕಾರ ಭೈರವನಾಥ್‌ ಎಂಬ ತಾಂತ್ರಿಕನು ಬಾಲಕಿ ವೈಷ್ಣೋದೇವಿಯನ್ನು ಕೃಷಿ ಜಾತ್ರೆಯಲ್ಲಿ ನೋಡಿ ಅವಳಿಗೆ ಮಾರುಹೋಗುತ್ತಾನೆ. ಅವನಿಂದ ತಪ್ಪಿಸಿಕೊಳ್ಳಲು ವೈಷ್ಣೋದೇವಿ ತ್ರಿಕೂಟ ಪರ್ವತವನ್ನೇರುತ್ತಾಳೆ.

ಭೈರವನಾಥ ಆಕೆಯ ಬೆನ್ನು ಬಿಡದೆ ಹಿಂಬಾಲಿಸಿದಾಗ ವೈಷ್ಣೋದೇವಿ ತನ್ನ ಉಗ್ರ ಸ್ವರೂಪವಾದ ದುರ್ಗಾಮಾತೆಯ ಅವತಾರವನ್ನು ತಾಳಿ ಅವನನ್ನು ಸಂಹರಿಸುತ್ತಾಳೆ ಎಂಬ ಕಥೆಯೂ ಇದೆ. ಇನ್ನು ಮಹಾಭಾರತದ ಪ್ರಕಾರ ಕುರುಕ್ಷೇತ್ರ ಯುದ್ಧದ ವೇಳೆ ಅರ್ಜುನನು ದುರ್ಗೆಯನ್ನು ಆರಾಧಿಸಿ ಶತ್ರುಗಳನ್ನೆಲ್ಲ ಹಿಮ್ಮೆಟ್ಟಿಸಿದನು ಎಂಬ ಪ್ರತೀತಿ ಇದೆ. ರಾಮಾಯಣದಲ್ಲೂ ಶ್ರೀ ವೈಷ್ಣೋದೇವಿಗೆ ಸಂಬಂಧಿಸಿ ಕಥೆ ಇದ್ದು ರಾಮನ ಸಲಹೆಯಂತೆ ಆಕೆ ತ್ರಿಕೂಟ ಪರ್ವತದಲ್ಲಿ ನೆಲೆ ನಿಂತು ಭಕ್ತರನ್ನು ಹರಸುತ್ತಿದ್ದಾಳೆ.

ದೇಶದಲ್ಲಿನ ಶಕ್ತಿಮಾತೆಯ ದೇವಾಲಯಗಳಲ್ಲಿ ಅತ್ಯುಚ್ಚ ಸ್ಥಾನವನ್ನು ಪಡೆದಿರುವ ಶ್ರೀ ಮಾತಾ ವೈಷ್ಣೋದೇವಿಯ ದರುಶನಕ್ಕಾಗಿ ಪ್ರತೀ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಇಲ್ಲಿಗೆ ಭೇಟಿ ನೀಡುತ್ತಾರೆ. ನವರಾತ್ರಿ ಹಾಗೂ ದೀಪಾವಳಿ ಯನ್ನು ಬಹಳ ವಿಜೃಂಭಣೆಯಿಂದ ಇಲ್ಲಿ ಆಚರಿಸಲಾಗುತ್ತದೆ. ಪ್ರತೀ ವರ್ಷದ ಆರಂಭ ದಲ್ಲಿ ಸಾವಿರಾರು ಮಂದಿ ದೇಗುಲಕ್ಕೆ ಪಾದಯಾತ್ರೆ ಮೂಲಕ ಆಗಮಿಸಿ ಶ್ರೀ ಮಾತಾ ವೈಷ್ಣೋದೇವಿಯ ದರುಶನ ಪಡೆದು ಪ್ರಾರ್ಥನೆ ಸಲ್ಲಿಸುವ ವಾಡಿಕೆ ಬೆಳೆದು ಬಂದಿದೆ.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.