New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

ಈ ಬಾರಿ ಗಿರಿಗದ್ದೆಯಲ್ಲಿ ವಾಸ್ತವ್ಯಕ್ಕೆ ನಿರ್ಬಂಧ, ಚಾರಣದ ಮಧ್ಯೆ ಎಲ್ಲೂ ತಂಗಲು ಅವಕಾಶ ಇಲ್ಲ!

Team Udayavani, Oct 6, 2024, 7:52 AM IST

Kumara-Parvatha

ವಿಶೇಷ ವರದಿ:
ಸುಬ್ರಹ್ಮಣ್ಯ: ಪುಷ್ಪಗಿರಿ ಚಾರಣ ಎಂದೂ ಕರೆಯಲ್ಪಡುವ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣ ಅ.6ರಿಂದ ಆರಂಭಗೊಳ್ಳಲಿದೆ. ಆನ್‌ಲೈನ್‌ ಮೂಲಕ ನೋಂದಾಯಿಸಿದವರಿಗೆ ಮಾತ್ರ ಚಾರಣಕ್ಕೆ ಅವಕಾಶ.

ಕುಮಾರ ಪರ್ವತಕ್ಕೆ ಚಾರಣಕ್ಕೆ ಕುಕ್ಕೆ ಸಮೀಪದ ದೇವರಗದ್ದೆಯಿಂದ ಅಥವಾ ಸೋಮವಾರ ಪೇಟೆ ಬಳಿಯಿಂದ ತೆರಳಬಹುದು. ಕಳೆದ ವರ್ಷ ಕುಮಾರಪರ್ವತ ಚಾರಣಕ್ಕೆ ಭಾರೀ ಸಂಖ್ಯೆಯ ಚಾರಣಿಗರು ಆಗಮಿಸಿದ್ದರಿಂದ ಸಮಸ್ಯೆ ಉಂಟಾದ ಕಾರಣ ನಿರ್ದಿಷ್ಟ ಸೀಮಿತ ಚಾರಣಿಗರ ಭೇಟಿಗೆ ಅವಕಾಶ ನೀಡಲಾಗಿತ್ತು. ಬಳಿಕ ಮತ್ತೆ ಮಳೆ ಆರಂಭ, ಬೇಸಗೆಯಿಂದ ಚಾರಣ ನಿರ್ಬಂಧಿಸಿ ಈ ವರ್ಷದಿಂದ ಆನ್‌ಲೈನ್‌ ಬುಕ್ಕಿಂಗ್‌, ಹೊಸ ಮಾರ್ಗಸೂಚಿಯೊಂದಿಗೆ ಪರಿಸರ ಸ್ನೇಹಿ ಚಾರಣಕ್ಕೆ ಅವಕಾಶ ನೀಡುವ ಬಗ್ಗೆ ಕಳೆದ ಬೇಸಗೆಯಲ್ಲಿ ಸುಬ್ರಹ್ಮಣ್ಯದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದರು.

ಆನ್‌ಲೈನ್‌ನಲ್ಲಿ ಬುಕ್ಕಿಂಗ್‌
ಈ ವರ್ಷದಿಂದ ಅರಣ್ಯ ಇಲಾಖೆಯ ಅರಣ್ಯ ವಿಹಾರ ಎಂಬ ವೆಬ್‌ಸೈಟ್‌ನಲ್ಲಿ ನೋಂದಾಯಿಸಿ ಚಾರಣ ಕೈಗೊಳ್ಳಬಹುದು. ದಿನವೊಂದಕ್ಕೆ 335 ಚಾರಣಿಗರಿಗೆ ಮಾತ್ರ ಅವಕಾಶ ಇರಲಿದೆ. ಕುಕ್ಕೆ ಸುಬ್ರಹ್ಮಣ್ಯ – ಕುಮಾರಪರ್ವತ, ಕೊಡಗಿನ ಬೀದಹಳ್ಳಿ – ಕುಮಾರ ಪರ್ವತ – ಬೀದಹಳ್ಳಿ, ಬೀದಹಳ್ಳಿ- ಕುಮಾರ ಪರ್ವತ – ಸುಬ್ರಹ್ಮಣ್ಯ ಎಂಬ ಮೂರು ಆಯ್ಕೆಗಳನ್ನು ಪ್ರವೇಶ ಚಾರಣ ಮಾರ್ಗ ಆಯ್ಕೆ ಆನ್‌ಲೈನ್‌ ಬುಕ್ಕಿಂಗ್‌ನಲ್ಲಿ ಸೂಚಿಸಲಾಗಿದೆ.

ಗಿರಿಗದ್ದೆಯಲ್ಲಿ ತಂಗಲು ನಿರ್ಬಂಧ
ಈ ಹಿಂದೆ ಕುಮಾರ ಪರ್ವತ ಚಾರಣ ಕೈಗೊಳ್ಳುವವರು ಗಿರಿಗದ್ದೆಯಲ್ಲಿ ವಾಸ್ತವ್ಯ ಮಾಡಿ (ತಂಗಿ) ಮರುದಿನ ಬೆಳಗ್ಗೆ ಪರ್ವತದ ಮೇಲಿನ ಸ್ಥಳಕ್ಕೆ ತೆರಳುತ್ತಿದ್ದರು. ಆದರೆ ಈ ಬಾರಿ ಅದಕ್ಕೆ ನಿರ್ಬಂಧಿಸಲಾಗಿದೆ. ಸುಬ್ರಹ್ಮಣ್ಯದ ದೇವರಗದ್ದೆಯ ಕುಮಾರಪರ್ವತ ಚಾರಣ ಪ್ರವೇಶಕ್ಕೆ ಬೆಳಗ್ಗೆ ಗಂಟೆ 6ರಿಂದ 9ರ ಅವಧಿಯಲ್ಲಿ ಪ್ರವೇಶಿಸಬೇಕು.

ಬೆಳಗ್ಗೆ 11 ಗಂಟೆಗೆ ಗಿರಿಗದ್ದೆಯಿಂದ ಮೇಲಿನ ಪ್ರದೇಶಕ್ಕೆ ತೆರಳಬೇಕು. ಸಂಜೆ 6 ಗಂಟೆ ಮೊದಲು ಚಾರಣದಿಂದ ಕಡ್ಡಾಯವಾಗಿ ನಿರ್ಗಮಿಸಬೇಕು. ಚಾರಣದ ಮಧ್ಯೆ ಎಲ್ಲೂ ತಂಗಲು ಅವಕಾಶ ಇರುವುದಿಲ್ಲ ಒಂದೇ ದಿನದಲ್ಲಿ ಮರಳಬೇಕು ಸಹಿತ ಹಲವು ಷರತ್ತುಗಳನ್ನು ಅರಣ್ಯ ಇಲಾಖೆ ವಿಧಿಸಿದೆ. ಗಿರಿಗದ್ದೆಯಲ್ಲಿ ತಂಗಲು ಅವಕಾಶ ಇಲ್ಲವಾದ್ದರಿಂದ ಸುಬ್ರಹ್ಮಣ್ಯದಿಂದ ಸುಮಾರು 12 ಕಿ.ಮೀ. ದೂರದ ಕಠಿನ ಹಾದಿಯ ಪರ್ವತವನ್ನು ಗರಿಷ್ಠ 12 ಗಂಟೆಯೊಳಗೆ (ಬೆಳಗ್ಗೆ 6ರಿಂದ – ಸಂಜೆ 6 ಗಂಟೆ) ವೀಕ್ಷಿಸಿ ಮರಳುವುದು ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Crime

Sulya: ವಾರಂಟ್‌ ಆರೋಪಿ ಪರಾರಿ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.