Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ
ಸುಮಾರು ಹತ್ತಕ್ಕೂ ಅಧಿಕ ಅಡಿಕೆ ಮರ, ದೊಡ್ಡ ತೆಂಗಿನ ಮರಗಳನ್ನೂ ಉರುಳಿಸಿವೆ
Team Udayavani, Oct 6, 2024, 7:20 AM IST
ಬೆಳ್ತಂಗಡಿ: ಶುಕ್ರವಾರ ರಾತ್ರಿ ಧರ್ಮಸ್ಥಳ ಪೊಲಸೊಳಿಕೆ ನಿವಾಸಿ ಕೃಷ್ಣಪ್ಪ ಅವರ ಮನೆಯ ಸಮೀಪದ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ, ಅಡಿಕೆ, ಮರಗೆಣಸು ಮುಂತಾದ ಬೆಳೆಗೆ ಹಾನಿ ಮಾಡಿದೆ. ಮನೆಗಳ ಬಳಿ ಓಡಾಡಿ ಜನರಲ್ಲಿ ಭೀತಿ ಮೂಡಿಸಿದೆ.
ಧರ್ಮಸ್ಥಳ ಕೆ.ಎಸ್.ಆರ್.ಟಿ. ಸಿ. ಬಸ್ ನಿಲ್ದಾಣದ ಬಳಿಯ ಕ್ಸೇವಿಯರ್ ಅವರಿಗೆ ಸೇರಿದ ತೋಟಕ್ಕೆ ನುಗ್ಗಿದ ಕಾಡಾನೆಗಳು ಕೃಷಿಗೆ ಹಾನಿಯುಂಟುಮಾಡಿದೆ. ಇಲ್ಲಿ ಫಸಲು ಬರುವ ಸುಮಾರು ಹತ್ತಕ್ಕೂ ಅಧಿಕ ಅಡಿಕೆ ಮರ, ದೊಡ್ಡ ತೆಂಗಿನ ಮರಗಳನ್ನೂ ಉರುಳಿಸಿದೆ. ಪೈಪ್ಗ್ಳನ್ನು ಸಂಪೂರ್ಣವಾಗಿ ಪುಡಿಗೈದಿದ್ದು ಭಾರೀ ನಷ್ಟ ಸಂಭವಿಸಿದೆ.
ನೇರ್ತನೆ ರಸ್ತೆಯ ಪಕ್ಕದಲ್ಲೇ ಕಾಡಾನೆಗಳು ಓಡಾಡುತ್ತಿರುವುದೂ ಜನರಿಗೆ ಆತಂಕ ಮೂಡಿಸಿದೆ. ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಅವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಿಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ 6 ಕಾಡಾನೆಗಳಿರುವ ಶಂಕೆಯಿದ್ದು, ತೋಟದಲ್ಲಿ ರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ. ಪರಿಸರದಲ್ಲಿ ಒಂಟಿ ಸಲಗ ಸಹಿತ 2ರಿಂದ 3 ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿತ್ತು. ಆದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯರಾದ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.