Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

ಸೂರ್ಯನ ಸಮೀಪ ಬಂದು ಹೋಗುವಾಗ ಬೃಹತ್‌ ಬಾಲಬೀಸಿ ವಿಸ್ಮಯ ತೋರಬಹುದು: ಖಗೋಳಶಾಸ್ತ್ರಜ್ಞ ಡಾ.ಎ.ಪಿ.ಭಟ್‌

Team Udayavani, Oct 6, 2024, 7:30 AM IST

Comet

ಉಡುಪಿ: ವರ್ಷದ ಧೂಮಕೇತು ಎಂದು ಭಾವಿಸಲಾಗಿದ್ದ ಸುಚಿನ್ಸನ್‌ – ಅಟ್ಲಾಸ್‌ ಸೆಪ್ಟಂಬರ್‌ ಕೊನೆಯ ವಾರದಲ್ಲಿ ಸೂರ್ಯೋದಯಕ್ಕೆ ಮುನ್ನ ಬರಿಗಣ್ಣಿಗೆ ಕಾಣಿಸಿದೆ. ಸೌರವ್ಯೂಹದ ಹೊರವಲಯ ಊರ್ಷ್‌ ಕ್ಲೌಡ್‌ನಿಂದ (ಸುಮಾರು 3 ಜ್ಯೋತಿರ್ವರ್ಷ =.30 ಟ್ರಿಲಿಯನ್‌ ಕಿ.ಮೀ.) ದೂರದಿಂದ ಹೊರಟ ಈ ಧೂಮಕೇತು, ಸೆಕೆಂಡಿಗೆ ಸುಮಾರು 80 ಕಿ.ಮೀ. ಅತ್ಯಂತ ವೇಗದಲ್ಲಿ ಕ್ರಮಿಸುತ್ತಾ ಸೆ.27ರಂದು ಸೂರ್ಯನನ್ನು ಸಮೀಪಿಸಿ ಹಿಂದಿರುಗಿದೆ.

ಸುಮಾರು 80 ಸಾವಿರ ವರ್ಷಕ್ಕೊಮ್ಮೆ ಸೂರ್ಯನನ್ನು ಸುತ್ತುವ ಈ ಧೂಮಕೇತು ಸೂರ್ಯನಿಂದ ಮರಳುವಾಗ ಅಕ್ಟೋಬರ್‌ 8ರಿಂದ 12ರ ವರೆಗೆ ಸೂರ್ಯಾಸ್ತದ ಬಳಿಕ 20 ನಿಮಿಷಗಳ ಕಾಲ ಪಶ್ಚಿಮ ಆಕಾಶದಲ್ಲಿ ಬರಿಗಣ್ಣಿಗೆ ಕಾಣಿಸಲಿದೆ. ಅದು ಅ. 12ರಂದು ಭೂಮಿಗೆ ಹೆಚ್ಚು ಸಮೀಪದಲ್ಲಿರಲಿದೆ.
2023ರ ಜನವರಿಯಲ್ಲಿ ಇದನ್ನು ದೂರದರ್ಶಕದಲ್ಲಿ ನೋಡಿ 2024 ಸೆಪ್ಟಂಬರ್‌ ಅಕ್ಟೋಬರ್‌ಗೆ ಇದೊಂದು ಶತಮಾನದ ಧೂಮಕೇತುವಾಗಲಿದೆ ಎಂದು ಅಂದಾಜಿಸಲಾಗಿತ್ತಾದರೂ 2024ರ ಫೆಬ್ರವರಿಯಲ್ಲಿ ಇದು ಕಾಣೆಯಾದಾಗ ಸಿಡಿದು ಹೋಯಿತು ಎನ್ನಲಾಗಿತ್ತು. ಈಗ ಇದರ ತುಂಡೋ ಅಥವಾ ಮೂಲ ಧೂಮಕೇತುವೂ ಅಂತೂ ದೂರದರ್ಶಕಕ್ಕೆ ಪುನಃ ಗೋಚರಿಸಿ ಬರಿಗಣ್ಣಿಗೆ ಕಾಣುವ ವರ್ಷದ ಧೂಮಕೇತುವಾಗಲಿದೆ ಎಂದು ಅಂದಾಜಿಸಲಾಗಿದೆ.

ಎರಡನೆಯದು ಸೆ.27ರಂದು ಮೊದಲು ಕಂಡುಬಂದಿರುವ ಸನ್ಗ್ರೇಸರ್‌ ಧೂಮಕೇತು. ಇದು ಅ.28ರಂದು ಸೂರ್ಯನ ಸಮೀಪ ಬರಲಿದೆ. ಇದೊಂದು ಶತಮಾನದ ಸುಂದರ ಧೂಮಕೇತುವಾಗಬಹುದೆಂದು ಅಂದಾಜಿಸಲಾಗಿದೆ. ಈ ರೀತಿಯ ಧೂಮಕೇತುಗಳು ಸೂರ್ಯನಿಗೆ ಅತ್ಯಂತ ಸಮೀಪ ಬರುವುದರಿಂದ ಆಗಲೇ ಸಿಡಿದು ಪುಡಿಪುಡಿಯಾಗಲೂಬಹುದು. ಉಳಿದು ಮರಳಿದರೆ ಬಲು ಚೆಂದ. ಧೂಮಕೇತುಗಳ ಚಲನವಲನ ಹೀಗೆಯೇ ಎನ್ನುವಂತಿಲ್ಲ. ಇವು ಶತಮಾನದ ಧೂಮಕೇತುಗಳಾಗಬಹುದೇ? ಬರಿಗಣ್ಣಿಗೆ ಕಾಣಿಸಿಕೊಂಡು ವರ್ಷದ ಧೂಮಕೇತುವಾದೀತೇ ಮುಂತಾದ ಎಲ್ಲ ಪ್ರಶ್ನೆಗಳಿಗೆ ಕೆಲವು ದಿನಗಳಲ್ಲಿ ಉತ್ತರ ಸಿಗಲಿದೆ.

ಶತಮಾನದ ಧೂಮಕೇತು ಅಂದರೆ ಅದು ಕೆಲವು ತಿಂಗಳು ಆಕಾಶದಲ್ಲಿ ಹೆಚ್ಚು ಪ್ರಕಾಶಮಾನ ವಾಗಿ ಬರಿಗಣ್ಣಿಗೆ ಕಂಡು ವಿಜೃಂಭಿಸುವಂಥವು. ಅದು ತುಂಬಾ ವರ್ಷಗಳ ಅಂತರ ದಲ್ಲಿ ಕಾಣಿಸಿಕೊಳ್ಳುವಂಥವು. ವರ್ಷದ ಧೂಮಕೇತುಗಳೂ ಬರಿಗಣ್ಣಿಗೆ ಕಾಣ ಸಿಗುತ್ತವೆ. ಆದರೆ ಹೆಚ್ಚು ಪ್ರಕಾಶಮಾನವಾಗಿರುವುದಿಲ್ಲ. ಈ ಹಿಂದೆ ಬರಿಗಣ್ಣಿಗೆ ಕಂಡ ಧೂಮಕೇತುಗಳನ್ನು ಗ್ರೇಟ್‌ ಕಾಮೆಟ್‌ ಎಂದು ಹೆಸರಿಸಿದ್ದಾರೆ. 1996ರ ಹಯಾಕುಟಿಕೆ, 1997ರ ಹೇಲ್‌ ಬೂಪ್‌, 2003ರ ನೀಟ್‌, 2007ರ ಮಕ್ನಾಟ್‌, 2011ರ ಲವ್ಜಾಯ್‌, 2020ರ ನಿಯೋವೈಸ್‌ಗಳು.

ಈಗ ಬರುತ್ತಿರುವ ಧೂಮಕೇತುಗಳು ಬರಿಗಣ್ಣಿಗೆ ಕಂಡು ಇವುಗಳ ಸಾಲಿಗೆ ಸೇರಲಿವೆಯೇ ಎಂಬುದನ್ನು ಕಾದು ನೋಡಬೇಕಿದೆ. ಈ ಧೂಮಕೇತುಗಳು ಸೂರ್ಯನ ಸಮೀಪ ಬರುವಾಗ ಬೆಳಗಿನ ಜಾವ ಹಾಗೂ ಮರಳುವಾಗ ಸಂಜೆ ಆಕಾಶದಲ್ಲಿ ಕಾಣಿಸುತ್ತವೆ. ಸೂರ್ಯನ ಸಮೀಪ ಬಂದು ಹೋಗುವಾಗ ಬೃಹತ್‌ ಬಾಲಬೀಸಿ ವಿಸ್ಮಯ ತೋರಬಹುದು. ಬಾಲಗಳಲ್ಲೂ ಎರಡು. ನೀಲಿ ಬಣ್ಣದ ಬಾಲ ಸೂರ್ಯನಿಗೆ ನೇರ ವಿರುದ್ಧ ದಿಕ್ಕಿನಲ್ಲಿದ್ದರೆ, ಮತ್ತೊಂದು ಬಾಲ ಆವಿಯ ಕಣಗಳವಕ್ರ ಬಾಲ. ರಾತ್ರಿ ಆಕಾಶದಲ್ಲಿ ಚಂದ್ರನೇ ಚೆಂದ. ಚಂದ್ರನನ್ನು ಬಿಟ್ಟರೆ ಧೂಮಕೇತುಗಳೇ ಚೆಂದ ಎಂದು ಖಗೋಳಶಾಸ್ತ್ರಜ್ಞ ಡಾ| ಎ.ಪಿ.ಭಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.