Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌


Team Udayavani, Oct 6, 2024, 7:53 AM IST

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

ನಟ ಧ್ರುವ ಸರ್ಜಾ (Dhruva Sarja) ಅವರಿಗೆ ಡಬಲ್‌ ಧಮಾಕಾ. ಇಂದು ಅವರ ಹುಟ್ಟುಹಬ್ಬದ ಸಂಭ್ರಮವಾದರೆ, ಬಹುನಿರೀಕ್ಷಿತ “ಮಾರ್ಟಿನ್‌’ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕೂಡಾ ಇಂದು ನಡೆಯಲಿದೆ. ಈ ಮೂಲಕ ಧ್ರುವ ಖುಷಿಯಾಗಿದ್ದಾರೆ. ಇಂದು ದಾವಣಗೆರೆಯಲ್ಲಿ “ಮಾರ್ಟಿನ್‌’ ಚಿತ್ರದ (Martin Movie) ಅದ್ಧೂರಿ ಪ್ರೀ ರಿಲೀಸ್‌ ಇವೆಂಟ್‌ ನಡೆಯಲಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಅಭಿಮಾನಿಗಳನ್ನು ಭೇಟಿಯಾದ ಧ್ರುವ ಸರ್ಜಾ ಇಂದು ದಾವಣಗೆರೆಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಲಿದ್ದಾರೆ.

“ಮಾರ್ಟಿನ್‌’ ಚಿತ್ರ ಅಕ್ಟೋಬರ್‌ 11ರಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ಭರ್ಜರಿ ನಿರೀಕ್ಷೆ ಎಬ್ಬಿಸಿದ ಸಿನಿಮಾವಿದು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು, ಟ್ರೇಲರ್‌, ಟೀಸರ್‌ ಹಿಟ್‌ಲಿಸ್ಟ್‌ ಸೇರುವ ಮೂಲಕ ಚಿತ್ರತಂಡದ ವಿಶ್ವಾಸ ಹೆಚ್ಚಿದೆ.

ಇನ್ನು, ಚಿತ್ರಕ್ಕೆ ತೆಲುಗಿನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ “ಮಾರ್ಟಿನ್‌’ ಜೊತೆ ಕೈ ಜೋಡಿಸಿದೆ. ಅದು ಮೈತ್ರಿ ಮೂವೀ ಮೇಕರ್. “ಪುಷ್ಪಾ’ ಸೇರಿದಂತೆ ಅನೇಕ ಸೂಪರ್‌ ಹಿಟ್‌ ಚಿತ್ರಗಳನ್ನು ನಿರ್ಮಿಸಿರುವ ಈ ಸಂಸ್ಥೆ ಈಗ “ಮಾರ್ಟಿನ್‌’ ಚಿತ್ರದ ವಿತರಣೆಗೆ ಮುಂದಾಗಿದೆ. ನಿಜಾಂ ಏರಿಯಾದ ವಿತರಣೆಯ ಹಕ್ಕನ್ನು ಈ ಸಂಸ್ಥೆ ಪಡೆದುಕೊಂಡಿದೆ. ಇದರ ಜೊತೆಗೆ “ಮಾರ್ಟಿನ್‌’ ವಿತರಣೆಗೆ ಬೇರೆ ಬೇರೆ ಭಾಷೆಗಳ ಪ್ರತಿಷ್ಠಿತ ವಿತರಣಾ ಸಂಸ್ಥೆಗಳು ಮುಂದೆ ಬರುತ್ತಿವೆ. ಉದಯ್‌ ಕೆ. ಮೆಹ್ತಾ ನಿರ್ಮಾಣದಲ್ಲಿ “ಮಾರ್ಟಿನ್‌’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರ 13 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎ.ಪಿ.ಅರ್ಜುನ್‌ ಈ ಸಿನಿಮಾದ ನಿರ್ದೇಶಕರು.

ಧ್ರುವ ಸರ್ಜಾ ಸಿನಿಮಾ ಎಂದರೆ ಅಲ್ಲಿ ಭರ್ಜರಿ ಆ್ಯಕ್ಷನ್‌ಗೆ ಕೊರತೆ ಇರುವುದಿಲ್ಲ. ಆದರೆ, ಈ ಬಾರಿ “ಮಾರ್ಟಿನ್‌’ ಚಿತ್ರ ಆ್ಯಕ್ಷನ್‌ನಲ್ಲಿ ಈ ಹಿಂದಿನ ಸಿನಿಮಾಗಳನ್ನು ಮೀರಿಸಲಿದೆ ಎಂಬುದು ಈಗಾಗಲೇ ಸಿನಿಮಾದ ತುಣುಕುಗಳನ್ನು ನೋಡಿದವರ ಮಾತು. ಅಲ್ಲಿಗೆ “ಮಾರ್ಟಿನ್‌’ ಮಾಸ್‌ ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗುವುದರಲ್ಲಿ ಎರಡು ಮಾತಿಲ್ಲ.

ಇನ್ನು, ಮಾರ್ಟಿನ್‌ ಚಿತ್ರದ ಮೊದಲ ಟ್ರೇಲರ್‌ ಇತ್ತೀಚೆಗೆ ಮುಂಬೈನಲ್ಲಿ ಬಿಡುಗಡೆಯಾಗಿದ್ದು, ಟ್ರೇಲರ್‌ ನೋಡಿ ಖುಷಿಯಾದ ವಿದೇಶಿ ಪತ್ರಕರ್ತರು, ಮೆಚ್ಚುಗೆ ವ್ಯಕ್ತಪಡಿಸುವುದಲ್ಲದೇ, ತಮ್ಮ ದೇಶಗಳಲ್ಲೂ ಮಾರ್ಟಿನ್‌ಗೆ ವ್ಯಾಪಕ ಪ್ರಚಾರ ಹಾಗೂ ಬೆಂಬಲ ನೀಡುವ ಮಾತುಗಳನ್ನಾಡಿದರು. ಜತೆಗೆ ಮಾರ್ಟಿನ್‌ ಕಥೆಯ ಹುಟ್ಟು, ಬೆಳವಣಿಗೆ, ನಟನೆ, ಆ್ಯಕ್ಷನ್‌ ಸೇರಿದಂತೆ ಸಿನಿಮಾದ ಎಲ್ಲ ವಿಭಾಗಗಳ ತಮ್ಮ ಕುತೂಹಲದ ಪ್ರಶ್ನೆಗಳನ್ನು ಧ್ರುವ ಹಾಗೂ ಮಾರ್ಟಿನ್‌ ತಂಡದ ಮುಂದೆ ಇಟ್ಟರು.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.