Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು
ಯಾವುದೋ ಪ್ರಕರಣ ದಾಖಲಿಸಿ ನನ್ನ ಹೆದರಿಸಲಾದೀತೇ?
Team Udayavani, Oct 6, 2024, 6:30 AM IST
ಬೆಂಗಳೂರು: ಕುಮಾರಸ್ವಾಮಿಗೆ ನನ್ನನ್ನು ಕಂಡರೆ ಭಯ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನನ್ನನ್ನು ಹೆದರಿ ಸಲು ಯಾರಿಂದಲೂ ಆಗದು. ನಾನು ಹೆದರುವುದು ದೇವರಿಗೆ ಮತ್ತು ನಾಡಿನ ಜನರಿಗಷ್ಟೇ. ಸಿದ್ದ ರಾಮಯ್ಯನಂಥವರು ಲಕ್ಷ ಜನ ಬಂದರೂ ಹೆದರಲಾರೆ ಎಂದು ಗುಡುಗಿದರು.
ನಿಮ್ಮ ಮೇಲೆ ಎಫ್ಐಆರ್ ಹಾಕಿ ಬೆದರಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅದ್ಯಾವುದೋ ಪ್ರಕರಣ ದಾಖಲಿಸಿಕೊಂಡು ನನ್ನನ್ನು ಹೆದರಿಸಲು ಸಾಧ್ಯವೇ? ಕುಮಾರಸ್ವಾಮಿಗೆ ಬಂಧನದ ಭೀತಿ ಎನ್ನುತ್ತಿದ್ದಾರೆ; ನನಗೆ ಅಂತಹ ಯಾವುದೇ ಭೀತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಎಫ್ಐಆರ್ ದಾಖಲಿಸಿರುವುದು ಬೆದರಿಕೆ ಅಲ್ಲದೆ ಇನ್ನೇನು? ಈಗ ಸರಕಾರ ಮುಡಾ ವಿಷಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ. ಇದು ಎಲ್ಲವನ್ನೂ ಬಿಟ್ಟಿರುವ ಭಂಡ ಸರಕಾರ. ಅದರ ಬಗ್ಗೆ ಚರ್ಚೆ ಮಾಡುವುದರಲ್ಲಿ ಅರ್ಥವಿಲ್ಲ ಎಂದರು.
ಮುಖ್ಯಮಂತ್ರಿ ದೆವ್ವವಾ?
ನಾನು ಭಯ ಪಡಲು ಮುಖ್ಯಮಂತ್ರಿ ಏನಾದರೂ ದೆವ್ವವೇ? ನಾನು ದೆವ್ವಕ್ಕೂ ಹೆದರುವವನಲ್ಲ. ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದು ಕುಮಾರಸ್ವಾಮಿ ಕುಟುಕಿದರು. ನಾನು ಸ್ವತಃ ದುಡಿಮೆಯಿಂದ ರಾಜಕೀಯದಲ್ಲಿ ಮೇಲೆ ಬಂದಿದ್ದೇನೆ; ಸಿದ್ದರಾಮಯ್ಯ ನೆರಳಲ್ಲಿ ಅಲ್ಲ. ಹಾಗೆ ನೋಡಿದರೆ ಸಿದ್ದರಾಮಯ್ಯನವರು ನನ್ನ ಪಕ್ಷದ ಕಾರ್ಯಕರ್ತರು ಮತ್ತು ದೇವೇಗೌಡರ ನೆರಳಿನಲ್ಲಿ ಬಂದವರು ಎಂದು ಹೇಳಿದರು.
ಕುಮಾರಸ್ವಾಮಿ ಹೇಳಿದ್ದೇನು?
ಸಿಎಂ ಸಿದ್ದರಾಮಯ್ಯ ದೆವ್ವನಾ, ನಾನೇಕೆ ಹೆದರಲಿ?
ನನಗೆ ಯಾವುದೇ ಬಂಧನ ಭೀತಿಯೂ ಇಲ್ಲ
ಸರಕಾರದಿಂದ ಮುಡಾ ಕೇಸ್ ಮರೆಮಾಚುವ ಯತ್ನ
ಇದು ಭಂಡ ಸರಕಾರ, ಚರ್ಚೆ ಅನಗತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.